Homeಅಂಕಣಗಳುಚಂದ್ರೇಗೌಡರ ಕಟ್ಟೆಪುರಾಣ: ವಾಟಿಸ್ಸೆ ಉವಾಚ - ಎಡೂರಪ್ಪ ರಿಯಲಿ ಗ್ರೇಟು!

ಚಂದ್ರೇಗೌಡರ ಕಟ್ಟೆಪುರಾಣ: ವಾಟಿಸ್ಸೆ ಉವಾಚ – ಎಡೂರಪ್ಪ ರಿಯಲಿ ಗ್ರೇಟು!

- Advertisement -
- Advertisement -

‘ಎಡೂರಪ್ಪನ್ನ ಇಳುಸ್ತರಂತೆ ನಿಜವೇನ್ಲ’ ಎಂದಳು ಜುಮ್ಮಿ.
‘ನಿನಿಗ್ಯಾರಕ್ಕ ಹೇಳಿದೊರು’ ಎಂದ ವಾಟಿಸ್ಸೆ.
‘ಯಲ್ಲ ಅಂಗಂತ ಮಾತಾಡತಿದ್ರು ಕಂಡ್ಳ’.
‘ಈ ಟೈಮಲ್ಲಿ ಎಡೂರಪ್ಪನ್ನ ಮುಟ್ಟಕ್ಕಾದತೆ ಯಾವೊ ಪೋಲಿ ಬಡ್ಡೆತ್ತವು ಅಂಗಂದವೆ’ ಎಂದ ಉಗ್ರಿ.
‘ಪೋಲಿ ಬಡ್ಡೆತ್ತವಲ್ಲ ಕಣೊ, ಎಡೂರಪ್ಪ ಮಂತ್ರಿ ಮಾಡ್ತನೆ ಅಂತ ಕಾಯ್ಕಂಡಿದ್ದವಲ್ಲಾ ಅವ್ಯಲ್ಲ ಸೇರಿ ಹಟ್ಟಿರೊ ಗುಲ್ಲು’.
‘ಈ ಟೈಮಲ್ಲಿ ಮಂತ್ರಿ ಮಾಡಿದ್ರೆ ಏನು ಮಾಡ್ಯವೂ’.
‘ಏನು ಮಾಡ್ತರೆ ಅಂತ ಕೇಳ್ತಿಯಾ, ಈಗಾಗ್ಲೆ ಕರೋನದ ಕತೆ ಮುಗುಸ್ತಿವಿ ಅಂತ ಕಿಟ್ಟಲ್ಲಿ ಮೆಡಿಸನ್ನಲಿ ಮಾಸಕಲ್ಲಿ ಮುಕ್ಕತ ಕುಂತಿದ್ದರಂತೆ ಕಣೊ ಉಗ್ರೀ’.
‘ಕೊರೋನಾದಲ್ಲೂ ದುಡ್ಡು ಹ್ವಡಿತರಾ’.
‘ವಾಜಪೇಯಿ ಪ್ರಧಾನಿಯಾಗಿದ್ದಾಗ, ಶವದ ಪೆಟಿಗಲೇ ಹಣ ವಡದಿದ್ರು, ಇನ್ನ ಇದರಲ್ಲಿ ಬುಡ್ತರೇನಕ್ಕ’.
‘ಓಹೊಹೊ, ಕೊರೋನಾದ್ರಲ್ಲಿ ತಿನ್ನದ ನೋಡಕ್ಕಾಗದೆ, ನಮ್ಮನ್ನ ಮಂತ್ರಿ ಮಾಡಿ ಅಂತ ಕೇಳ್ತಾಯಿದ್ದರೆ’.
‘ಊ ಕಣೊ ಉಗ್ರಿ, ಆ ಯತ್ನಾಳ್ ಕತ್ತಿ ಇಂತ ಘಟಾನು ಘಟಿ ನಾಯಕರು, ನಾವು ಮಂತ್ರಿಯಾಗದೆ ಇದ್ರೆ ಕರ್ನಾಟಕ ಉದ್ದಾರಾಗದಿಲ್ಲ ಅನ್ನಂಗೆ ಮಾತಾಡ್ತ ಅವುರೆ’.
‘ಯತ್ನಾಳ ಕತ್ತಿ ತಿರುಗುಸ್ತಯಿದನೆ’.
‘ಯತ್ನಾಳ ಅಂದ್ರೆ ಬಸವನಗೌಡ ಪಾಟೀಲ ಯತ್ನಾಳ ಅಂತ ಬಿಜಾಪುರದ ನಿಜಾಮಿದ್ದಂಗವುನೆ, ನೋಡಕ್ಕೆ ಸಾಬರಂಗವುನೆ ಆದ್ರೆ ಲಿಂಗಾಯಿತ್ರೊನು. ಅವುನಿಗೆ ಸಾಬರ ಕಂಡ್ರಾಗದಿಲ್ಲ’.
‘ಯಾಕೇ?’.
‘ಬಿಜಾಪುರದಲ್ಲಿ ಇಜಾರದೋರು ಹಜಾರಮಂದಿ ಅಂತ ಸಾಬರ ಜಾಸ್ತಿಯಲವೆ. ಅದಕ್ಕೆ ಅವುರ ಕಂಡ್ರೆ ಕ್ಯಂಡ ಕಾರತನೆ ಕಣಕ್ಕ’.
‘ಅದೆ ಯಾಕೆ ಅಂದೆ’.
‘ಯಾಕೆ ಅಂದ್ರೆ, ಈ ಬಿಜೆಪಿಲಿ ಯಾರು ಜಾಸ್ತಿ ಸಾಬರನ್ನ ಬೈತರೊ ಅವುರು ನಮ್ಮ ಪಾರ್ಟಿಗೆ ಲಗತ್ತಾದ ಲೀಡ್ರು ಅಂತ ತಿಳಕಂಡರಂತೆ, ಅದು ಗೊತ್ತಾಗಿ ಆ ಅನಂತಕುಮಾರ ಹೆಗಡೆ ಅನ್ನೊ ಮೂರ್ಖ, ರೇಣುಕಾಚಾರಿ ಅನ್ನೊ ಕಾಮುಕ, ಈ ಯತ್ನಾಳ್ ಅನ್ನೊ ಯಬಡ ಇವ್ರ್ಯಲ್ಲ ಸಾಬರನ ಬಾಯಿಗೆ ಬಂದಂತೆ ಬೈತರೆ ಕಣಕ್ಕ’.
‘ಅಂಗ್ಯಲ್ಲ ಬೈಬಾರ್ದು ಕಂಡ್ಳ. ಬೋದುದ್ದು ಬರ್ಲಾಯ್ತು. ಬೈಸಿಗಂಡೋನು ಬಸವಣ್ಣಾದ ಅಂತ ಗಾದೆ ಮಾತೆ ಅದೆ’.
‘ಅದಿವುನಿಗೆ ಗೊತ್ತಾಗಬೇಕಲ್ಲ ಹೇಳು. ಆ ಬಿಜಾಪುರದ ಸಾಬರು ಬ್ಯಾರೆ ಕಡೆ ಸಾಬರತರ ಅಲ್ಲ ಬಸವ ಜಯಂತಿ ಮ್ಯರವಣಿಗೆಗೊ ಬಂದರಂತೆ’.
‘ಮತ್ತೆ ಅಂತ ಜಾಗದ ಯಮ್ಮೆಲ್ಲೆ ಆಗಿ ಹಿಂಗೆ ಮಾತಾಡಕ್ಕೆ ನಾಚಗೆ ಆಗಬೇಕು ಕಣೊ ಅವುನಿಗೆ’ ಎಂದ ಉಗ್ರಿ.
‘ನಾಚಿಕೆ ಅನ್ನೊ ಪದ ಬಿಜೆಪಿ ಡಿಕ್ಸ್‍ನರಿಲೆ ಇಲ್ಲ ಕಣೊ ಉಗ್ರಿ. ಆ ಎ.ಕೆ.ಸುಬ್ಬಯ್ಯ, ಶಿವಪ್ಪ ಅವುರ್ಯಲ್ಲ ಅಧ್ಯಕ್ಷರಾಗಿದ್ದಾಗ ನಾಚಿಕೆ ಒಂದಿಷ್ಟು ಆ ಪಾರ್ಟಿಲಿತ್ತು. ಅಮ್ಯಾಲೆ ಇದ್ಯಾಕೊ ಸರಿಯಾಗದಿಲ್ಲ ಅಂತ ಅದ ಬುಟ್ರು. ಹಿಂಗಾದ್ರು’.
‘ಯತ್ನಾಳ ಮದ್ಲಂಗಿರಲಿಲ್ಲ ಅಲವೆ’ ಎಂದ ಉಗ್ರಿ.
‘ಇರಲಿಲ್ಲ ಎತ್ತರಕ್ಕೆ ಹ್ಯಾಂಡಸಮ್ಮಾಗಿದ್ದ. ಅದ ನೋಡಿ ವಾಜಪೇಯಿ ವಳ್ಳೆ ಮನ್ಸ ಅಂತ ತಿಳಕಂಡು ಮಂತ್ರಿನೂ ಮಾಡಿದ್ರು. ಆದ್ರಿವತ್ತು ಇವುನ್ಯಂಥಾ ಮಂತ್ರಿಯಾಗಿದ್ದ ಅಂತ ಅವುನೇ ಹೇಳಿ ಕಂಡು ತಿರುಗಂಗಾಗ್ಯದೆ’.
‘ಎಡೂರಪ್ಪ ಇವುನ್ನ ಮಂತ್ರಿ ಮಾಡ್ಯನೆ’.
‘ಡವುಟು ಕಣೊ ಉಗ್ರಿ. ಯಾಕಂದ್ರೆ ಈ ಯತ್ನಾಳ ಮದ್ಲಿಂದ ಎಡೂರಪ್ಪನ್ನ ವಿರೋದಿಸಿಕೊಂಡು ಬಂದೊನು. ಮದ್ಲು ಎಡೂರಪ್ಪ ಮುಖ್ಯಮಂತ್ರಿಯಾದಾಗ, ಇದೇ ಯತ್ನಾಳ ಶೋಭ ಕರಂದ್ಲಾಜೆಯಿಂದ ಎಡೂರಪ್ಪ ಹಾಳಾಯ್ತ ಅವುರೆ, ಮೊದ್ಲು ಅವುಳ ಸವಾಸ ಬುಡಬೇಕು ಅಂದಿದ್ದ’.
‘ನಿಜವೇನ್ಲ ನೀನೇಳದು’ ಎಂದಳು ಜುಮ್ಮಿ.
‘ನಾನ್ಯಾಕಕ್ಕ ಸುಳ್ಳೇಳ್ಳಿ, ಇನ್ನ ಒಂದು ಮಾತಂದಿದ್ದ ಅದು ಹೆಚ್ಚು ಪ್ರಚಾರ ತಗಳ್ಳಿಲ್ಲ. ಏನಪ್ಪ ಅಂದ್ರೆ ಈ ಬಿಜೆಪಿಯಿಂದ ಲಿಂಗಾಯಿತ ಧರ್ಮ ಹಾಳಾಯ್ತದೆ. ಅದರಿಂದ ಅಂದ್ರೆ ಬಿಜೆಪಿವಳಗಿಂದ ಲಿಂಗಾಯಿತ ಧರ್ಮ ಬ್ಯಾರೆ ಮಾಡಬೇಕು ಅಂದಿದ್ದ’.
‘ಮತ್ತೆ ಅಂಥೋನ್ಯಾಕೆ ಹಿಂಗಾಗ್ಯವುನೆ’.
‘ಪಾರ್ಟಿ ಅಂಗೆ ಮಾಡುಸ್ತವೆ ಕಣೊ. ಈಗವುನ್ನ ಬಿಜೆಪಿಯಿಂದ ತಗದಾಕ್ಲಿ ಪ್ಲೇಟ ಬದಲಾಸ್ತೆಯಿದ್ರು ಕೇಳು’.
‘ನೀನೇಳದು ನಿಜ ಕಣೊ. ಈಗಾಗ್ಲೆ ವಿಶ್ವನಾಥನ ಮಾತೇ ಬದಲಾಗ್ಯದೆ’.
‘ಅದೋಗ್ಲಿ ಕಣೊ, ಇದೇ ಎಡೂರಪ್ಪ ಕೆಜೆಪಿ ಮಾಡಿದಾಗ ಇನ್ನ ಬಿಜೆಪಿ ಸವಾಸಕ್ಕೆ ಹೋಗದಿಲ್ಲ ಅಂದಿದ್ದ’.
‘ನೋಡು ಮತ್ತೆ’.
‘ಲ್ಯಕ್ಕ ಹಾಕು ಅದೇ ಇವತ್ತು ಬಿಜೆಪಿ ಲೀಡ್ರು ಮುಖ್ಯಮಂತ್ರಿ ಇದಕೇನೇಳನ’.
‘ಏನೇ ಅದ್ರು ಪಾಪ ಎಡೂರಪ್ಪ ಭಾಳ ಅನುಭವಿಸಿ ಬುಟ್ಟ ಕಂಡ್ಳ’.
‘ನಿಜ ಕಣಕ್ಕ ಮುಖ್ಯಮಂತ್ರಿ ಕುರ್ಚಿ ಮ್ಯಾಲೆ ಕುಂತಗಂಡು ಇವುನಷ್ಟು ಗೋಳಾಡಿದೋರೆ ಇಲ್ಲ. ಇವತ್ತಿಗೂ ಅವುನ ಮಕ ನೋಡಿದ್ರೆ ಯಾರಿಗೆ ಬೇಕಪ್ಪ ಆ ಸ್ಥಾನ ಅನ್ನಂಗೆ ಕಾಣ್ತನೆ’.
‘ಆದ್ರು ಅವುನ ಸಾಧನೆ ಯಾರೂ ಮಾಡಕ್ಕಾಗದಿಲ್ಲ ಕಣೋ ವಾಟಿಸ್ಸೆ’.
‘ಡೆವಲಪ್‍ಮೆಂಟ್ ವರಕಲ್ಲಾ’.
‘ವರಕಲ್ಲ ಕಣೊ ಅವುನು ಮದ್ಲಿಗೆ ಕುಮಾರಸ್ವಾಮಿಯ ಮುಖ್ಯಮಂತ್ರಿ ಮಾಡಿದ. ಅಮ್ಯಾಲೆ ತಾನಾದ. ಆ ಶೋಭ ಕರಂದ್ಲಾಜೆ ಕಾಟ ತಾಳಕ್ಕಾಗದೆ ಇಳಿಸಿ ಸದಾನಂದಗೌಡಾಗಂಗಾಯ್ತು. ಅಮ್ಯಾಲೆ ಜಗದೀಶ್ ಶೆಟ್ಟರ್‍ನ ಮಾಡಿದ. ಬಿಜೆಪಿ ಬುಟ್ಟೊಗಿ ಕೆಜೆಪಿ ಮಾಡಿ ಸಿದ್ದರಾಮಯ್ಯನ್ನ ಮುಖ್ಯಮಂತ್ರಿ ಮಾಡಿದ. ತಿರಗ ಬಿಜೆಪಿಗೆ ಬಂದು ತಾನು ಆದ. ಮೂರು ದಿನ ಬುಟಗಂಡು ಕುಮಾರಸ್ವಾಮಿ ಆದ. ಅವುನ್ನ ಅತ್ತಗೆ ಉಂಡಿಸಿ ತಿರುಗ ತಾನೇ ಮುಖ್ಯಮಂತ್ರಿಯಾದ. ಇಂತ ಸಾಧನೆಯ ಯಾವ ರಾಜಕಾರಣಿ ಮಾಡ್ಯವುನೆ ತೋರು’.
‘ಇಲ್ಲ ಕಣೊ ಉಗ್ರಿ, ಆ ವಿಷಯದಲ್ಲಿ ಎಡೂರಪ್ಪ ಗ್ರೇಟ್’.
‘ಈಗ್ಯಾರ್ನು ಮಾಡ್ತನೆ’.
‘ಬಿಜೆಪಿನೆ ಉಡಾಯಿಸ್ತನೆ’.
‘!?’


ಇದನ್ನು ಓದಿ: ಕವನ | ಅಂತಿಮ ವಲಸೆಯ ಮುನ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...