Homeಅಂಕಣಗಳುಚಂದ್ರೇಗೌಡರ ಕಟ್ಟೆಪುರಾಣ: ವಾಟಿಸ್ಸೆ ಉವಾಚ - ಎಡೂರಪ್ಪ ರಿಯಲಿ ಗ್ರೇಟು!

ಚಂದ್ರೇಗೌಡರ ಕಟ್ಟೆಪುರಾಣ: ವಾಟಿಸ್ಸೆ ಉವಾಚ – ಎಡೂರಪ್ಪ ರಿಯಲಿ ಗ್ರೇಟು!

- Advertisement -
- Advertisement -

‘ಎಡೂರಪ್ಪನ್ನ ಇಳುಸ್ತರಂತೆ ನಿಜವೇನ್ಲ’ ಎಂದಳು ಜುಮ್ಮಿ.
‘ನಿನಿಗ್ಯಾರಕ್ಕ ಹೇಳಿದೊರು’ ಎಂದ ವಾಟಿಸ್ಸೆ.
‘ಯಲ್ಲ ಅಂಗಂತ ಮಾತಾಡತಿದ್ರು ಕಂಡ್ಳ’.
‘ಈ ಟೈಮಲ್ಲಿ ಎಡೂರಪ್ಪನ್ನ ಮುಟ್ಟಕ್ಕಾದತೆ ಯಾವೊ ಪೋಲಿ ಬಡ್ಡೆತ್ತವು ಅಂಗಂದವೆ’ ಎಂದ ಉಗ್ರಿ.
‘ಪೋಲಿ ಬಡ್ಡೆತ್ತವಲ್ಲ ಕಣೊ, ಎಡೂರಪ್ಪ ಮಂತ್ರಿ ಮಾಡ್ತನೆ ಅಂತ ಕಾಯ್ಕಂಡಿದ್ದವಲ್ಲಾ ಅವ್ಯಲ್ಲ ಸೇರಿ ಹಟ್ಟಿರೊ ಗುಲ್ಲು’.
‘ಈ ಟೈಮಲ್ಲಿ ಮಂತ್ರಿ ಮಾಡಿದ್ರೆ ಏನು ಮಾಡ್ಯವೂ’.
‘ಏನು ಮಾಡ್ತರೆ ಅಂತ ಕೇಳ್ತಿಯಾ, ಈಗಾಗ್ಲೆ ಕರೋನದ ಕತೆ ಮುಗುಸ್ತಿವಿ ಅಂತ ಕಿಟ್ಟಲ್ಲಿ ಮೆಡಿಸನ್ನಲಿ ಮಾಸಕಲ್ಲಿ ಮುಕ್ಕತ ಕುಂತಿದ್ದರಂತೆ ಕಣೊ ಉಗ್ರೀ’.
‘ಕೊರೋನಾದಲ್ಲೂ ದುಡ್ಡು ಹ್ವಡಿತರಾ’.
‘ವಾಜಪೇಯಿ ಪ್ರಧಾನಿಯಾಗಿದ್ದಾಗ, ಶವದ ಪೆಟಿಗಲೇ ಹಣ ವಡದಿದ್ರು, ಇನ್ನ ಇದರಲ್ಲಿ ಬುಡ್ತರೇನಕ್ಕ’.
‘ಓಹೊಹೊ, ಕೊರೋನಾದ್ರಲ್ಲಿ ತಿನ್ನದ ನೋಡಕ್ಕಾಗದೆ, ನಮ್ಮನ್ನ ಮಂತ್ರಿ ಮಾಡಿ ಅಂತ ಕೇಳ್ತಾಯಿದ್ದರೆ’.
‘ಊ ಕಣೊ ಉಗ್ರಿ, ಆ ಯತ್ನಾಳ್ ಕತ್ತಿ ಇಂತ ಘಟಾನು ಘಟಿ ನಾಯಕರು, ನಾವು ಮಂತ್ರಿಯಾಗದೆ ಇದ್ರೆ ಕರ್ನಾಟಕ ಉದ್ದಾರಾಗದಿಲ್ಲ ಅನ್ನಂಗೆ ಮಾತಾಡ್ತ ಅವುರೆ’.
‘ಯತ್ನಾಳ ಕತ್ತಿ ತಿರುಗುಸ್ತಯಿದನೆ’.
‘ಯತ್ನಾಳ ಅಂದ್ರೆ ಬಸವನಗೌಡ ಪಾಟೀಲ ಯತ್ನಾಳ ಅಂತ ಬಿಜಾಪುರದ ನಿಜಾಮಿದ್ದಂಗವುನೆ, ನೋಡಕ್ಕೆ ಸಾಬರಂಗವುನೆ ಆದ್ರೆ ಲಿಂಗಾಯಿತ್ರೊನು. ಅವುನಿಗೆ ಸಾಬರ ಕಂಡ್ರಾಗದಿಲ್ಲ’.
‘ಯಾಕೇ?’.
‘ಬಿಜಾಪುರದಲ್ಲಿ ಇಜಾರದೋರು ಹಜಾರಮಂದಿ ಅಂತ ಸಾಬರ ಜಾಸ್ತಿಯಲವೆ. ಅದಕ್ಕೆ ಅವುರ ಕಂಡ್ರೆ ಕ್ಯಂಡ ಕಾರತನೆ ಕಣಕ್ಕ’.
‘ಅದೆ ಯಾಕೆ ಅಂದೆ’.
‘ಯಾಕೆ ಅಂದ್ರೆ, ಈ ಬಿಜೆಪಿಲಿ ಯಾರು ಜಾಸ್ತಿ ಸಾಬರನ್ನ ಬೈತರೊ ಅವುರು ನಮ್ಮ ಪಾರ್ಟಿಗೆ ಲಗತ್ತಾದ ಲೀಡ್ರು ಅಂತ ತಿಳಕಂಡರಂತೆ, ಅದು ಗೊತ್ತಾಗಿ ಆ ಅನಂತಕುಮಾರ ಹೆಗಡೆ ಅನ್ನೊ ಮೂರ್ಖ, ರೇಣುಕಾಚಾರಿ ಅನ್ನೊ ಕಾಮುಕ, ಈ ಯತ್ನಾಳ್ ಅನ್ನೊ ಯಬಡ ಇವ್ರ್ಯಲ್ಲ ಸಾಬರನ ಬಾಯಿಗೆ ಬಂದಂತೆ ಬೈತರೆ ಕಣಕ್ಕ’.
‘ಅಂಗ್ಯಲ್ಲ ಬೈಬಾರ್ದು ಕಂಡ್ಳ. ಬೋದುದ್ದು ಬರ್ಲಾಯ್ತು. ಬೈಸಿಗಂಡೋನು ಬಸವಣ್ಣಾದ ಅಂತ ಗಾದೆ ಮಾತೆ ಅದೆ’.
‘ಅದಿವುನಿಗೆ ಗೊತ್ತಾಗಬೇಕಲ್ಲ ಹೇಳು. ಆ ಬಿಜಾಪುರದ ಸಾಬರು ಬ್ಯಾರೆ ಕಡೆ ಸಾಬರತರ ಅಲ್ಲ ಬಸವ ಜಯಂತಿ ಮ್ಯರವಣಿಗೆಗೊ ಬಂದರಂತೆ’.
‘ಮತ್ತೆ ಅಂತ ಜಾಗದ ಯಮ್ಮೆಲ್ಲೆ ಆಗಿ ಹಿಂಗೆ ಮಾತಾಡಕ್ಕೆ ನಾಚಗೆ ಆಗಬೇಕು ಕಣೊ ಅವುನಿಗೆ’ ಎಂದ ಉಗ್ರಿ.
‘ನಾಚಿಕೆ ಅನ್ನೊ ಪದ ಬಿಜೆಪಿ ಡಿಕ್ಸ್‍ನರಿಲೆ ಇಲ್ಲ ಕಣೊ ಉಗ್ರಿ. ಆ ಎ.ಕೆ.ಸುಬ್ಬಯ್ಯ, ಶಿವಪ್ಪ ಅವುರ್ಯಲ್ಲ ಅಧ್ಯಕ್ಷರಾಗಿದ್ದಾಗ ನಾಚಿಕೆ ಒಂದಿಷ್ಟು ಆ ಪಾರ್ಟಿಲಿತ್ತು. ಅಮ್ಯಾಲೆ ಇದ್ಯಾಕೊ ಸರಿಯಾಗದಿಲ್ಲ ಅಂತ ಅದ ಬುಟ್ರು. ಹಿಂಗಾದ್ರು’.
‘ಯತ್ನಾಳ ಮದ್ಲಂಗಿರಲಿಲ್ಲ ಅಲವೆ’ ಎಂದ ಉಗ್ರಿ.
‘ಇರಲಿಲ್ಲ ಎತ್ತರಕ್ಕೆ ಹ್ಯಾಂಡಸಮ್ಮಾಗಿದ್ದ. ಅದ ನೋಡಿ ವಾಜಪೇಯಿ ವಳ್ಳೆ ಮನ್ಸ ಅಂತ ತಿಳಕಂಡು ಮಂತ್ರಿನೂ ಮಾಡಿದ್ರು. ಆದ್ರಿವತ್ತು ಇವುನ್ಯಂಥಾ ಮಂತ್ರಿಯಾಗಿದ್ದ ಅಂತ ಅವುನೇ ಹೇಳಿ ಕಂಡು ತಿರುಗಂಗಾಗ್ಯದೆ’.
‘ಎಡೂರಪ್ಪ ಇವುನ್ನ ಮಂತ್ರಿ ಮಾಡ್ಯನೆ’.
‘ಡವುಟು ಕಣೊ ಉಗ್ರಿ. ಯಾಕಂದ್ರೆ ಈ ಯತ್ನಾಳ ಮದ್ಲಿಂದ ಎಡೂರಪ್ಪನ್ನ ವಿರೋದಿಸಿಕೊಂಡು ಬಂದೊನು. ಮದ್ಲು ಎಡೂರಪ್ಪ ಮುಖ್ಯಮಂತ್ರಿಯಾದಾಗ, ಇದೇ ಯತ್ನಾಳ ಶೋಭ ಕರಂದ್ಲಾಜೆಯಿಂದ ಎಡೂರಪ್ಪ ಹಾಳಾಯ್ತ ಅವುರೆ, ಮೊದ್ಲು ಅವುಳ ಸವಾಸ ಬುಡಬೇಕು ಅಂದಿದ್ದ’.
‘ನಿಜವೇನ್ಲ ನೀನೇಳದು’ ಎಂದಳು ಜುಮ್ಮಿ.
‘ನಾನ್ಯಾಕಕ್ಕ ಸುಳ್ಳೇಳ್ಳಿ, ಇನ್ನ ಒಂದು ಮಾತಂದಿದ್ದ ಅದು ಹೆಚ್ಚು ಪ್ರಚಾರ ತಗಳ್ಳಿಲ್ಲ. ಏನಪ್ಪ ಅಂದ್ರೆ ಈ ಬಿಜೆಪಿಯಿಂದ ಲಿಂಗಾಯಿತ ಧರ್ಮ ಹಾಳಾಯ್ತದೆ. ಅದರಿಂದ ಅಂದ್ರೆ ಬಿಜೆಪಿವಳಗಿಂದ ಲಿಂಗಾಯಿತ ಧರ್ಮ ಬ್ಯಾರೆ ಮಾಡಬೇಕು ಅಂದಿದ್ದ’.
‘ಮತ್ತೆ ಅಂಥೋನ್ಯಾಕೆ ಹಿಂಗಾಗ್ಯವುನೆ’.
‘ಪಾರ್ಟಿ ಅಂಗೆ ಮಾಡುಸ್ತವೆ ಕಣೊ. ಈಗವುನ್ನ ಬಿಜೆಪಿಯಿಂದ ತಗದಾಕ್ಲಿ ಪ್ಲೇಟ ಬದಲಾಸ್ತೆಯಿದ್ರು ಕೇಳು’.
‘ನೀನೇಳದು ನಿಜ ಕಣೊ. ಈಗಾಗ್ಲೆ ವಿಶ್ವನಾಥನ ಮಾತೇ ಬದಲಾಗ್ಯದೆ’.
‘ಅದೋಗ್ಲಿ ಕಣೊ, ಇದೇ ಎಡೂರಪ್ಪ ಕೆಜೆಪಿ ಮಾಡಿದಾಗ ಇನ್ನ ಬಿಜೆಪಿ ಸವಾಸಕ್ಕೆ ಹೋಗದಿಲ್ಲ ಅಂದಿದ್ದ’.
‘ನೋಡು ಮತ್ತೆ’.
‘ಲ್ಯಕ್ಕ ಹಾಕು ಅದೇ ಇವತ್ತು ಬಿಜೆಪಿ ಲೀಡ್ರು ಮುಖ್ಯಮಂತ್ರಿ ಇದಕೇನೇಳನ’.
‘ಏನೇ ಅದ್ರು ಪಾಪ ಎಡೂರಪ್ಪ ಭಾಳ ಅನುಭವಿಸಿ ಬುಟ್ಟ ಕಂಡ್ಳ’.
‘ನಿಜ ಕಣಕ್ಕ ಮುಖ್ಯಮಂತ್ರಿ ಕುರ್ಚಿ ಮ್ಯಾಲೆ ಕುಂತಗಂಡು ಇವುನಷ್ಟು ಗೋಳಾಡಿದೋರೆ ಇಲ್ಲ. ಇವತ್ತಿಗೂ ಅವುನ ಮಕ ನೋಡಿದ್ರೆ ಯಾರಿಗೆ ಬೇಕಪ್ಪ ಆ ಸ್ಥಾನ ಅನ್ನಂಗೆ ಕಾಣ್ತನೆ’.
‘ಆದ್ರು ಅವುನ ಸಾಧನೆ ಯಾರೂ ಮಾಡಕ್ಕಾಗದಿಲ್ಲ ಕಣೋ ವಾಟಿಸ್ಸೆ’.
‘ಡೆವಲಪ್‍ಮೆಂಟ್ ವರಕಲ್ಲಾ’.
‘ವರಕಲ್ಲ ಕಣೊ ಅವುನು ಮದ್ಲಿಗೆ ಕುಮಾರಸ್ವಾಮಿಯ ಮುಖ್ಯಮಂತ್ರಿ ಮಾಡಿದ. ಅಮ್ಯಾಲೆ ತಾನಾದ. ಆ ಶೋಭ ಕರಂದ್ಲಾಜೆ ಕಾಟ ತಾಳಕ್ಕಾಗದೆ ಇಳಿಸಿ ಸದಾನಂದಗೌಡಾಗಂಗಾಯ್ತು. ಅಮ್ಯಾಲೆ ಜಗದೀಶ್ ಶೆಟ್ಟರ್‍ನ ಮಾಡಿದ. ಬಿಜೆಪಿ ಬುಟ್ಟೊಗಿ ಕೆಜೆಪಿ ಮಾಡಿ ಸಿದ್ದರಾಮಯ್ಯನ್ನ ಮುಖ್ಯಮಂತ್ರಿ ಮಾಡಿದ. ತಿರಗ ಬಿಜೆಪಿಗೆ ಬಂದು ತಾನು ಆದ. ಮೂರು ದಿನ ಬುಟಗಂಡು ಕುಮಾರಸ್ವಾಮಿ ಆದ. ಅವುನ್ನ ಅತ್ತಗೆ ಉಂಡಿಸಿ ತಿರುಗ ತಾನೇ ಮುಖ್ಯಮಂತ್ರಿಯಾದ. ಇಂತ ಸಾಧನೆಯ ಯಾವ ರಾಜಕಾರಣಿ ಮಾಡ್ಯವುನೆ ತೋರು’.
‘ಇಲ್ಲ ಕಣೊ ಉಗ್ರಿ, ಆ ವಿಷಯದಲ್ಲಿ ಎಡೂರಪ್ಪ ಗ್ರೇಟ್’.
‘ಈಗ್ಯಾರ್ನು ಮಾಡ್ತನೆ’.
‘ಬಿಜೆಪಿನೆ ಉಡಾಯಿಸ್ತನೆ’.
‘!?’


ಇದನ್ನು ಓದಿ: ಕವನ | ಅಂತಿಮ ವಲಸೆಯ ಮುನ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...