Homeಅಂಕಣಗಳುಚಂದ್ರೇಗೌಡರ ಕಟ್ಟೆಪುರಾಣ: ವಾಟಿಸ್ಸೆ ಉವಾಚ - ಎಡೂರಪ್ಪ ರಿಯಲಿ ಗ್ರೇಟು!

ಚಂದ್ರೇಗೌಡರ ಕಟ್ಟೆಪುರಾಣ: ವಾಟಿಸ್ಸೆ ಉವಾಚ – ಎಡೂರಪ್ಪ ರಿಯಲಿ ಗ್ರೇಟು!

- Advertisement -
- Advertisement -

‘ಎಡೂರಪ್ಪನ್ನ ಇಳುಸ್ತರಂತೆ ನಿಜವೇನ್ಲ’ ಎಂದಳು ಜುಮ್ಮಿ.
‘ನಿನಿಗ್ಯಾರಕ್ಕ ಹೇಳಿದೊರು’ ಎಂದ ವಾಟಿಸ್ಸೆ.
‘ಯಲ್ಲ ಅಂಗಂತ ಮಾತಾಡತಿದ್ರು ಕಂಡ್ಳ’.
‘ಈ ಟೈಮಲ್ಲಿ ಎಡೂರಪ್ಪನ್ನ ಮುಟ್ಟಕ್ಕಾದತೆ ಯಾವೊ ಪೋಲಿ ಬಡ್ಡೆತ್ತವು ಅಂಗಂದವೆ’ ಎಂದ ಉಗ್ರಿ.
‘ಪೋಲಿ ಬಡ್ಡೆತ್ತವಲ್ಲ ಕಣೊ, ಎಡೂರಪ್ಪ ಮಂತ್ರಿ ಮಾಡ್ತನೆ ಅಂತ ಕಾಯ್ಕಂಡಿದ್ದವಲ್ಲಾ ಅವ್ಯಲ್ಲ ಸೇರಿ ಹಟ್ಟಿರೊ ಗುಲ್ಲು’.
‘ಈ ಟೈಮಲ್ಲಿ ಮಂತ್ರಿ ಮಾಡಿದ್ರೆ ಏನು ಮಾಡ್ಯವೂ’.
‘ಏನು ಮಾಡ್ತರೆ ಅಂತ ಕೇಳ್ತಿಯಾ, ಈಗಾಗ್ಲೆ ಕರೋನದ ಕತೆ ಮುಗುಸ್ತಿವಿ ಅಂತ ಕಿಟ್ಟಲ್ಲಿ ಮೆಡಿಸನ್ನಲಿ ಮಾಸಕಲ್ಲಿ ಮುಕ್ಕತ ಕುಂತಿದ್ದರಂತೆ ಕಣೊ ಉಗ್ರೀ’.
‘ಕೊರೋನಾದಲ್ಲೂ ದುಡ್ಡು ಹ್ವಡಿತರಾ’.
‘ವಾಜಪೇಯಿ ಪ್ರಧಾನಿಯಾಗಿದ್ದಾಗ, ಶವದ ಪೆಟಿಗಲೇ ಹಣ ವಡದಿದ್ರು, ಇನ್ನ ಇದರಲ್ಲಿ ಬುಡ್ತರೇನಕ್ಕ’.
‘ಓಹೊಹೊ, ಕೊರೋನಾದ್ರಲ್ಲಿ ತಿನ್ನದ ನೋಡಕ್ಕಾಗದೆ, ನಮ್ಮನ್ನ ಮಂತ್ರಿ ಮಾಡಿ ಅಂತ ಕೇಳ್ತಾಯಿದ್ದರೆ’.
‘ಊ ಕಣೊ ಉಗ್ರಿ, ಆ ಯತ್ನಾಳ್ ಕತ್ತಿ ಇಂತ ಘಟಾನು ಘಟಿ ನಾಯಕರು, ನಾವು ಮಂತ್ರಿಯಾಗದೆ ಇದ್ರೆ ಕರ್ನಾಟಕ ಉದ್ದಾರಾಗದಿಲ್ಲ ಅನ್ನಂಗೆ ಮಾತಾಡ್ತ ಅವುರೆ’.
‘ಯತ್ನಾಳ ಕತ್ತಿ ತಿರುಗುಸ್ತಯಿದನೆ’.
‘ಯತ್ನಾಳ ಅಂದ್ರೆ ಬಸವನಗೌಡ ಪಾಟೀಲ ಯತ್ನಾಳ ಅಂತ ಬಿಜಾಪುರದ ನಿಜಾಮಿದ್ದಂಗವುನೆ, ನೋಡಕ್ಕೆ ಸಾಬರಂಗವುನೆ ಆದ್ರೆ ಲಿಂಗಾಯಿತ್ರೊನು. ಅವುನಿಗೆ ಸಾಬರ ಕಂಡ್ರಾಗದಿಲ್ಲ’.
‘ಯಾಕೇ?’.
‘ಬಿಜಾಪುರದಲ್ಲಿ ಇಜಾರದೋರು ಹಜಾರಮಂದಿ ಅಂತ ಸಾಬರ ಜಾಸ್ತಿಯಲವೆ. ಅದಕ್ಕೆ ಅವುರ ಕಂಡ್ರೆ ಕ್ಯಂಡ ಕಾರತನೆ ಕಣಕ್ಕ’.
‘ಅದೆ ಯಾಕೆ ಅಂದೆ’.
‘ಯಾಕೆ ಅಂದ್ರೆ, ಈ ಬಿಜೆಪಿಲಿ ಯಾರು ಜಾಸ್ತಿ ಸಾಬರನ್ನ ಬೈತರೊ ಅವುರು ನಮ್ಮ ಪಾರ್ಟಿಗೆ ಲಗತ್ತಾದ ಲೀಡ್ರು ಅಂತ ತಿಳಕಂಡರಂತೆ, ಅದು ಗೊತ್ತಾಗಿ ಆ ಅನಂತಕುಮಾರ ಹೆಗಡೆ ಅನ್ನೊ ಮೂರ್ಖ, ರೇಣುಕಾಚಾರಿ ಅನ್ನೊ ಕಾಮುಕ, ಈ ಯತ್ನಾಳ್ ಅನ್ನೊ ಯಬಡ ಇವ್ರ್ಯಲ್ಲ ಸಾಬರನ ಬಾಯಿಗೆ ಬಂದಂತೆ ಬೈತರೆ ಕಣಕ್ಕ’.
‘ಅಂಗ್ಯಲ್ಲ ಬೈಬಾರ್ದು ಕಂಡ್ಳ. ಬೋದುದ್ದು ಬರ್ಲಾಯ್ತು. ಬೈಸಿಗಂಡೋನು ಬಸವಣ್ಣಾದ ಅಂತ ಗಾದೆ ಮಾತೆ ಅದೆ’.
‘ಅದಿವುನಿಗೆ ಗೊತ್ತಾಗಬೇಕಲ್ಲ ಹೇಳು. ಆ ಬಿಜಾಪುರದ ಸಾಬರು ಬ್ಯಾರೆ ಕಡೆ ಸಾಬರತರ ಅಲ್ಲ ಬಸವ ಜಯಂತಿ ಮ್ಯರವಣಿಗೆಗೊ ಬಂದರಂತೆ’.
‘ಮತ್ತೆ ಅಂತ ಜಾಗದ ಯಮ್ಮೆಲ್ಲೆ ಆಗಿ ಹಿಂಗೆ ಮಾತಾಡಕ್ಕೆ ನಾಚಗೆ ಆಗಬೇಕು ಕಣೊ ಅವುನಿಗೆ’ ಎಂದ ಉಗ್ರಿ.
‘ನಾಚಿಕೆ ಅನ್ನೊ ಪದ ಬಿಜೆಪಿ ಡಿಕ್ಸ್‍ನರಿಲೆ ಇಲ್ಲ ಕಣೊ ಉಗ್ರಿ. ಆ ಎ.ಕೆ.ಸುಬ್ಬಯ್ಯ, ಶಿವಪ್ಪ ಅವುರ್ಯಲ್ಲ ಅಧ್ಯಕ್ಷರಾಗಿದ್ದಾಗ ನಾಚಿಕೆ ಒಂದಿಷ್ಟು ಆ ಪಾರ್ಟಿಲಿತ್ತು. ಅಮ್ಯಾಲೆ ಇದ್ಯಾಕೊ ಸರಿಯಾಗದಿಲ್ಲ ಅಂತ ಅದ ಬುಟ್ರು. ಹಿಂಗಾದ್ರು’.
‘ಯತ್ನಾಳ ಮದ್ಲಂಗಿರಲಿಲ್ಲ ಅಲವೆ’ ಎಂದ ಉಗ್ರಿ.
‘ಇರಲಿಲ್ಲ ಎತ್ತರಕ್ಕೆ ಹ್ಯಾಂಡಸಮ್ಮಾಗಿದ್ದ. ಅದ ನೋಡಿ ವಾಜಪೇಯಿ ವಳ್ಳೆ ಮನ್ಸ ಅಂತ ತಿಳಕಂಡು ಮಂತ್ರಿನೂ ಮಾಡಿದ್ರು. ಆದ್ರಿವತ್ತು ಇವುನ್ಯಂಥಾ ಮಂತ್ರಿಯಾಗಿದ್ದ ಅಂತ ಅವುನೇ ಹೇಳಿ ಕಂಡು ತಿರುಗಂಗಾಗ್ಯದೆ’.
‘ಎಡೂರಪ್ಪ ಇವುನ್ನ ಮಂತ್ರಿ ಮಾಡ್ಯನೆ’.
‘ಡವುಟು ಕಣೊ ಉಗ್ರಿ. ಯಾಕಂದ್ರೆ ಈ ಯತ್ನಾಳ ಮದ್ಲಿಂದ ಎಡೂರಪ್ಪನ್ನ ವಿರೋದಿಸಿಕೊಂಡು ಬಂದೊನು. ಮದ್ಲು ಎಡೂರಪ್ಪ ಮುಖ್ಯಮಂತ್ರಿಯಾದಾಗ, ಇದೇ ಯತ್ನಾಳ ಶೋಭ ಕರಂದ್ಲಾಜೆಯಿಂದ ಎಡೂರಪ್ಪ ಹಾಳಾಯ್ತ ಅವುರೆ, ಮೊದ್ಲು ಅವುಳ ಸವಾಸ ಬುಡಬೇಕು ಅಂದಿದ್ದ’.
‘ನಿಜವೇನ್ಲ ನೀನೇಳದು’ ಎಂದಳು ಜುಮ್ಮಿ.
‘ನಾನ್ಯಾಕಕ್ಕ ಸುಳ್ಳೇಳ್ಳಿ, ಇನ್ನ ಒಂದು ಮಾತಂದಿದ್ದ ಅದು ಹೆಚ್ಚು ಪ್ರಚಾರ ತಗಳ್ಳಿಲ್ಲ. ಏನಪ್ಪ ಅಂದ್ರೆ ಈ ಬಿಜೆಪಿಯಿಂದ ಲಿಂಗಾಯಿತ ಧರ್ಮ ಹಾಳಾಯ್ತದೆ. ಅದರಿಂದ ಅಂದ್ರೆ ಬಿಜೆಪಿವಳಗಿಂದ ಲಿಂಗಾಯಿತ ಧರ್ಮ ಬ್ಯಾರೆ ಮಾಡಬೇಕು ಅಂದಿದ್ದ’.
‘ಮತ್ತೆ ಅಂಥೋನ್ಯಾಕೆ ಹಿಂಗಾಗ್ಯವುನೆ’.
‘ಪಾರ್ಟಿ ಅಂಗೆ ಮಾಡುಸ್ತವೆ ಕಣೊ. ಈಗವುನ್ನ ಬಿಜೆಪಿಯಿಂದ ತಗದಾಕ್ಲಿ ಪ್ಲೇಟ ಬದಲಾಸ್ತೆಯಿದ್ರು ಕೇಳು’.
‘ನೀನೇಳದು ನಿಜ ಕಣೊ. ಈಗಾಗ್ಲೆ ವಿಶ್ವನಾಥನ ಮಾತೇ ಬದಲಾಗ್ಯದೆ’.
‘ಅದೋಗ್ಲಿ ಕಣೊ, ಇದೇ ಎಡೂರಪ್ಪ ಕೆಜೆಪಿ ಮಾಡಿದಾಗ ಇನ್ನ ಬಿಜೆಪಿ ಸವಾಸಕ್ಕೆ ಹೋಗದಿಲ್ಲ ಅಂದಿದ್ದ’.
‘ನೋಡು ಮತ್ತೆ’.
‘ಲ್ಯಕ್ಕ ಹಾಕು ಅದೇ ಇವತ್ತು ಬಿಜೆಪಿ ಲೀಡ್ರು ಮುಖ್ಯಮಂತ್ರಿ ಇದಕೇನೇಳನ’.
‘ಏನೇ ಅದ್ರು ಪಾಪ ಎಡೂರಪ್ಪ ಭಾಳ ಅನುಭವಿಸಿ ಬುಟ್ಟ ಕಂಡ್ಳ’.
‘ನಿಜ ಕಣಕ್ಕ ಮುಖ್ಯಮಂತ್ರಿ ಕುರ್ಚಿ ಮ್ಯಾಲೆ ಕುಂತಗಂಡು ಇವುನಷ್ಟು ಗೋಳಾಡಿದೋರೆ ಇಲ್ಲ. ಇವತ್ತಿಗೂ ಅವುನ ಮಕ ನೋಡಿದ್ರೆ ಯಾರಿಗೆ ಬೇಕಪ್ಪ ಆ ಸ್ಥಾನ ಅನ್ನಂಗೆ ಕಾಣ್ತನೆ’.
‘ಆದ್ರು ಅವುನ ಸಾಧನೆ ಯಾರೂ ಮಾಡಕ್ಕಾಗದಿಲ್ಲ ಕಣೋ ವಾಟಿಸ್ಸೆ’.
‘ಡೆವಲಪ್‍ಮೆಂಟ್ ವರಕಲ್ಲಾ’.
‘ವರಕಲ್ಲ ಕಣೊ ಅವುನು ಮದ್ಲಿಗೆ ಕುಮಾರಸ್ವಾಮಿಯ ಮುಖ್ಯಮಂತ್ರಿ ಮಾಡಿದ. ಅಮ್ಯಾಲೆ ತಾನಾದ. ಆ ಶೋಭ ಕರಂದ್ಲಾಜೆ ಕಾಟ ತಾಳಕ್ಕಾಗದೆ ಇಳಿಸಿ ಸದಾನಂದಗೌಡಾಗಂಗಾಯ್ತು. ಅಮ್ಯಾಲೆ ಜಗದೀಶ್ ಶೆಟ್ಟರ್‍ನ ಮಾಡಿದ. ಬಿಜೆಪಿ ಬುಟ್ಟೊಗಿ ಕೆಜೆಪಿ ಮಾಡಿ ಸಿದ್ದರಾಮಯ್ಯನ್ನ ಮುಖ್ಯಮಂತ್ರಿ ಮಾಡಿದ. ತಿರಗ ಬಿಜೆಪಿಗೆ ಬಂದು ತಾನು ಆದ. ಮೂರು ದಿನ ಬುಟಗಂಡು ಕುಮಾರಸ್ವಾಮಿ ಆದ. ಅವುನ್ನ ಅತ್ತಗೆ ಉಂಡಿಸಿ ತಿರುಗ ತಾನೇ ಮುಖ್ಯಮಂತ್ರಿಯಾದ. ಇಂತ ಸಾಧನೆಯ ಯಾವ ರಾಜಕಾರಣಿ ಮಾಡ್ಯವುನೆ ತೋರು’.
‘ಇಲ್ಲ ಕಣೊ ಉಗ್ರಿ, ಆ ವಿಷಯದಲ್ಲಿ ಎಡೂರಪ್ಪ ಗ್ರೇಟ್’.
‘ಈಗ್ಯಾರ್ನು ಮಾಡ್ತನೆ’.
‘ಬಿಜೆಪಿನೆ ಉಡಾಯಿಸ್ತನೆ’.
‘!?’


ಇದನ್ನು ಓದಿ: ಕವನ | ಅಂತಿಮ ವಲಸೆಯ ಮುನ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...