Homeಅಂಕಣಗಳುಚಂದ್ರೇಗೌಡರ ಕಟ್ಟೆಪುರಾಣ: ವಾಟಿಸ್ಸೆ ಉವಾಚ - ಎಡೂರಪ್ಪ ರಿಯಲಿ ಗ್ರೇಟು!

ಚಂದ್ರೇಗೌಡರ ಕಟ್ಟೆಪುರಾಣ: ವಾಟಿಸ್ಸೆ ಉವಾಚ – ಎಡೂರಪ್ಪ ರಿಯಲಿ ಗ್ರೇಟು!

- Advertisement -
- Advertisement -

‘ಎಡೂರಪ್ಪನ್ನ ಇಳುಸ್ತರಂತೆ ನಿಜವೇನ್ಲ’ ಎಂದಳು ಜುಮ್ಮಿ.
‘ನಿನಿಗ್ಯಾರಕ್ಕ ಹೇಳಿದೊರು’ ಎಂದ ವಾಟಿಸ್ಸೆ.
‘ಯಲ್ಲ ಅಂಗಂತ ಮಾತಾಡತಿದ್ರು ಕಂಡ್ಳ’.
‘ಈ ಟೈಮಲ್ಲಿ ಎಡೂರಪ್ಪನ್ನ ಮುಟ್ಟಕ್ಕಾದತೆ ಯಾವೊ ಪೋಲಿ ಬಡ್ಡೆತ್ತವು ಅಂಗಂದವೆ’ ಎಂದ ಉಗ್ರಿ.
‘ಪೋಲಿ ಬಡ್ಡೆತ್ತವಲ್ಲ ಕಣೊ, ಎಡೂರಪ್ಪ ಮಂತ್ರಿ ಮಾಡ್ತನೆ ಅಂತ ಕಾಯ್ಕಂಡಿದ್ದವಲ್ಲಾ ಅವ್ಯಲ್ಲ ಸೇರಿ ಹಟ್ಟಿರೊ ಗುಲ್ಲು’.
‘ಈ ಟೈಮಲ್ಲಿ ಮಂತ್ರಿ ಮಾಡಿದ್ರೆ ಏನು ಮಾಡ್ಯವೂ’.
‘ಏನು ಮಾಡ್ತರೆ ಅಂತ ಕೇಳ್ತಿಯಾ, ಈಗಾಗ್ಲೆ ಕರೋನದ ಕತೆ ಮುಗುಸ್ತಿವಿ ಅಂತ ಕಿಟ್ಟಲ್ಲಿ ಮೆಡಿಸನ್ನಲಿ ಮಾಸಕಲ್ಲಿ ಮುಕ್ಕತ ಕುಂತಿದ್ದರಂತೆ ಕಣೊ ಉಗ್ರೀ’.
‘ಕೊರೋನಾದಲ್ಲೂ ದುಡ್ಡು ಹ್ವಡಿತರಾ’.
‘ವಾಜಪೇಯಿ ಪ್ರಧಾನಿಯಾಗಿದ್ದಾಗ, ಶವದ ಪೆಟಿಗಲೇ ಹಣ ವಡದಿದ್ರು, ಇನ್ನ ಇದರಲ್ಲಿ ಬುಡ್ತರೇನಕ್ಕ’.
‘ಓಹೊಹೊ, ಕೊರೋನಾದ್ರಲ್ಲಿ ತಿನ್ನದ ನೋಡಕ್ಕಾಗದೆ, ನಮ್ಮನ್ನ ಮಂತ್ರಿ ಮಾಡಿ ಅಂತ ಕೇಳ್ತಾಯಿದ್ದರೆ’.
‘ಊ ಕಣೊ ಉಗ್ರಿ, ಆ ಯತ್ನಾಳ್ ಕತ್ತಿ ಇಂತ ಘಟಾನು ಘಟಿ ನಾಯಕರು, ನಾವು ಮಂತ್ರಿಯಾಗದೆ ಇದ್ರೆ ಕರ್ನಾಟಕ ಉದ್ದಾರಾಗದಿಲ್ಲ ಅನ್ನಂಗೆ ಮಾತಾಡ್ತ ಅವುರೆ’.
‘ಯತ್ನಾಳ ಕತ್ತಿ ತಿರುಗುಸ್ತಯಿದನೆ’.
‘ಯತ್ನಾಳ ಅಂದ್ರೆ ಬಸವನಗೌಡ ಪಾಟೀಲ ಯತ್ನಾಳ ಅಂತ ಬಿಜಾಪುರದ ನಿಜಾಮಿದ್ದಂಗವುನೆ, ನೋಡಕ್ಕೆ ಸಾಬರಂಗವುನೆ ಆದ್ರೆ ಲಿಂಗಾಯಿತ್ರೊನು. ಅವುನಿಗೆ ಸಾಬರ ಕಂಡ್ರಾಗದಿಲ್ಲ’.
‘ಯಾಕೇ?’.
‘ಬಿಜಾಪುರದಲ್ಲಿ ಇಜಾರದೋರು ಹಜಾರಮಂದಿ ಅಂತ ಸಾಬರ ಜಾಸ್ತಿಯಲವೆ. ಅದಕ್ಕೆ ಅವುರ ಕಂಡ್ರೆ ಕ್ಯಂಡ ಕಾರತನೆ ಕಣಕ್ಕ’.
‘ಅದೆ ಯಾಕೆ ಅಂದೆ’.
‘ಯಾಕೆ ಅಂದ್ರೆ, ಈ ಬಿಜೆಪಿಲಿ ಯಾರು ಜಾಸ್ತಿ ಸಾಬರನ್ನ ಬೈತರೊ ಅವುರು ನಮ್ಮ ಪಾರ್ಟಿಗೆ ಲಗತ್ತಾದ ಲೀಡ್ರು ಅಂತ ತಿಳಕಂಡರಂತೆ, ಅದು ಗೊತ್ತಾಗಿ ಆ ಅನಂತಕುಮಾರ ಹೆಗಡೆ ಅನ್ನೊ ಮೂರ್ಖ, ರೇಣುಕಾಚಾರಿ ಅನ್ನೊ ಕಾಮುಕ, ಈ ಯತ್ನಾಳ್ ಅನ್ನೊ ಯಬಡ ಇವ್ರ್ಯಲ್ಲ ಸಾಬರನ ಬಾಯಿಗೆ ಬಂದಂತೆ ಬೈತರೆ ಕಣಕ್ಕ’.
‘ಅಂಗ್ಯಲ್ಲ ಬೈಬಾರ್ದು ಕಂಡ್ಳ. ಬೋದುದ್ದು ಬರ್ಲಾಯ್ತು. ಬೈಸಿಗಂಡೋನು ಬಸವಣ್ಣಾದ ಅಂತ ಗಾದೆ ಮಾತೆ ಅದೆ’.
‘ಅದಿವುನಿಗೆ ಗೊತ್ತಾಗಬೇಕಲ್ಲ ಹೇಳು. ಆ ಬಿಜಾಪುರದ ಸಾಬರು ಬ್ಯಾರೆ ಕಡೆ ಸಾಬರತರ ಅಲ್ಲ ಬಸವ ಜಯಂತಿ ಮ್ಯರವಣಿಗೆಗೊ ಬಂದರಂತೆ’.
‘ಮತ್ತೆ ಅಂತ ಜಾಗದ ಯಮ್ಮೆಲ್ಲೆ ಆಗಿ ಹಿಂಗೆ ಮಾತಾಡಕ್ಕೆ ನಾಚಗೆ ಆಗಬೇಕು ಕಣೊ ಅವುನಿಗೆ’ ಎಂದ ಉಗ್ರಿ.
‘ನಾಚಿಕೆ ಅನ್ನೊ ಪದ ಬಿಜೆಪಿ ಡಿಕ್ಸ್‍ನರಿಲೆ ಇಲ್ಲ ಕಣೊ ಉಗ್ರಿ. ಆ ಎ.ಕೆ.ಸುಬ್ಬಯ್ಯ, ಶಿವಪ್ಪ ಅವುರ್ಯಲ್ಲ ಅಧ್ಯಕ್ಷರಾಗಿದ್ದಾಗ ನಾಚಿಕೆ ಒಂದಿಷ್ಟು ಆ ಪಾರ್ಟಿಲಿತ್ತು. ಅಮ್ಯಾಲೆ ಇದ್ಯಾಕೊ ಸರಿಯಾಗದಿಲ್ಲ ಅಂತ ಅದ ಬುಟ್ರು. ಹಿಂಗಾದ್ರು’.
‘ಯತ್ನಾಳ ಮದ್ಲಂಗಿರಲಿಲ್ಲ ಅಲವೆ’ ಎಂದ ಉಗ್ರಿ.
‘ಇರಲಿಲ್ಲ ಎತ್ತರಕ್ಕೆ ಹ್ಯಾಂಡಸಮ್ಮಾಗಿದ್ದ. ಅದ ನೋಡಿ ವಾಜಪೇಯಿ ವಳ್ಳೆ ಮನ್ಸ ಅಂತ ತಿಳಕಂಡು ಮಂತ್ರಿನೂ ಮಾಡಿದ್ರು. ಆದ್ರಿವತ್ತು ಇವುನ್ಯಂಥಾ ಮಂತ್ರಿಯಾಗಿದ್ದ ಅಂತ ಅವುನೇ ಹೇಳಿ ಕಂಡು ತಿರುಗಂಗಾಗ್ಯದೆ’.
‘ಎಡೂರಪ್ಪ ಇವುನ್ನ ಮಂತ್ರಿ ಮಾಡ್ಯನೆ’.
‘ಡವುಟು ಕಣೊ ಉಗ್ರಿ. ಯಾಕಂದ್ರೆ ಈ ಯತ್ನಾಳ ಮದ್ಲಿಂದ ಎಡೂರಪ್ಪನ್ನ ವಿರೋದಿಸಿಕೊಂಡು ಬಂದೊನು. ಮದ್ಲು ಎಡೂರಪ್ಪ ಮುಖ್ಯಮಂತ್ರಿಯಾದಾಗ, ಇದೇ ಯತ್ನಾಳ ಶೋಭ ಕರಂದ್ಲಾಜೆಯಿಂದ ಎಡೂರಪ್ಪ ಹಾಳಾಯ್ತ ಅವುರೆ, ಮೊದ್ಲು ಅವುಳ ಸವಾಸ ಬುಡಬೇಕು ಅಂದಿದ್ದ’.
‘ನಿಜವೇನ್ಲ ನೀನೇಳದು’ ಎಂದಳು ಜುಮ್ಮಿ.
‘ನಾನ್ಯಾಕಕ್ಕ ಸುಳ್ಳೇಳ್ಳಿ, ಇನ್ನ ಒಂದು ಮಾತಂದಿದ್ದ ಅದು ಹೆಚ್ಚು ಪ್ರಚಾರ ತಗಳ್ಳಿಲ್ಲ. ಏನಪ್ಪ ಅಂದ್ರೆ ಈ ಬಿಜೆಪಿಯಿಂದ ಲಿಂಗಾಯಿತ ಧರ್ಮ ಹಾಳಾಯ್ತದೆ. ಅದರಿಂದ ಅಂದ್ರೆ ಬಿಜೆಪಿವಳಗಿಂದ ಲಿಂಗಾಯಿತ ಧರ್ಮ ಬ್ಯಾರೆ ಮಾಡಬೇಕು ಅಂದಿದ್ದ’.
‘ಮತ್ತೆ ಅಂಥೋನ್ಯಾಕೆ ಹಿಂಗಾಗ್ಯವುನೆ’.
‘ಪಾರ್ಟಿ ಅಂಗೆ ಮಾಡುಸ್ತವೆ ಕಣೊ. ಈಗವುನ್ನ ಬಿಜೆಪಿಯಿಂದ ತಗದಾಕ್ಲಿ ಪ್ಲೇಟ ಬದಲಾಸ್ತೆಯಿದ್ರು ಕೇಳು’.
‘ನೀನೇಳದು ನಿಜ ಕಣೊ. ಈಗಾಗ್ಲೆ ವಿಶ್ವನಾಥನ ಮಾತೇ ಬದಲಾಗ್ಯದೆ’.
‘ಅದೋಗ್ಲಿ ಕಣೊ, ಇದೇ ಎಡೂರಪ್ಪ ಕೆಜೆಪಿ ಮಾಡಿದಾಗ ಇನ್ನ ಬಿಜೆಪಿ ಸವಾಸಕ್ಕೆ ಹೋಗದಿಲ್ಲ ಅಂದಿದ್ದ’.
‘ನೋಡು ಮತ್ತೆ’.
‘ಲ್ಯಕ್ಕ ಹಾಕು ಅದೇ ಇವತ್ತು ಬಿಜೆಪಿ ಲೀಡ್ರು ಮುಖ್ಯಮಂತ್ರಿ ಇದಕೇನೇಳನ’.
‘ಏನೇ ಅದ್ರು ಪಾಪ ಎಡೂರಪ್ಪ ಭಾಳ ಅನುಭವಿಸಿ ಬುಟ್ಟ ಕಂಡ್ಳ’.
‘ನಿಜ ಕಣಕ್ಕ ಮುಖ್ಯಮಂತ್ರಿ ಕುರ್ಚಿ ಮ್ಯಾಲೆ ಕುಂತಗಂಡು ಇವುನಷ್ಟು ಗೋಳಾಡಿದೋರೆ ಇಲ್ಲ. ಇವತ್ತಿಗೂ ಅವುನ ಮಕ ನೋಡಿದ್ರೆ ಯಾರಿಗೆ ಬೇಕಪ್ಪ ಆ ಸ್ಥಾನ ಅನ್ನಂಗೆ ಕಾಣ್ತನೆ’.
‘ಆದ್ರು ಅವುನ ಸಾಧನೆ ಯಾರೂ ಮಾಡಕ್ಕಾಗದಿಲ್ಲ ಕಣೋ ವಾಟಿಸ್ಸೆ’.
‘ಡೆವಲಪ್‍ಮೆಂಟ್ ವರಕಲ್ಲಾ’.
‘ವರಕಲ್ಲ ಕಣೊ ಅವುನು ಮದ್ಲಿಗೆ ಕುಮಾರಸ್ವಾಮಿಯ ಮುಖ್ಯಮಂತ್ರಿ ಮಾಡಿದ. ಅಮ್ಯಾಲೆ ತಾನಾದ. ಆ ಶೋಭ ಕರಂದ್ಲಾಜೆ ಕಾಟ ತಾಳಕ್ಕಾಗದೆ ಇಳಿಸಿ ಸದಾನಂದಗೌಡಾಗಂಗಾಯ್ತು. ಅಮ್ಯಾಲೆ ಜಗದೀಶ್ ಶೆಟ್ಟರ್‍ನ ಮಾಡಿದ. ಬಿಜೆಪಿ ಬುಟ್ಟೊಗಿ ಕೆಜೆಪಿ ಮಾಡಿ ಸಿದ್ದರಾಮಯ್ಯನ್ನ ಮುಖ್ಯಮಂತ್ರಿ ಮಾಡಿದ. ತಿರಗ ಬಿಜೆಪಿಗೆ ಬಂದು ತಾನು ಆದ. ಮೂರು ದಿನ ಬುಟಗಂಡು ಕುಮಾರಸ್ವಾಮಿ ಆದ. ಅವುನ್ನ ಅತ್ತಗೆ ಉಂಡಿಸಿ ತಿರುಗ ತಾನೇ ಮುಖ್ಯಮಂತ್ರಿಯಾದ. ಇಂತ ಸಾಧನೆಯ ಯಾವ ರಾಜಕಾರಣಿ ಮಾಡ್ಯವುನೆ ತೋರು’.
‘ಇಲ್ಲ ಕಣೊ ಉಗ್ರಿ, ಆ ವಿಷಯದಲ್ಲಿ ಎಡೂರಪ್ಪ ಗ್ರೇಟ್’.
‘ಈಗ್ಯಾರ್ನು ಮಾಡ್ತನೆ’.
‘ಬಿಜೆಪಿನೆ ಉಡಾಯಿಸ್ತನೆ’.
‘!?’


ಇದನ್ನು ಓದಿ: ಕವನ | ಅಂತಿಮ ವಲಸೆಯ ಮುನ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...