Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ...

‘ಈ ಸಲ ಕಪ್ ನಮ್ದೆ’ ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ ಬಾಕಿ

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ.

- Advertisement -
- Advertisement -

ಬುಧವಾರ ಮಧ್ಯರಾತ್ರಿ ಲಕ್ನೋ ವಿರುದ್ಧ ಬೆಂಗಳೂರು 14 ರನ್‌ಗಳ ಅಂತರದ ಗೆಲುವು ಸಾಧಿಸುತ್ತಲೇ RCB ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂಬ ಘೋಷಣೆ ಶುರು ಮಾಡಿದ್ದಾರೆ. ಆರ್‌ಸಿಬಿ ಸತತ ಇನ್ನೆರೆಡು ಮಹತ್ವದ ಪಂದ್ಯಗಳನ್ನು ಗೆದ್ದಲ್ಲಿ ಆ ಘೋಷಣೆ ನಿಜರೂಪಕ್ಕೆ ಬರಲಿದೆ.

2020ರಲ್ಲಿ ಪ್ಲೇ ಆಫ್‌ ಪ್ರವೇಶಿಸಿದ್ದ RCB ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿ ಹೊರಬಂದಿತ್ತು. 2021ರ 14ನೇ ಐಪಿಎಲ್ ಸೀಸನ್‌ನಲ್ಲಿಯೂ ಸಹ ಪ್ಲೇ ಆಫ್‌ ಪ್ರವೇಶಿಸಿದ ಅದು ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ಎದುರು ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಈ ಸಲ ಕಪ್ ನಮ್ದೆ ಎನ್ನುವ ಆಸೆಗೆ ತಣ್ಣೀರು ಎರಚಿದ್ದರು. ಆದರೆ 2022ರ 15ನೇ ಆವೃತ್ತಿಯಲ್ಲಿ ಅದೃಷ್ಟದ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅದೃಷ್ಟದ ಮೂಲಕವೇ ಮಣಿಸಿ ಮುಂದಿನ ಕ್ವಾಲಿಫೈಯರ್ ಹಂತಕ್ಕೆ ತಲುಪಿದೆ. ಆ ಮೂಲಕ ಕಪ್ ತನ್ನದಾಗಿಸಿಕೊಳ್ಳಲು ಆರ್‌ಸಿಬಿಗೆ ಎರಡು ಹೆಜ್ಜೆ ಮಾತ್ರ ಬಾಕಿ ಇದೆ. ಆದರೆ ಆ ಎರಡು ಹೆಜ್ಜೆಗಳು ತೀವ್ರ ಕಠಿಣವಾಗಿವೆ.

ಬುಧವಾರ ರಾತ್ರಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಜಯ ಗಳಿಸಿತು. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ರಜತ್ ಪಾಟಿದಾರ್‌ರವರ ಸ್ಪೋಟಕದ ಶತಕದ (54 ಎಸೆತಗಳಲ್ಲಿ 112ರನ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್‌ ಗಳಿಸಿತು. ಕಡೆಯಲ್ಲಿ ಕ್ರೀಸ್‌ಗಿಳಿಸಿದ ದಿನೇಶ್ ಕಾರ್ತಿಕ್ ಸಹ 23 ಎಸೆತಗಳಲ್ಲಿ 37 ರನ್ ಗಳಿಸಿ 200 ರ ಗಡಿ ದಾಟಲು ನೆರವಾದರು.

ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೆ ಸಾಧ್ಯವಾಯಿತು. ಕೆ.ಎಲ್ ರಾಹುಲ್ 79 ರನ್ ಮತ್ತು ದೀಪಕ್ ಹೂಡಾ 45 ರನ್ ಗಳಿಸಿದರೂ ತಂಡ ಗೆಲುವಿನ ಗೆರೆ ದಾಟಲಾಗಲಿಲ್ಲ. ಆರ್‌ಸಿಬಿ ಬೌಲರ್ ಹರ್ಷಲ್ ಪಟೇಲ್‌ ನಡೆಸಿದ ಬಿಗುವಿನ ದಾಳಿಯೇ ಅದಕ್ಕೆ ಪ್ರಮುಖ ಕಾರಣ. ಅವರು 4 ಓವರ್‌ಗಳಲ್ಲಿ 1 ವಿಕೆಟ್ ಗಳಿಸಿ ಕೇವಲ 25 ರನ್ ನೀಡಿದರು.

ಈ ಗೆಲುವಿನ ಮೂಲಕ ಆರ್‌ಸಿಬಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಎದುರು ಮೇ 27ರ ಶುಕ್ರವಾರ ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದಲ್ಲಿ ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಬೇಕಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ರಾಜಸ್ಥಾನ ಮತ್ತು ಗುಜರಾತ್ ಎದುರು ಗೆಲ್ಲುವುದು ಸುಲಭದ ಮಾತಲ್ಲ. ಆದರೆ ಆರ್‌ಸಿಬಿಯಲ್ಲಿಯೂ ಪ್ರತಿಭಾವಂತ ಆಟಗಾರರಿದ್ದಾರೆ. ಅವರು ಪ್ರದರ್ಶನ ನೀಡಿದ್ದಲ್ಲಿ ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆಗಬಹುದಾಗಿದೆ.

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ. ಈ ಬಾರಿಯಾದರೂ ಗೆದ್ದು ಅಭಿಮಾನಿಗಳ ಮನ ತಣಿಸಲಿದೆಯೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...