Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ...

‘ಈ ಸಲ ಕಪ್ ನಮ್ದೆ’ ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ ಬಾಕಿ

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ.

- Advertisement -
- Advertisement -

ಬುಧವಾರ ಮಧ್ಯರಾತ್ರಿ ಲಕ್ನೋ ವಿರುದ್ಧ ಬೆಂಗಳೂರು 14 ರನ್‌ಗಳ ಅಂತರದ ಗೆಲುವು ಸಾಧಿಸುತ್ತಲೇ RCB ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂಬ ಘೋಷಣೆ ಶುರು ಮಾಡಿದ್ದಾರೆ. ಆರ್‌ಸಿಬಿ ಸತತ ಇನ್ನೆರೆಡು ಮಹತ್ವದ ಪಂದ್ಯಗಳನ್ನು ಗೆದ್ದಲ್ಲಿ ಆ ಘೋಷಣೆ ನಿಜರೂಪಕ್ಕೆ ಬರಲಿದೆ.

2020ರಲ್ಲಿ ಪ್ಲೇ ಆಫ್‌ ಪ್ರವೇಶಿಸಿದ್ದ RCB ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿ ಹೊರಬಂದಿತ್ತು. 2021ರ 14ನೇ ಐಪಿಎಲ್ ಸೀಸನ್‌ನಲ್ಲಿಯೂ ಸಹ ಪ್ಲೇ ಆಫ್‌ ಪ್ರವೇಶಿಸಿದ ಅದು ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ಎದುರು ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಈ ಸಲ ಕಪ್ ನಮ್ದೆ ಎನ್ನುವ ಆಸೆಗೆ ತಣ್ಣೀರು ಎರಚಿದ್ದರು. ಆದರೆ 2022ರ 15ನೇ ಆವೃತ್ತಿಯಲ್ಲಿ ಅದೃಷ್ಟದ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅದೃಷ್ಟದ ಮೂಲಕವೇ ಮಣಿಸಿ ಮುಂದಿನ ಕ್ವಾಲಿಫೈಯರ್ ಹಂತಕ್ಕೆ ತಲುಪಿದೆ. ಆ ಮೂಲಕ ಕಪ್ ತನ್ನದಾಗಿಸಿಕೊಳ್ಳಲು ಆರ್‌ಸಿಬಿಗೆ ಎರಡು ಹೆಜ್ಜೆ ಮಾತ್ರ ಬಾಕಿ ಇದೆ. ಆದರೆ ಆ ಎರಡು ಹೆಜ್ಜೆಗಳು ತೀವ್ರ ಕಠಿಣವಾಗಿವೆ.

ಬುಧವಾರ ರಾತ್ರಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಜಯ ಗಳಿಸಿತು. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ರಜತ್ ಪಾಟಿದಾರ್‌ರವರ ಸ್ಪೋಟಕದ ಶತಕದ (54 ಎಸೆತಗಳಲ್ಲಿ 112ರನ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್‌ ಗಳಿಸಿತು. ಕಡೆಯಲ್ಲಿ ಕ್ರೀಸ್‌ಗಿಳಿಸಿದ ದಿನೇಶ್ ಕಾರ್ತಿಕ್ ಸಹ 23 ಎಸೆತಗಳಲ್ಲಿ 37 ರನ್ ಗಳಿಸಿ 200 ರ ಗಡಿ ದಾಟಲು ನೆರವಾದರು.

ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೆ ಸಾಧ್ಯವಾಯಿತು. ಕೆ.ಎಲ್ ರಾಹುಲ್ 79 ರನ್ ಮತ್ತು ದೀಪಕ್ ಹೂಡಾ 45 ರನ್ ಗಳಿಸಿದರೂ ತಂಡ ಗೆಲುವಿನ ಗೆರೆ ದಾಟಲಾಗಲಿಲ್ಲ. ಆರ್‌ಸಿಬಿ ಬೌಲರ್ ಹರ್ಷಲ್ ಪಟೇಲ್‌ ನಡೆಸಿದ ಬಿಗುವಿನ ದಾಳಿಯೇ ಅದಕ್ಕೆ ಪ್ರಮುಖ ಕಾರಣ. ಅವರು 4 ಓವರ್‌ಗಳಲ್ಲಿ 1 ವಿಕೆಟ್ ಗಳಿಸಿ ಕೇವಲ 25 ರನ್ ನೀಡಿದರು.

ಈ ಗೆಲುವಿನ ಮೂಲಕ ಆರ್‌ಸಿಬಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಎದುರು ಮೇ 27ರ ಶುಕ್ರವಾರ ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದಲ್ಲಿ ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಬೇಕಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ರಾಜಸ್ಥಾನ ಮತ್ತು ಗುಜರಾತ್ ಎದುರು ಗೆಲ್ಲುವುದು ಸುಲಭದ ಮಾತಲ್ಲ. ಆದರೆ ಆರ್‌ಸಿಬಿಯಲ್ಲಿಯೂ ಪ್ರತಿಭಾವಂತ ಆಟಗಾರರಿದ್ದಾರೆ. ಅವರು ಪ್ರದರ್ಶನ ನೀಡಿದ್ದಲ್ಲಿ ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆಗಬಹುದಾಗಿದೆ.

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ. ಈ ಬಾರಿಯಾದರೂ ಗೆದ್ದು ಅಭಿಮಾನಿಗಳ ಮನ ತಣಿಸಲಿದೆಯೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...