Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ...

‘ಈ ಸಲ ಕಪ್ ನಮ್ದೆ’ ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ ಬಾಕಿ

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ.

- Advertisement -
- Advertisement -

ಬುಧವಾರ ಮಧ್ಯರಾತ್ರಿ ಲಕ್ನೋ ವಿರುದ್ಧ ಬೆಂಗಳೂರು 14 ರನ್‌ಗಳ ಅಂತರದ ಗೆಲುವು ಸಾಧಿಸುತ್ತಲೇ RCB ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂಬ ಘೋಷಣೆ ಶುರು ಮಾಡಿದ್ದಾರೆ. ಆರ್‌ಸಿಬಿ ಸತತ ಇನ್ನೆರೆಡು ಮಹತ್ವದ ಪಂದ್ಯಗಳನ್ನು ಗೆದ್ದಲ್ಲಿ ಆ ಘೋಷಣೆ ನಿಜರೂಪಕ್ಕೆ ಬರಲಿದೆ.

2020ರಲ್ಲಿ ಪ್ಲೇ ಆಫ್‌ ಪ್ರವೇಶಿಸಿದ್ದ RCB ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿ ಹೊರಬಂದಿತ್ತು. 2021ರ 14ನೇ ಐಪಿಎಲ್ ಸೀಸನ್‌ನಲ್ಲಿಯೂ ಸಹ ಪ್ಲೇ ಆಫ್‌ ಪ್ರವೇಶಿಸಿದ ಅದು ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ಎದುರು ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಈ ಸಲ ಕಪ್ ನಮ್ದೆ ಎನ್ನುವ ಆಸೆಗೆ ತಣ್ಣೀರು ಎರಚಿದ್ದರು. ಆದರೆ 2022ರ 15ನೇ ಆವೃತ್ತಿಯಲ್ಲಿ ಅದೃಷ್ಟದ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅದೃಷ್ಟದ ಮೂಲಕವೇ ಮಣಿಸಿ ಮುಂದಿನ ಕ್ವಾಲಿಫೈಯರ್ ಹಂತಕ್ಕೆ ತಲುಪಿದೆ. ಆ ಮೂಲಕ ಕಪ್ ತನ್ನದಾಗಿಸಿಕೊಳ್ಳಲು ಆರ್‌ಸಿಬಿಗೆ ಎರಡು ಹೆಜ್ಜೆ ಮಾತ್ರ ಬಾಕಿ ಇದೆ. ಆದರೆ ಆ ಎರಡು ಹೆಜ್ಜೆಗಳು ತೀವ್ರ ಕಠಿಣವಾಗಿವೆ.

ಬುಧವಾರ ರಾತ್ರಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಜಯ ಗಳಿಸಿತು. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ರಜತ್ ಪಾಟಿದಾರ್‌ರವರ ಸ್ಪೋಟಕದ ಶತಕದ (54 ಎಸೆತಗಳಲ್ಲಿ 112ರನ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್‌ ಗಳಿಸಿತು. ಕಡೆಯಲ್ಲಿ ಕ್ರೀಸ್‌ಗಿಳಿಸಿದ ದಿನೇಶ್ ಕಾರ್ತಿಕ್ ಸಹ 23 ಎಸೆತಗಳಲ್ಲಿ 37 ರನ್ ಗಳಿಸಿ 200 ರ ಗಡಿ ದಾಟಲು ನೆರವಾದರು.

ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೆ ಸಾಧ್ಯವಾಯಿತು. ಕೆ.ಎಲ್ ರಾಹುಲ್ 79 ರನ್ ಮತ್ತು ದೀಪಕ್ ಹೂಡಾ 45 ರನ್ ಗಳಿಸಿದರೂ ತಂಡ ಗೆಲುವಿನ ಗೆರೆ ದಾಟಲಾಗಲಿಲ್ಲ. ಆರ್‌ಸಿಬಿ ಬೌಲರ್ ಹರ್ಷಲ್ ಪಟೇಲ್‌ ನಡೆಸಿದ ಬಿಗುವಿನ ದಾಳಿಯೇ ಅದಕ್ಕೆ ಪ್ರಮುಖ ಕಾರಣ. ಅವರು 4 ಓವರ್‌ಗಳಲ್ಲಿ 1 ವಿಕೆಟ್ ಗಳಿಸಿ ಕೇವಲ 25 ರನ್ ನೀಡಿದರು.

ಈ ಗೆಲುವಿನ ಮೂಲಕ ಆರ್‌ಸಿಬಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಎದುರು ಮೇ 27ರ ಶುಕ್ರವಾರ ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದಲ್ಲಿ ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಬೇಕಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ರಾಜಸ್ಥಾನ ಮತ್ತು ಗುಜರಾತ್ ಎದುರು ಗೆಲ್ಲುವುದು ಸುಲಭದ ಮಾತಲ್ಲ. ಆದರೆ ಆರ್‌ಸಿಬಿಯಲ್ಲಿಯೂ ಪ್ರತಿಭಾವಂತ ಆಟಗಾರರಿದ್ದಾರೆ. ಅವರು ಪ್ರದರ್ಶನ ನೀಡಿದ್ದಲ್ಲಿ ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆಗಬಹುದಾಗಿದೆ.

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ. ಈ ಬಾರಿಯಾದರೂ ಗೆದ್ದು ಅಭಿಮಾನಿಗಳ ಮನ ತಣಿಸಲಿದೆಯೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...