Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ...

‘ಈ ಸಲ ಕಪ್ ನಮ್ದೆ’ ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ ಬಾಕಿ

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ.

- Advertisement -
- Advertisement -

ಬುಧವಾರ ಮಧ್ಯರಾತ್ರಿ ಲಕ್ನೋ ವಿರುದ್ಧ ಬೆಂಗಳೂರು 14 ರನ್‌ಗಳ ಅಂತರದ ಗೆಲುವು ಸಾಧಿಸುತ್ತಲೇ RCB ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂಬ ಘೋಷಣೆ ಶುರು ಮಾಡಿದ್ದಾರೆ. ಆರ್‌ಸಿಬಿ ಸತತ ಇನ್ನೆರೆಡು ಮಹತ್ವದ ಪಂದ್ಯಗಳನ್ನು ಗೆದ್ದಲ್ಲಿ ಆ ಘೋಷಣೆ ನಿಜರೂಪಕ್ಕೆ ಬರಲಿದೆ.

2020ರಲ್ಲಿ ಪ್ಲೇ ಆಫ್‌ ಪ್ರವೇಶಿಸಿದ್ದ RCB ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿ ಹೊರಬಂದಿತ್ತು. 2021ರ 14ನೇ ಐಪಿಎಲ್ ಸೀಸನ್‌ನಲ್ಲಿಯೂ ಸಹ ಪ್ಲೇ ಆಫ್‌ ಪ್ರವೇಶಿಸಿದ ಅದು ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ಎದುರು ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಈ ಸಲ ಕಪ್ ನಮ್ದೆ ಎನ್ನುವ ಆಸೆಗೆ ತಣ್ಣೀರು ಎರಚಿದ್ದರು. ಆದರೆ 2022ರ 15ನೇ ಆವೃತ್ತಿಯಲ್ಲಿ ಅದೃಷ್ಟದ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅದೃಷ್ಟದ ಮೂಲಕವೇ ಮಣಿಸಿ ಮುಂದಿನ ಕ್ವಾಲಿಫೈಯರ್ ಹಂತಕ್ಕೆ ತಲುಪಿದೆ. ಆ ಮೂಲಕ ಕಪ್ ತನ್ನದಾಗಿಸಿಕೊಳ್ಳಲು ಆರ್‌ಸಿಬಿಗೆ ಎರಡು ಹೆಜ್ಜೆ ಮಾತ್ರ ಬಾಕಿ ಇದೆ. ಆದರೆ ಆ ಎರಡು ಹೆಜ್ಜೆಗಳು ತೀವ್ರ ಕಠಿಣವಾಗಿವೆ.

ಬುಧವಾರ ರಾತ್ರಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಜಯ ಗಳಿಸಿತು. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ರಜತ್ ಪಾಟಿದಾರ್‌ರವರ ಸ್ಪೋಟಕದ ಶತಕದ (54 ಎಸೆತಗಳಲ್ಲಿ 112ರನ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್‌ ಗಳಿಸಿತು. ಕಡೆಯಲ್ಲಿ ಕ್ರೀಸ್‌ಗಿಳಿಸಿದ ದಿನೇಶ್ ಕಾರ್ತಿಕ್ ಸಹ 23 ಎಸೆತಗಳಲ್ಲಿ 37 ರನ್ ಗಳಿಸಿ 200 ರ ಗಡಿ ದಾಟಲು ನೆರವಾದರು.

ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೆ ಸಾಧ್ಯವಾಯಿತು. ಕೆ.ಎಲ್ ರಾಹುಲ್ 79 ರನ್ ಮತ್ತು ದೀಪಕ್ ಹೂಡಾ 45 ರನ್ ಗಳಿಸಿದರೂ ತಂಡ ಗೆಲುವಿನ ಗೆರೆ ದಾಟಲಾಗಲಿಲ್ಲ. ಆರ್‌ಸಿಬಿ ಬೌಲರ್ ಹರ್ಷಲ್ ಪಟೇಲ್‌ ನಡೆಸಿದ ಬಿಗುವಿನ ದಾಳಿಯೇ ಅದಕ್ಕೆ ಪ್ರಮುಖ ಕಾರಣ. ಅವರು 4 ಓವರ್‌ಗಳಲ್ಲಿ 1 ವಿಕೆಟ್ ಗಳಿಸಿ ಕೇವಲ 25 ರನ್ ನೀಡಿದರು.

ಈ ಗೆಲುವಿನ ಮೂಲಕ ಆರ್‌ಸಿಬಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಎದುರು ಮೇ 27ರ ಶುಕ್ರವಾರ ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದಲ್ಲಿ ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಬೇಕಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ರಾಜಸ್ಥಾನ ಮತ್ತು ಗುಜರಾತ್ ಎದುರು ಗೆಲ್ಲುವುದು ಸುಲಭದ ಮಾತಲ್ಲ. ಆದರೆ ಆರ್‌ಸಿಬಿಯಲ್ಲಿಯೂ ಪ್ರತಿಭಾವಂತ ಆಟಗಾರರಿದ್ದಾರೆ. ಅವರು ಪ್ರದರ್ಶನ ನೀಡಿದ್ದಲ್ಲಿ ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆಗಬಹುದಾಗಿದೆ.

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ. ಈ ಬಾರಿಯಾದರೂ ಗೆದ್ದು ಅಭಿಮಾನಿಗಳ ಮನ ತಣಿಸಲಿದೆಯೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...