Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ...

‘ಈ ಸಲ ಕಪ್ ನಮ್ದೆ’ ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ ಬಾಕಿ

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ.

- Advertisement -
- Advertisement -

ಬುಧವಾರ ಮಧ್ಯರಾತ್ರಿ ಲಕ್ನೋ ವಿರುದ್ಧ ಬೆಂಗಳೂರು 14 ರನ್‌ಗಳ ಅಂತರದ ಗೆಲುವು ಸಾಧಿಸುತ್ತಲೇ RCB ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂಬ ಘೋಷಣೆ ಶುರು ಮಾಡಿದ್ದಾರೆ. ಆರ್‌ಸಿಬಿ ಸತತ ಇನ್ನೆರೆಡು ಮಹತ್ವದ ಪಂದ್ಯಗಳನ್ನು ಗೆದ್ದಲ್ಲಿ ಆ ಘೋಷಣೆ ನಿಜರೂಪಕ್ಕೆ ಬರಲಿದೆ.

2020ರಲ್ಲಿ ಪ್ಲೇ ಆಫ್‌ ಪ್ರವೇಶಿಸಿದ್ದ RCB ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿ ಹೊರಬಂದಿತ್ತು. 2021ರ 14ನೇ ಐಪಿಎಲ್ ಸೀಸನ್‌ನಲ್ಲಿಯೂ ಸಹ ಪ್ಲೇ ಆಫ್‌ ಪ್ರವೇಶಿಸಿದ ಅದು ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ಎದುರು ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಈ ಸಲ ಕಪ್ ನಮ್ದೆ ಎನ್ನುವ ಆಸೆಗೆ ತಣ್ಣೀರು ಎರಚಿದ್ದರು. ಆದರೆ 2022ರ 15ನೇ ಆವೃತ್ತಿಯಲ್ಲಿ ಅದೃಷ್ಟದ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅದೃಷ್ಟದ ಮೂಲಕವೇ ಮಣಿಸಿ ಮುಂದಿನ ಕ್ವಾಲಿಫೈಯರ್ ಹಂತಕ್ಕೆ ತಲುಪಿದೆ. ಆ ಮೂಲಕ ಕಪ್ ತನ್ನದಾಗಿಸಿಕೊಳ್ಳಲು ಆರ್‌ಸಿಬಿಗೆ ಎರಡು ಹೆಜ್ಜೆ ಮಾತ್ರ ಬಾಕಿ ಇದೆ. ಆದರೆ ಆ ಎರಡು ಹೆಜ್ಜೆಗಳು ತೀವ್ರ ಕಠಿಣವಾಗಿವೆ.

ಬುಧವಾರ ರಾತ್ರಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಜಯ ಗಳಿಸಿತು. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ರಜತ್ ಪಾಟಿದಾರ್‌ರವರ ಸ್ಪೋಟಕದ ಶತಕದ (54 ಎಸೆತಗಳಲ್ಲಿ 112ರನ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್‌ ಗಳಿಸಿತು. ಕಡೆಯಲ್ಲಿ ಕ್ರೀಸ್‌ಗಿಳಿಸಿದ ದಿನೇಶ್ ಕಾರ್ತಿಕ್ ಸಹ 23 ಎಸೆತಗಳಲ್ಲಿ 37 ರನ್ ಗಳಿಸಿ 200 ರ ಗಡಿ ದಾಟಲು ನೆರವಾದರು.

ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೆ ಸಾಧ್ಯವಾಯಿತು. ಕೆ.ಎಲ್ ರಾಹುಲ್ 79 ರನ್ ಮತ್ತು ದೀಪಕ್ ಹೂಡಾ 45 ರನ್ ಗಳಿಸಿದರೂ ತಂಡ ಗೆಲುವಿನ ಗೆರೆ ದಾಟಲಾಗಲಿಲ್ಲ. ಆರ್‌ಸಿಬಿ ಬೌಲರ್ ಹರ್ಷಲ್ ಪಟೇಲ್‌ ನಡೆಸಿದ ಬಿಗುವಿನ ದಾಳಿಯೇ ಅದಕ್ಕೆ ಪ್ರಮುಖ ಕಾರಣ. ಅವರು 4 ಓವರ್‌ಗಳಲ್ಲಿ 1 ವಿಕೆಟ್ ಗಳಿಸಿ ಕೇವಲ 25 ರನ್ ನೀಡಿದರು.

ಈ ಗೆಲುವಿನ ಮೂಲಕ ಆರ್‌ಸಿಬಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಎದುರು ಮೇ 27ರ ಶುಕ್ರವಾರ ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದಲ್ಲಿ ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಬೇಕಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ರಾಜಸ್ಥಾನ ಮತ್ತು ಗುಜರಾತ್ ಎದುರು ಗೆಲ್ಲುವುದು ಸುಲಭದ ಮಾತಲ್ಲ. ಆದರೆ ಆರ್‌ಸಿಬಿಯಲ್ಲಿಯೂ ಪ್ರತಿಭಾವಂತ ಆಟಗಾರರಿದ್ದಾರೆ. ಅವರು ಪ್ರದರ್ಶನ ನೀಡಿದ್ದಲ್ಲಿ ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆಗಬಹುದಾಗಿದೆ.

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ. ಈ ಬಾರಿಯಾದರೂ ಗೆದ್ದು ಅಭಿಮಾನಿಗಳ ಮನ ತಣಿಸಲಿದೆಯೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...