Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ...

‘ಈ ಸಲ ಕಪ್ ನಮ್ದೆ’ ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ ಬಾಕಿ

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ.

- Advertisement -
- Advertisement -

ಬುಧವಾರ ಮಧ್ಯರಾತ್ರಿ ಲಕ್ನೋ ವಿರುದ್ಧ ಬೆಂಗಳೂರು 14 ರನ್‌ಗಳ ಅಂತರದ ಗೆಲುವು ಸಾಧಿಸುತ್ತಲೇ RCB ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂಬ ಘೋಷಣೆ ಶುರು ಮಾಡಿದ್ದಾರೆ. ಆರ್‌ಸಿಬಿ ಸತತ ಇನ್ನೆರೆಡು ಮಹತ್ವದ ಪಂದ್ಯಗಳನ್ನು ಗೆದ್ದಲ್ಲಿ ಆ ಘೋಷಣೆ ನಿಜರೂಪಕ್ಕೆ ಬರಲಿದೆ.

2020ರಲ್ಲಿ ಪ್ಲೇ ಆಫ್‌ ಪ್ರವೇಶಿಸಿದ್ದ RCB ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿ ಹೊರಬಂದಿತ್ತು. 2021ರ 14ನೇ ಐಪಿಎಲ್ ಸೀಸನ್‌ನಲ್ಲಿಯೂ ಸಹ ಪ್ಲೇ ಆಫ್‌ ಪ್ರವೇಶಿಸಿದ ಅದು ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ಎದುರು ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಈ ಸಲ ಕಪ್ ನಮ್ದೆ ಎನ್ನುವ ಆಸೆಗೆ ತಣ್ಣೀರು ಎರಚಿದ್ದರು. ಆದರೆ 2022ರ 15ನೇ ಆವೃತ್ತಿಯಲ್ಲಿ ಅದೃಷ್ಟದ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅದೃಷ್ಟದ ಮೂಲಕವೇ ಮಣಿಸಿ ಮುಂದಿನ ಕ್ವಾಲಿಫೈಯರ್ ಹಂತಕ್ಕೆ ತಲುಪಿದೆ. ಆ ಮೂಲಕ ಕಪ್ ತನ್ನದಾಗಿಸಿಕೊಳ್ಳಲು ಆರ್‌ಸಿಬಿಗೆ ಎರಡು ಹೆಜ್ಜೆ ಮಾತ್ರ ಬಾಕಿ ಇದೆ. ಆದರೆ ಆ ಎರಡು ಹೆಜ್ಜೆಗಳು ತೀವ್ರ ಕಠಿಣವಾಗಿವೆ.

ಬುಧವಾರ ರಾತ್ರಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಜಯ ಗಳಿಸಿತು. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ರಜತ್ ಪಾಟಿದಾರ್‌ರವರ ಸ್ಪೋಟಕದ ಶತಕದ (54 ಎಸೆತಗಳಲ್ಲಿ 112ರನ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್‌ ಗಳಿಸಿತು. ಕಡೆಯಲ್ಲಿ ಕ್ರೀಸ್‌ಗಿಳಿಸಿದ ದಿನೇಶ್ ಕಾರ್ತಿಕ್ ಸಹ 23 ಎಸೆತಗಳಲ್ಲಿ 37 ರನ್ ಗಳಿಸಿ 200 ರ ಗಡಿ ದಾಟಲು ನೆರವಾದರು.

ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೆ ಸಾಧ್ಯವಾಯಿತು. ಕೆ.ಎಲ್ ರಾಹುಲ್ 79 ರನ್ ಮತ್ತು ದೀಪಕ್ ಹೂಡಾ 45 ರನ್ ಗಳಿಸಿದರೂ ತಂಡ ಗೆಲುವಿನ ಗೆರೆ ದಾಟಲಾಗಲಿಲ್ಲ. ಆರ್‌ಸಿಬಿ ಬೌಲರ್ ಹರ್ಷಲ್ ಪಟೇಲ್‌ ನಡೆಸಿದ ಬಿಗುವಿನ ದಾಳಿಯೇ ಅದಕ್ಕೆ ಪ್ರಮುಖ ಕಾರಣ. ಅವರು 4 ಓವರ್‌ಗಳಲ್ಲಿ 1 ವಿಕೆಟ್ ಗಳಿಸಿ ಕೇವಲ 25 ರನ್ ನೀಡಿದರು.

ಈ ಗೆಲುವಿನ ಮೂಲಕ ಆರ್‌ಸಿಬಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಎದುರು ಮೇ 27ರ ಶುಕ್ರವಾರ ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದಲ್ಲಿ ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಬೇಕಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ರಾಜಸ್ಥಾನ ಮತ್ತು ಗುಜರಾತ್ ಎದುರು ಗೆಲ್ಲುವುದು ಸುಲಭದ ಮಾತಲ್ಲ. ಆದರೆ ಆರ್‌ಸಿಬಿಯಲ್ಲಿಯೂ ಪ್ರತಿಭಾವಂತ ಆಟಗಾರರಿದ್ದಾರೆ. ಅವರು ಪ್ರದರ್ಶನ ನೀಡಿದ್ದಲ್ಲಿ ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆಗಬಹುದಾಗಿದೆ.

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ. ಈ ಬಾರಿಯಾದರೂ ಗೆದ್ದು ಅಭಿಮಾನಿಗಳ ಮನ ತಣಿಸಲಿದೆಯೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...