Homeಕರ್ನಾಟಕ'ಈದಿನ.ಕಾಮ್' ಯೂಟ್ಯೂಬ್‌ ಚಾನೆಲ್‌ 'ಬ್ಲಾಕ್' ಮಧ್ಯಂತರ ಆದೇಶ ತೆರವು

‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ‘ಬ್ಲಾಕ್’ ಮಧ್ಯಂತರ ಆದೇಶ ತೆರವು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ನಡೆದಿದ್ದ ಕೊಲೆ ಪ್ರಕರಣಗಳು ಮತ್ತು ಸೌಜನ್ಯ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಕುರಿತು ನಿರಂತರ ಸುದ್ದಿ ಮಾಡಿದ್ದಕ್ಕೆ ಕೋರ್ಟ್‌ ಮೂಲಕ ಆದೇಶ ಕೊಡಿಸಿ ‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ಅನ್ನು ಬ್ಲಾಕ್ ಮಾಡಿಸಲಾಗಿತ್ತು. ಪ್ರಕರಣದ ಕುರಿತು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಸುನೀಲ್ ದತ್ ಯಾದವ್ ಅವರ ಪೀಠವು ಚಾನೆಲ್ ‘ಬ್ಲಾಕ್’ ಆದೇಶಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ.

‘ಈದಿನ’ ಯೂಟ್ಯೂಬ್‌ ಚಾನೆಲ್‌ ನಲ್ಲಿ ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ಚರ್ಚೆ ಮಾಡುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿತ್ತು. ಆದರೆ, ಈ ಬೆದರಿಕೆಗೆ ತಲೆಬಾಗದ ಸಂಸ್ಥೆಯು ನ್ಯಾಯಾಂಗ ಹೋರಾಟಕ್ಕೆ ಮುಂದಾಗಿತ್ತು.

2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಆರೋಪಿಗಳು ಯಾರು ಎಂಬುದು ಹತ್ತು ವರ್ಷದ ಬಳಿಕವೂ ಇನ್ನೂ ಪತ್ತೆಯಾಗಿಲ್ಲ. ಇದೊಂದೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನ್ಯಾಯಾಂಗದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ.

ಊರಿನ ಪ್ರಭಾವಿ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿಬರುತ್ತಿರುವ ಹೊತ್ತಿನಲ್ಲಿ, ಅದರ ಕುರಿತು ವಸ್ತುನಿಷ್ಠ ವರದಿ ಮಾಡಿದ ಹಲವು ಸ್ವತಂತ್ರ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳ ಮೇಲೆ ಕೋರ್ಟ್‌ ಮೂಲಕ ನಿರ್ಬಂಧ ಹೇರಲಾಗುತ್ತಿದೆ. ಅದೇ ಪ್ರಭಾವಿ ಕುಟುಂಬದ ಕಾನೂನು ತಂಡವು, ಈದಿನ.ಕಾಮ್, ಕುಡ್ಲ ರಾಂಪ್‌ ಪೇಜ್‌, ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣನವರ್ ಸೇರಿದಂತೆ ಹಲವರ ವಿರುದ್ಧ ಕೋರ್ಟ್‌ನಿಂದ ‘ಬ್ಲಾಕೆಂಟ್’ ಆದೇಶದ ಮೂಲಕ ವಿಡಿಯೊ ಪ್ರಕಟಿಸದಂತೆ ತಡೆ ತಂದಿದ್ದರು.

ಈದಿನ.ಕಾಮ್ ಸೇರಿದಂತೆ ಹಲವು ಚಾನೆಲ್‌ಗಳ ತಡೆಗೆ ಕೋರ್ಟ್‌ ಯೂಟ್ಯೂಬ್‌ ಸಂಸ್ಥೆಗೆ ಆದೇಶ ನೀಡಿದ್ದು, ಈ ಬೆಳವಣಿಗೆಯನ್ನು ಹಲವರು ಖಂಡಿಸಿದ್ದಾರೆ. ಆರೋಪಿತ ‘ಪ್ರಭಾವಿ ಕುಟುಂಬ’ವು ಕಾನೂನುನಿನ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ. ಭಾರತೀಯ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಬರುವ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈದಿನ ತಂಡದ ಪರವಾಗಿ ವಾದಿಸಿದ ಹೈಕೋರ್ಟ್‌ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ, “ಭಾರತದ ಐಟಿ ಕಾಯ್ದೆ ಅಡಿಯಲ್ಲಿ ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಅಥವಾ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ವಿಷಯವನ್ನು ಪ್ರಕಟಿಸಿದಲ್ಲಿ ಮಾತ್ರ ನಿರ್ಬಂಧಿಸಲು ಅಥವಾ ಬ್ಲಾಕ್ ಮಾಡುವ ಅಧಿಕಾರವನ್ನು ಹೊಂದಿದೆ. ಆದರೆ, ಅದ್ಯಾವುದನ್ನು ಮಾಡದೇ ಇದ್ದರೂ ಕೂಡ ಈ ಹಿಂದಿನ ಮಧ್ಯಂತರ ಆದೇಶದ ಮೇರೆಗೆ ಈದಿನ ಯೂಟ್ಯೂಬ್‌ ಅನ್ನು ಬ್ಲಾಕ್ ಮಾಡಲಾಗಿದೆ. ಈದಿನ ಸಂಸ್ಥೆಯು ಈಗಾಗಲೇ 3.8 ಲಕ್ಷ ಚಂದಾದಾರರನ್ನು ಹೊಂದಿದ್ದು, ಈದಿನ ಡಾಟ್ ಕಾಮ್ ಮಾಧ್ಯಮವು ಕಳೆದ ಮೂರು ವರ್ಷಗಳಿಂದ ಸಮಾಜದ, ಸಮುದಾಯದ ಉನ್ನತಿಗಾಗಿ ಕೆಲಸ ಮಾಡುತ್ತಿರುವ ಜವಾಬ್ದಾರಿಯುವ ಮಾಧ್ಯಮ ಸಂಸ್ಥೆಯಾಗಿದೆ. ಹಾಗಾಗಿ, ಈ ಬ್ಲಾಕ್ ಮಾಡುವಂತೆ ಮಾಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಬೇಕು” ಎಂದು ವಿನಂತಿಸಿದರು.

ಈ ಮನವಿಯನ್ನು ಪುರಸ್ಕರಿಸಿದ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು, ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ, ಈ ಹಿಂದಿನ ಸಿವಿಲ್ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದರು. ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶವನ್ನು ಹೈಕೋರ್ಟ್‌ ಪ್ರಕಟಿಸಲಿದೆ.

ಈ ದಿನ ಡಾಟ್‌ ಕಾಮ್ ತಂಡದ ಪರವಾಗಿ ಹೈಕೋರ್ಟ್‌ನಲ್ಲಿ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ , ಮೈತ್ರೇಯಿ ಕೃಷ್ಣನ್ ವಾದಿಸಿದರು. ಧರ್ಮಸ್ಥಳ ದೇವಸ್ಥಾನ ಟ್ರಸ್ಟ್‌ನ ಪರವಾಗಿ ‌ಹಿರಿಯ ವಕೀಲ, ಮಾಜಿ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಹಾಜರಿದ್ದರು.

ಈ ಹಿಂದಿನ ಹೈಕೋರ್ಟ್‌ನ ಮಧ್ಯಂತರ ಆದೇಶದಿಂದಾಗಿ ಈದಿನ ಯೂಟ್ಯೂಬ್ ಚಾನೆಲ್‌ನನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿದ್ದರಿಂದ ಈದಿನ ಟಿವಿ ಯೂಟ್ಯೂಬ್ ಚಾನೆಲ್‌ ಕಾರ್ಯ ನಿರ್ವಹಿಸುತ್ತಿತ್ತು.

ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್‌ಗಳು ಬ್ಲಾಕ್‌; ‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...