Homeಕರ್ನಾಟಕ'ಈದಿನ.ಕಾಮ್' ಯೂಟ್ಯೂಬ್‌ ಚಾನೆಲ್‌ 'ಬ್ಲಾಕ್' ಮಧ್ಯಂತರ ಆದೇಶ ತೆರವು

‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ‘ಬ್ಲಾಕ್’ ಮಧ್ಯಂತರ ಆದೇಶ ತೆರವು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ನಡೆದಿದ್ದ ಕೊಲೆ ಪ್ರಕರಣಗಳು ಮತ್ತು ಸೌಜನ್ಯ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಕುರಿತು ನಿರಂತರ ಸುದ್ದಿ ಮಾಡಿದ್ದಕ್ಕೆ ಕೋರ್ಟ್‌ ಮೂಲಕ ಆದೇಶ ಕೊಡಿಸಿ ‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ಅನ್ನು ಬ್ಲಾಕ್ ಮಾಡಿಸಲಾಗಿತ್ತು. ಪ್ರಕರಣದ ಕುರಿತು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಸುನೀಲ್ ದತ್ ಯಾದವ್ ಅವರ ಪೀಠವು ಚಾನೆಲ್ ‘ಬ್ಲಾಕ್’ ಆದೇಶಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ.

‘ಈದಿನ’ ಯೂಟ್ಯೂಬ್‌ ಚಾನೆಲ್‌ ನಲ್ಲಿ ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ಚರ್ಚೆ ಮಾಡುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿತ್ತು. ಆದರೆ, ಈ ಬೆದರಿಕೆಗೆ ತಲೆಬಾಗದ ಸಂಸ್ಥೆಯು ನ್ಯಾಯಾಂಗ ಹೋರಾಟಕ್ಕೆ ಮುಂದಾಗಿತ್ತು.

2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಆರೋಪಿಗಳು ಯಾರು ಎಂಬುದು ಹತ್ತು ವರ್ಷದ ಬಳಿಕವೂ ಇನ್ನೂ ಪತ್ತೆಯಾಗಿಲ್ಲ. ಇದೊಂದೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನ್ಯಾಯಾಂಗದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ.

ಊರಿನ ಪ್ರಭಾವಿ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿಬರುತ್ತಿರುವ ಹೊತ್ತಿನಲ್ಲಿ, ಅದರ ಕುರಿತು ವಸ್ತುನಿಷ್ಠ ವರದಿ ಮಾಡಿದ ಹಲವು ಸ್ವತಂತ್ರ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳ ಮೇಲೆ ಕೋರ್ಟ್‌ ಮೂಲಕ ನಿರ್ಬಂಧ ಹೇರಲಾಗುತ್ತಿದೆ. ಅದೇ ಪ್ರಭಾವಿ ಕುಟುಂಬದ ಕಾನೂನು ತಂಡವು, ಈದಿನ.ಕಾಮ್, ಕುಡ್ಲ ರಾಂಪ್‌ ಪೇಜ್‌, ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣನವರ್ ಸೇರಿದಂತೆ ಹಲವರ ವಿರುದ್ಧ ಕೋರ್ಟ್‌ನಿಂದ ‘ಬ್ಲಾಕೆಂಟ್’ ಆದೇಶದ ಮೂಲಕ ವಿಡಿಯೊ ಪ್ರಕಟಿಸದಂತೆ ತಡೆ ತಂದಿದ್ದರು.

ಈದಿನ.ಕಾಮ್ ಸೇರಿದಂತೆ ಹಲವು ಚಾನೆಲ್‌ಗಳ ತಡೆಗೆ ಕೋರ್ಟ್‌ ಯೂಟ್ಯೂಬ್‌ ಸಂಸ್ಥೆಗೆ ಆದೇಶ ನೀಡಿದ್ದು, ಈ ಬೆಳವಣಿಗೆಯನ್ನು ಹಲವರು ಖಂಡಿಸಿದ್ದಾರೆ. ಆರೋಪಿತ ‘ಪ್ರಭಾವಿ ಕುಟುಂಬ’ವು ಕಾನೂನುನಿನ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ. ಭಾರತೀಯ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಬರುವ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈದಿನ ತಂಡದ ಪರವಾಗಿ ವಾದಿಸಿದ ಹೈಕೋರ್ಟ್‌ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ, “ಭಾರತದ ಐಟಿ ಕಾಯ್ದೆ ಅಡಿಯಲ್ಲಿ ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಅಥವಾ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ವಿಷಯವನ್ನು ಪ್ರಕಟಿಸಿದಲ್ಲಿ ಮಾತ್ರ ನಿರ್ಬಂಧಿಸಲು ಅಥವಾ ಬ್ಲಾಕ್ ಮಾಡುವ ಅಧಿಕಾರವನ್ನು ಹೊಂದಿದೆ. ಆದರೆ, ಅದ್ಯಾವುದನ್ನು ಮಾಡದೇ ಇದ್ದರೂ ಕೂಡ ಈ ಹಿಂದಿನ ಮಧ್ಯಂತರ ಆದೇಶದ ಮೇರೆಗೆ ಈದಿನ ಯೂಟ್ಯೂಬ್‌ ಅನ್ನು ಬ್ಲಾಕ್ ಮಾಡಲಾಗಿದೆ. ಈದಿನ ಸಂಸ್ಥೆಯು ಈಗಾಗಲೇ 3.8 ಲಕ್ಷ ಚಂದಾದಾರರನ್ನು ಹೊಂದಿದ್ದು, ಈದಿನ ಡಾಟ್ ಕಾಮ್ ಮಾಧ್ಯಮವು ಕಳೆದ ಮೂರು ವರ್ಷಗಳಿಂದ ಸಮಾಜದ, ಸಮುದಾಯದ ಉನ್ನತಿಗಾಗಿ ಕೆಲಸ ಮಾಡುತ್ತಿರುವ ಜವಾಬ್ದಾರಿಯುವ ಮಾಧ್ಯಮ ಸಂಸ್ಥೆಯಾಗಿದೆ. ಹಾಗಾಗಿ, ಈ ಬ್ಲಾಕ್ ಮಾಡುವಂತೆ ಮಾಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಬೇಕು” ಎಂದು ವಿನಂತಿಸಿದರು.

ಈ ಮನವಿಯನ್ನು ಪುರಸ್ಕರಿಸಿದ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು, ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ, ಈ ಹಿಂದಿನ ಸಿವಿಲ್ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದರು. ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶವನ್ನು ಹೈಕೋರ್ಟ್‌ ಪ್ರಕಟಿಸಲಿದೆ.

ಈ ದಿನ ಡಾಟ್‌ ಕಾಮ್ ತಂಡದ ಪರವಾಗಿ ಹೈಕೋರ್ಟ್‌ನಲ್ಲಿ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ , ಮೈತ್ರೇಯಿ ಕೃಷ್ಣನ್ ವಾದಿಸಿದರು. ಧರ್ಮಸ್ಥಳ ದೇವಸ್ಥಾನ ಟ್ರಸ್ಟ್‌ನ ಪರವಾಗಿ ‌ಹಿರಿಯ ವಕೀಲ, ಮಾಜಿ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಹಾಜರಿದ್ದರು.

ಈ ಹಿಂದಿನ ಹೈಕೋರ್ಟ್‌ನ ಮಧ್ಯಂತರ ಆದೇಶದಿಂದಾಗಿ ಈದಿನ ಯೂಟ್ಯೂಬ್ ಚಾನೆಲ್‌ನನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿದ್ದರಿಂದ ಈದಿನ ಟಿವಿ ಯೂಟ್ಯೂಬ್ ಚಾನೆಲ್‌ ಕಾರ್ಯ ನಿರ್ವಹಿಸುತ್ತಿತ್ತು.

ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್‌ಗಳು ಬ್ಲಾಕ್‌; ‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...