Homeಕರ್ನಾಟಕ'ಈದಿನ.ಕಾಮ್' ಯೂಟ್ಯೂಬ್‌ ಚಾನೆಲ್‌ 'ಬ್ಲಾಕ್' ಮಧ್ಯಂತರ ಆದೇಶ ತೆರವು

‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ‘ಬ್ಲಾಕ್’ ಮಧ್ಯಂತರ ಆದೇಶ ತೆರವು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ನಡೆದಿದ್ದ ಕೊಲೆ ಪ್ರಕರಣಗಳು ಮತ್ತು ಸೌಜನ್ಯ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಕುರಿತು ನಿರಂತರ ಸುದ್ದಿ ಮಾಡಿದ್ದಕ್ಕೆ ಕೋರ್ಟ್‌ ಮೂಲಕ ಆದೇಶ ಕೊಡಿಸಿ ‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ಅನ್ನು ಬ್ಲಾಕ್ ಮಾಡಿಸಲಾಗಿತ್ತು. ಪ್ರಕರಣದ ಕುರಿತು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಸುನೀಲ್ ದತ್ ಯಾದವ್ ಅವರ ಪೀಠವು ಚಾನೆಲ್ ‘ಬ್ಲಾಕ್’ ಆದೇಶಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ.

‘ಈದಿನ’ ಯೂಟ್ಯೂಬ್‌ ಚಾನೆಲ್‌ ನಲ್ಲಿ ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ಚರ್ಚೆ ಮಾಡುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿತ್ತು. ಆದರೆ, ಈ ಬೆದರಿಕೆಗೆ ತಲೆಬಾಗದ ಸಂಸ್ಥೆಯು ನ್ಯಾಯಾಂಗ ಹೋರಾಟಕ್ಕೆ ಮುಂದಾಗಿತ್ತು.

2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಆರೋಪಿಗಳು ಯಾರು ಎಂಬುದು ಹತ್ತು ವರ್ಷದ ಬಳಿಕವೂ ಇನ್ನೂ ಪತ್ತೆಯಾಗಿಲ್ಲ. ಇದೊಂದೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನ್ಯಾಯಾಂಗದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ.

ಊರಿನ ಪ್ರಭಾವಿ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿಬರುತ್ತಿರುವ ಹೊತ್ತಿನಲ್ಲಿ, ಅದರ ಕುರಿತು ವಸ್ತುನಿಷ್ಠ ವರದಿ ಮಾಡಿದ ಹಲವು ಸ್ವತಂತ್ರ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳ ಮೇಲೆ ಕೋರ್ಟ್‌ ಮೂಲಕ ನಿರ್ಬಂಧ ಹೇರಲಾಗುತ್ತಿದೆ. ಅದೇ ಪ್ರಭಾವಿ ಕುಟುಂಬದ ಕಾನೂನು ತಂಡವು, ಈದಿನ.ಕಾಮ್, ಕುಡ್ಲ ರಾಂಪ್‌ ಪೇಜ್‌, ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣನವರ್ ಸೇರಿದಂತೆ ಹಲವರ ವಿರುದ್ಧ ಕೋರ್ಟ್‌ನಿಂದ ‘ಬ್ಲಾಕೆಂಟ್’ ಆದೇಶದ ಮೂಲಕ ವಿಡಿಯೊ ಪ್ರಕಟಿಸದಂತೆ ತಡೆ ತಂದಿದ್ದರು.

ಈದಿನ.ಕಾಮ್ ಸೇರಿದಂತೆ ಹಲವು ಚಾನೆಲ್‌ಗಳ ತಡೆಗೆ ಕೋರ್ಟ್‌ ಯೂಟ್ಯೂಬ್‌ ಸಂಸ್ಥೆಗೆ ಆದೇಶ ನೀಡಿದ್ದು, ಈ ಬೆಳವಣಿಗೆಯನ್ನು ಹಲವರು ಖಂಡಿಸಿದ್ದಾರೆ. ಆರೋಪಿತ ‘ಪ್ರಭಾವಿ ಕುಟುಂಬ’ವು ಕಾನೂನುನಿನ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ. ಭಾರತೀಯ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಬರುವ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈದಿನ ತಂಡದ ಪರವಾಗಿ ವಾದಿಸಿದ ಹೈಕೋರ್ಟ್‌ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ, “ಭಾರತದ ಐಟಿ ಕಾಯ್ದೆ ಅಡಿಯಲ್ಲಿ ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಅಥವಾ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ವಿಷಯವನ್ನು ಪ್ರಕಟಿಸಿದಲ್ಲಿ ಮಾತ್ರ ನಿರ್ಬಂಧಿಸಲು ಅಥವಾ ಬ್ಲಾಕ್ ಮಾಡುವ ಅಧಿಕಾರವನ್ನು ಹೊಂದಿದೆ. ಆದರೆ, ಅದ್ಯಾವುದನ್ನು ಮಾಡದೇ ಇದ್ದರೂ ಕೂಡ ಈ ಹಿಂದಿನ ಮಧ್ಯಂತರ ಆದೇಶದ ಮೇರೆಗೆ ಈದಿನ ಯೂಟ್ಯೂಬ್‌ ಅನ್ನು ಬ್ಲಾಕ್ ಮಾಡಲಾಗಿದೆ. ಈದಿನ ಸಂಸ್ಥೆಯು ಈಗಾಗಲೇ 3.8 ಲಕ್ಷ ಚಂದಾದಾರರನ್ನು ಹೊಂದಿದ್ದು, ಈದಿನ ಡಾಟ್ ಕಾಮ್ ಮಾಧ್ಯಮವು ಕಳೆದ ಮೂರು ವರ್ಷಗಳಿಂದ ಸಮಾಜದ, ಸಮುದಾಯದ ಉನ್ನತಿಗಾಗಿ ಕೆಲಸ ಮಾಡುತ್ತಿರುವ ಜವಾಬ್ದಾರಿಯುವ ಮಾಧ್ಯಮ ಸಂಸ್ಥೆಯಾಗಿದೆ. ಹಾಗಾಗಿ, ಈ ಬ್ಲಾಕ್ ಮಾಡುವಂತೆ ಮಾಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಬೇಕು” ಎಂದು ವಿನಂತಿಸಿದರು.

ಈ ಮನವಿಯನ್ನು ಪುರಸ್ಕರಿಸಿದ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು, ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ, ಈ ಹಿಂದಿನ ಸಿವಿಲ್ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದರು. ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶವನ್ನು ಹೈಕೋರ್ಟ್‌ ಪ್ರಕಟಿಸಲಿದೆ.

ಈ ದಿನ ಡಾಟ್‌ ಕಾಮ್ ತಂಡದ ಪರವಾಗಿ ಹೈಕೋರ್ಟ್‌ನಲ್ಲಿ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ , ಮೈತ್ರೇಯಿ ಕೃಷ್ಣನ್ ವಾದಿಸಿದರು. ಧರ್ಮಸ್ಥಳ ದೇವಸ್ಥಾನ ಟ್ರಸ್ಟ್‌ನ ಪರವಾಗಿ ‌ಹಿರಿಯ ವಕೀಲ, ಮಾಜಿ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಹಾಜರಿದ್ದರು.

ಈ ಹಿಂದಿನ ಹೈಕೋರ್ಟ್‌ನ ಮಧ್ಯಂತರ ಆದೇಶದಿಂದಾಗಿ ಈದಿನ ಯೂಟ್ಯೂಬ್ ಚಾನೆಲ್‌ನನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿದ್ದರಿಂದ ಈದಿನ ಟಿವಿ ಯೂಟ್ಯೂಬ್ ಚಾನೆಲ್‌ ಕಾರ್ಯ ನಿರ್ವಹಿಸುತ್ತಿತ್ತು.

ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್‌ಗಳು ಬ್ಲಾಕ್‌; ‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...