Homeಕರ್ನಾಟಕ‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

- Advertisement -
- Advertisement -

ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಸದ್ದು ಮಾಡುತ್ತಿರುವ ‘ಈದಿನ.ಕಾಂ’ ಸಂಸ್ಥೆಯು ಚುನಾವಣಾಪೂರ್ವ ಮೆಗಾ ಸರ್ವೇಯನ್ನು ನಡೆಸಿದ್ದು, “ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ” ಎಂದು ತಿಳಿಸಿದೆ.

ಈಗಾಗಲೇ ಹಂತಹಂತವಾಗಿ ಸಮೀಕ್ಷೆಯ ವಿವರಗಳನ್ನು ಪ್ರಕಟಿಸುತ್ತಿದ್ದು, “ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲಲಿವೆ ಎಂಬ ಮಾಹಿತಿಯನ್ನು ಗುರುವಾರ (ಏಪ್ರಿಲ್ 26) ಪ್ರಕಟಿಸಲಾಗುವುದು” ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿದೆ.

ಈ ಕುರಿತು ಸಮೀಕ್ಷೆಯ ಯೋಜನಾ ಮುಖ್ಯಸ್ಥರಾದ ಡಾ.ಎಚ್.ವಿ.ವಾಸು ಮತ್ತು ‘ಈದಿನ’ ಸಂಪಾದಕರಾದ ಬಸವರಾಜು ಮೇಗಲಕೇರಿಯವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ? ಚುನಾವಣಾ ವಿವರಗಳೇನು?

“ಡಿಜಿಟಲ್ ಯುಗದಲ್ಲಿ ನಾಗರಿಕರೇ ಸುದ್ದಿಯನ್ನು ರೂಪಿಸುವವರು ಮತ್ತು ವಿತರಕರು, ಹಾಗಾಗಿ ಸಿಟಿಜನ್ ಜರ್ನಲಿಸ್ಟರೇ ಕೇಂದ್ರವಾಗಿರುವ ವಿಶಿಷ್ಟ ಮಾಧ್ಯಮ ಪ್ರಯತ್ನವೇ ಈದಿನ.ಕಾಮ್. ಕಳೆದ ಒಂದು ವರ್ಷದಿಂದ ಈ ಪ್ರಯೋಗವು ಹಂತಹಂತವಾಗಿ ಅನಾವರಣಗೊಳ್ಳುತ್ತಿವೆ. ಡಿಜಿಟಲ್ ಮಾಧ್ಯಮಗಳು ಪ್ರತ್ಯೇಕ ದ್ವೀಪಗಳಾಗಿ ಕಾರ್ಯನಿರ್ವಹಿಸುವ ಬದಲು, ಪ್ರಜಾತಂತ್ರದ ಹಿತದೃಷ್ಟಿಯಿಂದ ಪರಸ್ಪರ ಪೂರಕವಾಗಿ ಒಂದು ನೆಟ್ವರ್ಕ್ ಆಗಿ ಕೆಲಸ ಮಾಡಬೇಕೆಂದು ಈದಿನ.ಕಾಮ್ ನಂಬುತ್ತದೆ.”

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ದಿನ.ಕಾಮ್ ನಡೆಸಿದ ಸಮೀಕ್ಷೆಯ ವಿವರಗಳನ್ನು ಈಗಾಗಲೇ www.eedina.com ವೆಬ್‌ಸೈಟಿನಲ್ಲಿ ಏಪ್ರಿಲ್ 22ರಿಂದ ಪ್ರಕಟಿಸಲಾಗುತ್ತಿದೆ. ಕರ್ನಾಟಕದಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಇರುವುದನ್ನು ಈ ಸಮೀಕ್ಷೆ ತೋರಿಸುತ್ತಿದೆ, ನಾಳೆ ಅಂದರೆ ಏಪ್ರಿಲ್ 27ರಂದು ಯಾವ ಪಕ್ಷಗಳಿಗೆ ಎಷ್ಟು ಸೀಟು ಸಿಗಲಿದೆ ಎಂಬ ವಿವರವನ್ನು ಪ್ರಕಟಿಸಲಿದ್ದೇವೆ.

ಸಮೀಕ್ಷೆಯಲ್ಲಿ ಹೊರಬಂದಿರುವ ಸಂಗತಿಗಳು

1. ಕರ್ನಾಟಕದಲ್ಲಿ ಸ್ಪಷ್ಟ ಆಡಳಿತ ವಿರೋಧಿ ಅಲೆ ಇದೆ.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ.

May be an image of text that says "ವಿಧಾನಸಭಾ ಚುನಾವಣೆ 2023 ಈದಿನ.ಕಾಮ್ ಮೆಗಾ ಸರ್ವ ಶದಿನ o.com eedino. ನ್ಯಾಯ ಪ್ರೀತಿ ಕರ್ನಾಟಕದಲ್ಲಿ ಆಡಳಿತ ವಿರೋಧ ಅಲೆ ಯಾವ ಸಮುದಾಯಗಳು ಯಾವ ಪ್ರಮಾಣದಲ್ಲಿ ಬೊಮ್ಮಾಯಿ ಸರ್ಕಾರಕ್ಕೆ ಇನ್ನೊಂದು ಅವಕಾಶ ಕೊಡಬಾರದು ಎಂದಿದ್ದಾರೆ? ಒಟ್ಟು ಬ್ರಾಹ್ಮಣ, 67% ವೈಶ್ಯ ಇತ್ಯಾದಿ 43% 86% ಮುಸ್ಲಿಮರು ಲಿಂಗಾಯತ 47% 78% ಒಕ್ಕಲಿಗ 67% ಪ.ಪಂಗಡ 74% 71% ಪ.ಜಾತಿ ಕುರುಬ Eedina.com Megha Survey ಈದಿನ.ಕಾಂ ಮಾರ್ಚ್ ತರಿಂದ ಏಪ್ರಿಲ್ 21ರವರೆಗೆ ನಡೆಸಿದ ಮೆಗಾಸರ್ವೆ ಫಲಿತಾಂಶ www.eedina.com"

May be an image of text that says "ವಿಧಾನಸಭಾ ಚುನಾವಣೆ 2023 ಈದಿನ. ಕಾಮ್ ಮೆಗಾ ಸರ್ವ ೀದಿನ eedina.com ಸತ್ಯ ನ್ಯಾಯ ।ಪ್ರೀತಿ ಕರ್ನಾಟಕದಲ್ಲಿ ಆಡಳಿತರ ವಿರೋಧ ಅಲೆ ಈದಿನ.ಕಾಂ ಮೆಗಾ ಸರ್ವೆಯ ಮೊದಲ ಪ್ರಶ್ನೆ: ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇನ್ನೊಂದು ಅವಕಾಶ ಕೊಡಬೇಕೇ? 33% ಈ ಸರ್ಕಾರ ಮುಂದುವರೆಯಲಿ 67 ಈ ಸರ್ಕಾರ ಮುಂದುವರೆಯಬಾರದು *ಶೇ.32ರಷ್ಟು ಜನರು ಯಾವ ಅಭಿಪ್ರಾಯವನ್ನೂ ಹೇಳಿಲ್ಲ. ಅಭಿಪ್ರಾಯ ಹೇಳಿರುವವರ ಪೈಕಿ ಮೇಲಿನ ಪ್ರಮಾಣದಲ್ಲಿ ಹೌದು ಅಥವಾ ಇಲ್ಲ ಎಂದಿದ್ದಾರೆ. ಮಾರ್ಚ್ 3ರಿಂದ ಏಪ್ರಿಲ್ 21ರವರೆಗೆ ನಡೆದ ಸಮೀಕ್ಷೆ www.eedina.com"

2. ಬಸವರಾಜ ಬೊಮ್ಮಾಯಿಯವರ ಸರ್ಕಾರವೇ ಇತ್ತೀಚಿನ ಸರ್ಕಾರಗಳಲ್ಲಿ ಅತ್ಯಂತ ಭ್ರಷ್ಟ ಸರ್ಕಾರವೆಂಬ ಅನಿಸಿಕೆ ಜನರಲ್ಲಿದೆ. 33% ಜನರು ಈ ಸರ್ಕಾರ ಅತ್ಯಂತ ಭ್ರಷ್ಟ ಎಂದರೆ, 14% ಜನರು ಯಡಿಯೂರಪ್ಪನವರ ಸರ್ಕಾರವನ್ನೂ 12% ಜನರು ಸಿದ್ದರಾಮಯ್ಯನವರ ಸರ್ಕಾರವನ್ನೂ, 8% ಜನರು ಕುಮಾರಸ್ವಾಮಿಯವರ ಸರ್ಕಾರವನ್ನು ಅತ್ಯಂತ ಭ್ರಷ್ಟವೆಂದು ಹೇಳಿದ್ದಾರೆ.

3. ಮತದಾನವನ್ನು ಪ್ರಭಾವಿಸುವ ಅಂಶಗಳಾಗಿ ಜನರು ಭ್ರಷ್ಟಾಚಾರ, ಬೆಲೆ ಏರಿಕೆ ಮತ್ತು ನಿರುದ್ಯೋಗಗಳನ್ನು ಮೊದಲ ಮೂರು ಸಂಗತಿಗಳಾಗಿ ಗುರುತಿಸಿದ್ದಾರೆ.

4. ರಾಜ್ಯ ಬಿಜೆಪಿ ಸರ್ಕಾರದ್ದೇ ಆದ ಯಾವ ಯೋಜನೆಗಳೂ ಜನರಿಗೆ ನೆನಪಿಲ್ಲ. ಮೂರನೇ ಒಂದು ಭಾಗ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಯಾವುದೇ ಗೊತ್ತಿಲ್ಲ. ಮೂರನೇ ಒಂದು ಭಾಗ ಜನರಿಗೆ ಕಾಂಗ್ರೆಸ್‌ ಗ್ಯಾರಂಟಿಗಳೂ ಗೊತ್ತಿಲ್ಲ; ಗೊತ್ತಿರುವವರಲ್ಲಿ ಅರ್ಧ ಜನಕ್ಕೆ ಅದನ್ನು ಜಾರಿಗೆ ತರುತ್ತಾರೆ ಎಂಬ ವಿಶ್ವಾಸವಿಲ್ಲ.

5. ಸರ್ಕಾರಕ್ಕೆ ಇದ್ದಷ್ಟು ಆಡಳಿತ ವಿರೋಧಿ ಅಲೆ ಶಾಸಕರಿಗಿಲ್ಲ. ಆದರೆ ಹಾಲಿ ಶಾಸಕರ ಪೈಕಿ ಹೆಚ್ಚಿನ ವಿರೋಧ ಬಿಜೆಪಿ ಶಾಸಕರಿಗಿದೆ.

ಸಮೀಕ್ಷೆಯ ವಿಶಿಷ್ಟ ಅಂಶಗಳು

1. ಇದು ಈ ಚುನಾವಣೆಗೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ: 41,169 ಮತದಾರರನ್ನು ಇದರಲ್ಲಿ ಮಾತಾಡಿಸಲಾಗಿದೆ (Very big sample size).

2. (Scientific random sampling) ಯಾವುದೇ ಪೂರ್ವಗ್ರಹ ಕೆಲಸ ಮಾಡದ ರೀತಿಯಲ್ಲಿ ವೈಜ್ಞಾನಿಕವಾಗಿ ಆಯ್ದುಕೊಂಡ ಮತಗಟ್ಟೆಗಳಲ್ಲಿ ಮತ್ತು ಪ್ರತಿ ಮತಗಟ್ಟೆಯಲ್ಲಿ ವೈಜ್ಞಾನಿಕವಾಗಿ ಆಯ್ದುಕೊಂಡ ಮತದಾರರ ಪಟ್ಟಿಯಲ್ಲಿರುವವರ ಪ್ರತಿಕ್ರಿಯೆಗಳನ್ನು ಪಡೆಯಲಾಗಿದೆ.

3. ಸಮೀಕ್ಷೆಯನ್ನು ಬಹುತೇಕ ರಾಜ್ಯದಾದ್ಯಂತ ಇರುವ ನಾಗರಿಕ ಪತ್ರಕರ್ತರು (ಮೀಡಿಯಾ ಜರ್ನಲಿಸ್ಟ್) ನಡೆಸಿರುತ್ತಾರೆ.

4. ಇದು ದೂರವಾಣಿ ಮೂಲಕ ನಡೆದ ಸಮೀಕ್ಷೆ ಅಲ್ಲ. ಮತದಾರರನ್ನು ಅವರವರ ಮನೆಗಳಲ್ಲೇ ಮಾತನಾಡಿಸಲಾದ ಮುಖಾಮುಖಿ ಸಮೀಕ್ಷೆ.

5. ನಮ್ಮ ಡೇಟಾ ಪರಿಶೀಲನೆಯ ಪ್ರಕ್ರಿಯೆ ಮುಗಿದ ನಂತರ ಸಂಶೋಧನೆ ಮಾಡಬಯಸುವ ವಿಶ್ವವಿದ್ಯಾಲಯಗಳು ಕೇಳಿದರೆ ಅವರಿಗೆ ಸಂಪೂರ್ಣ ಡೇಟಾ ಕೊಡಲಾಗುವುದು.

6. ಇಂದು (ಏಪ್ರಿಲ್ 26) ನಾವು ವಿವಿಧ ಪಕ್ಷಗಳು, ಸಮುದಾಯಗಳು ಮತ್ತು ಪ್ರದೇಶವಾರು ಪಡೆಯಬಹುದಾದ ಮತಗಳ ಅಂದಾಜು ನೀಡುತ್ತೇವೆ.

7. ನಾಳೆ (ಏಪ್ರಿಲ್ 27) ಸೀಟು ಹಂಚಿಕೆಯ ವಿವರಗಳನ್ನು ನೀಡಲಿದ್ದೇವೆ.

ಇಂತಹ ಸಮೀಕ್ಷೆಗಳ ಅಂತಿಮ ಫಲಿತಾಂಶ ಮತ್ತು ಅಂಕಿ-ಸಂಖ್ಯೆಗಳು ಮಾತ್ರವಲ್ಲದೇ, ಅಳವಡಿಸಿದ ವಿಧಾನ ಹಾಗೂ ಪೂರ್ಣ ದತ್ತಾಂಶಗಳೂ ಸಹಾ ಮುಕ್ತವಾಗಿರಬೇಕು ಎಂದು ಈದಿನ.ಕಾಮ್ ನಂಬುತ್ತದೆ. ಸುಮಾರು 23 ವಿವಿಧ ಅಂಶಗಳನ್ನು (Variable) ಬಳಸಿರುವ ಈ ಸಮೀಕ್ಷೆಯು ಸಂಶೋಧನಾರ್ಥಿಗಳಿಗೆ ಅಪಾರ ಪ್ರಮಾಣದ ವಿವರಗಳನ್ನು ಒದಗಿಸುತ್ತವೆ. ಹಾಗಾಗಿ ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದ ರಾಜಕೀಯ ಶಾಸ್ತ್ರ ಅಥವಾ ಇನ್ನಿತರ ವಿಭಾಗಗಳ ಸಂಶೋಧನಾ ಕೇಂದ್ರಗಳಿಗೆ ಅದನ್ನು ನೀಡಲಾಗುತ್ತದೆ.

ಸೀಟು ಹಂಚಿಕೆಯ ವಿವರಗಳನ್ನು ಏಪ್ರಿಲ್ 27 ರಂದು ಪ್ರಸ್ತುತಪಡಿಸಲಾಗುತ್ತದೆ. ಅದೇ ಸಮಯದಲ್ಲಿ ಪ್ರಕಟಿಸಲು ಆಸಕ್ತಿ ತೋರುವ ಇತರ ಮಾಧ್ಯಮ ಸಂಸ್ಥೆಗಳೊಂದಿಗೆ ಈ ವಿವರಗಳನ್ನು ಹಂಚಿಕೊಳ್ಳಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...