Homeಕರ್ನಾಟಕ‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ - ಸ್ಪಷ್ಟ ಬಹುಮತ

‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ – ಸ್ಪಷ್ಟ ಬಹುಮತ

- Advertisement -
- Advertisement -

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಇಂದು (ಗುರುವಾರ) ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಹೇಳಿದೆ. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿದೆ.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯಿಂದ ಸಿಕ್ಕಿರುವ ಸಂಖ್ಯೆಗಳು ಹೇಳುತ್ತಿವೆ” ಎಂದು ‘ಈದಿನ’ ಹೇಳಿದೆ.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿದೆ.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿದೆ.

ಕಾಂಗ್ರೆಸ್‌ಗೆ 132-140 ಸ್ಥಾನ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿದೆ ಸರ್ವೇ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿದೆ.

ಹೈದ್ರಾಬಾದ್ ಕರ್ನಾಟಕದಲ್ಲಿನ 50 ಸ್ಥಾನಗಳ ಪೈಕಿ ಕಾಂಗ್ರೆಸ್‌ 31-37, ಬಿಜೆಪಿ 2-4, ಜೆಡಿಎಸ್‌ 2-4; ಮುಂಬಯಿ ಕರ್ನಾಟಕದಲ್ಲಿನ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 40-46, ಬಿಜೆಪಿ 3-7, ಜೆಡಿಎಸ್‌ 0-2;  ಕರಾವಳಿ ಕರ್ನಾಟಕದಲ್ಲಿನ 19 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 5-9, ಬಿಜೆಪಿ 10-14, ಜೆಡಿಎಸ್ – 0, ಮಧ್ಯ ಕರ್ನಾಟಕದಲ್ಲಿನ  26 ಸ್ಥಾನಗಳಲ್ಲಿ ಕಾಂಗ್ರೆಸ್‌ 3-7, ಬಿಜೆಪಿ 19-13, ಜೆಡಿಎಸ್‌- 0, ದಕ್ಷಿಣ ಕರ್ನಾಟಕದಲ್ಲಿನ 61 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 26-32, ಬಿಜೆಪಿ 10-14, ಜೆಡಿಎಸ್‌ 15-19, ಬೆಂಗಳೂರು ನಗರದಲ್ಲಿನ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ 16-20, ಬಿಜೆಪಿ 6-10, ಜೆಡಿಎಸ್‌ 1-3 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆ ದೃಢಪಡಿಸಿದೆ.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ. ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿದೆ.

ಎಬಿಪಿ ಸಿ-ವೋಟರ್‌ ಸಮೀಕ್ಷೆಯಲ್ಲೂ ಕಾಂಗ್ರೆಸ್‌ಗೆ ಬಹುಮತ

ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ ಪಕ್ಷ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯಲ್ಲೂ ಕಾಂಗ್ರೆಸ್ ಮೈಲುಗೈ

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯ ವರದಿ ಪ್ರಕಾರ, ಕಾಂಗ್ರೆಸ್ ಪಕ್ಷವು 106 ರಿಂದ 116 ಸ್ಥಾನ ಗಳಿಸುವ ಸಾಧ್ಯತೆ ಇದೆ. ಆಡಳಿತಾರೂಢ ಬಿಜೆಪಿ 79ರಿಂದ 89 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಜೆಡಿಎಸ್​​ಗೆ 24 ರಿಂದ 34 ಸ್ಥಾನ ದೊರೆತರೆ ಇತರರು 0 ಯಿಂದ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಪ್ರತಿಪಕ್ಷ ಕಾಂಗ್ರೆಸ್ ಶೇ. 40 ರಷ್ಟು ಮತಹಂಚಿಕೆ ಪಡೆಯುವ ನಿರೀಕ್ಷೆಯಿದೆ. ಆಡಳಿತಾರೂಢ ಬಿಜೆಪಿ ಶೇ. 33.9 ಮತ್ತು ಜೆಡಿಎಸ್ ಶೇ. 18.8ರಷ್ಟು ಮತ ಹಂಚಿಕೆ ಪಡೆಯಲಿದೆ ಎಂದು ‘ಟಿವಿ9 ಕನ್ನಡ’ ಮತ್ತು ‘ಸಿವೋಟರ್’ ಸಮೀಕ್ಷಾ ವರದಿ ತಿಳಿಸಿದೆ.

ಜನ್‌ಕೀ ಬಾತ್‌ನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ

ಜನ್‌ ಕೀ ಬಾತ್‌ ಸಮೀಕ್ಷೆಯ ಪ್ರಕಾರ ಬಿಜೆಪಿ 98ರಿಂದ 109 ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರತಿಪಕ್ಷ ಕಾಂಗ್ರೆಸ್‌ 89ರಿಂದ 97 ಸ್ಥಾನಗಳೊಂದಿಗೆ 2ನೇ ಅತಿದೊಡ್ಡ ಪಕ್ಷ ಎನಿಸಿಕೊಳ್ಳಲಿದೆ. ಜೆಡಿಎಸ್‌ 25ರಿಂದ 29 ಸ್ಥಾನಗಳನ್ನಷ್ಟೇ ಗಳಿಸಲಿದೆ. ಇತರರು ಕೇವಲ 1 ಸ್ಥಾನ ಪಡೆಯಲಿದ್ದಾರೆ. 224 ಸದಸ್ಯಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯಬೇಕಿದ್ದರೆ ಕನಿಷ್ಠ 113 ಸ್ಥಾನ ಗಳಿಸಬೇಕಿದ್ದು, ಈ ಬಾರಿ ಆ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಸಮೀಕ್ಷೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...