Homeಕರ್ನಾಟಕ‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ - ಸ್ಪಷ್ಟ ಬಹುಮತ

‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ – ಸ್ಪಷ್ಟ ಬಹುಮತ

- Advertisement -
- Advertisement -

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಇಂದು (ಗುರುವಾರ) ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಹೇಳಿದೆ. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿದೆ.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯಿಂದ ಸಿಕ್ಕಿರುವ ಸಂಖ್ಯೆಗಳು ಹೇಳುತ್ತಿವೆ” ಎಂದು ‘ಈದಿನ’ ಹೇಳಿದೆ.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿದೆ.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿದೆ.

ಕಾಂಗ್ರೆಸ್‌ಗೆ 132-140 ಸ್ಥಾನ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿದೆ ಸರ್ವೇ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿದೆ.

ಹೈದ್ರಾಬಾದ್ ಕರ್ನಾಟಕದಲ್ಲಿನ 50 ಸ್ಥಾನಗಳ ಪೈಕಿ ಕಾಂಗ್ರೆಸ್‌ 31-37, ಬಿಜೆಪಿ 2-4, ಜೆಡಿಎಸ್‌ 2-4; ಮುಂಬಯಿ ಕರ್ನಾಟಕದಲ್ಲಿನ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 40-46, ಬಿಜೆಪಿ 3-7, ಜೆಡಿಎಸ್‌ 0-2;  ಕರಾವಳಿ ಕರ್ನಾಟಕದಲ್ಲಿನ 19 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 5-9, ಬಿಜೆಪಿ 10-14, ಜೆಡಿಎಸ್ – 0, ಮಧ್ಯ ಕರ್ನಾಟಕದಲ್ಲಿನ  26 ಸ್ಥಾನಗಳಲ್ಲಿ ಕಾಂಗ್ರೆಸ್‌ 3-7, ಬಿಜೆಪಿ 19-13, ಜೆಡಿಎಸ್‌- 0, ದಕ್ಷಿಣ ಕರ್ನಾಟಕದಲ್ಲಿನ 61 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 26-32, ಬಿಜೆಪಿ 10-14, ಜೆಡಿಎಸ್‌ 15-19, ಬೆಂಗಳೂರು ನಗರದಲ್ಲಿನ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ 16-20, ಬಿಜೆಪಿ 6-10, ಜೆಡಿಎಸ್‌ 1-3 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆ ದೃಢಪಡಿಸಿದೆ.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ. ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿದೆ.

ಎಬಿಪಿ ಸಿ-ವೋಟರ್‌ ಸಮೀಕ್ಷೆಯಲ್ಲೂ ಕಾಂಗ್ರೆಸ್‌ಗೆ ಬಹುಮತ

ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ ಪಕ್ಷ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯಲ್ಲೂ ಕಾಂಗ್ರೆಸ್ ಮೈಲುಗೈ

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯ ವರದಿ ಪ್ರಕಾರ, ಕಾಂಗ್ರೆಸ್ ಪಕ್ಷವು 106 ರಿಂದ 116 ಸ್ಥಾನ ಗಳಿಸುವ ಸಾಧ್ಯತೆ ಇದೆ. ಆಡಳಿತಾರೂಢ ಬಿಜೆಪಿ 79ರಿಂದ 89 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಜೆಡಿಎಸ್​​ಗೆ 24 ರಿಂದ 34 ಸ್ಥಾನ ದೊರೆತರೆ ಇತರರು 0 ಯಿಂದ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಪ್ರತಿಪಕ್ಷ ಕಾಂಗ್ರೆಸ್ ಶೇ. 40 ರಷ್ಟು ಮತಹಂಚಿಕೆ ಪಡೆಯುವ ನಿರೀಕ್ಷೆಯಿದೆ. ಆಡಳಿತಾರೂಢ ಬಿಜೆಪಿ ಶೇ. 33.9 ಮತ್ತು ಜೆಡಿಎಸ್ ಶೇ. 18.8ರಷ್ಟು ಮತ ಹಂಚಿಕೆ ಪಡೆಯಲಿದೆ ಎಂದು ‘ಟಿವಿ9 ಕನ್ನಡ’ ಮತ್ತು ‘ಸಿವೋಟರ್’ ಸಮೀಕ್ಷಾ ವರದಿ ತಿಳಿಸಿದೆ.

ಜನ್‌ಕೀ ಬಾತ್‌ನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ

ಜನ್‌ ಕೀ ಬಾತ್‌ ಸಮೀಕ್ಷೆಯ ಪ್ರಕಾರ ಬಿಜೆಪಿ 98ರಿಂದ 109 ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರತಿಪಕ್ಷ ಕಾಂಗ್ರೆಸ್‌ 89ರಿಂದ 97 ಸ್ಥಾನಗಳೊಂದಿಗೆ 2ನೇ ಅತಿದೊಡ್ಡ ಪಕ್ಷ ಎನಿಸಿಕೊಳ್ಳಲಿದೆ. ಜೆಡಿಎಸ್‌ 25ರಿಂದ 29 ಸ್ಥಾನಗಳನ್ನಷ್ಟೇ ಗಳಿಸಲಿದೆ. ಇತರರು ಕೇವಲ 1 ಸ್ಥಾನ ಪಡೆಯಲಿದ್ದಾರೆ. 224 ಸದಸ್ಯಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯಬೇಕಿದ್ದರೆ ಕನಿಷ್ಠ 113 ಸ್ಥಾನ ಗಳಿಸಬೇಕಿದ್ದು, ಈ ಬಾರಿ ಆ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಸಮೀಕ್ಷೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...