Homeಕರ್ನಾಟಕ‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ - ಸ್ಪಷ್ಟ ಬಹುಮತ

‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ – ಸ್ಪಷ್ಟ ಬಹುಮತ

- Advertisement -
- Advertisement -

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಇಂದು (ಗುರುವಾರ) ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಹೇಳಿದೆ. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿದೆ.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯಿಂದ ಸಿಕ್ಕಿರುವ ಸಂಖ್ಯೆಗಳು ಹೇಳುತ್ತಿವೆ” ಎಂದು ‘ಈದಿನ’ ಹೇಳಿದೆ.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿದೆ.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿದೆ.

ಕಾಂಗ್ರೆಸ್‌ಗೆ 132-140 ಸ್ಥಾನ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿದೆ ಸರ್ವೇ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿದೆ.

ಹೈದ್ರಾಬಾದ್ ಕರ್ನಾಟಕದಲ್ಲಿನ 50 ಸ್ಥಾನಗಳ ಪೈಕಿ ಕಾಂಗ್ರೆಸ್‌ 31-37, ಬಿಜೆಪಿ 2-4, ಜೆಡಿಎಸ್‌ 2-4; ಮುಂಬಯಿ ಕರ್ನಾಟಕದಲ್ಲಿನ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 40-46, ಬಿಜೆಪಿ 3-7, ಜೆಡಿಎಸ್‌ 0-2;  ಕರಾವಳಿ ಕರ್ನಾಟಕದಲ್ಲಿನ 19 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 5-9, ಬಿಜೆಪಿ 10-14, ಜೆಡಿಎಸ್ – 0, ಮಧ್ಯ ಕರ್ನಾಟಕದಲ್ಲಿನ  26 ಸ್ಥಾನಗಳಲ್ಲಿ ಕಾಂಗ್ರೆಸ್‌ 3-7, ಬಿಜೆಪಿ 19-13, ಜೆಡಿಎಸ್‌- 0, ದಕ್ಷಿಣ ಕರ್ನಾಟಕದಲ್ಲಿನ 61 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 26-32, ಬಿಜೆಪಿ 10-14, ಜೆಡಿಎಸ್‌ 15-19, ಬೆಂಗಳೂರು ನಗರದಲ್ಲಿನ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ 16-20, ಬಿಜೆಪಿ 6-10, ಜೆಡಿಎಸ್‌ 1-3 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆ ದೃಢಪಡಿಸಿದೆ.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ. ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿದೆ.

ಎಬಿಪಿ ಸಿ-ವೋಟರ್‌ ಸಮೀಕ್ಷೆಯಲ್ಲೂ ಕಾಂಗ್ರೆಸ್‌ಗೆ ಬಹುಮತ

ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ ಪಕ್ಷ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯಲ್ಲೂ ಕಾಂಗ್ರೆಸ್ ಮೈಲುಗೈ

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯ ವರದಿ ಪ್ರಕಾರ, ಕಾಂಗ್ರೆಸ್ ಪಕ್ಷವು 106 ರಿಂದ 116 ಸ್ಥಾನ ಗಳಿಸುವ ಸಾಧ್ಯತೆ ಇದೆ. ಆಡಳಿತಾರೂಢ ಬಿಜೆಪಿ 79ರಿಂದ 89 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಜೆಡಿಎಸ್​​ಗೆ 24 ರಿಂದ 34 ಸ್ಥಾನ ದೊರೆತರೆ ಇತರರು 0 ಯಿಂದ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಪ್ರತಿಪಕ್ಷ ಕಾಂಗ್ರೆಸ್ ಶೇ. 40 ರಷ್ಟು ಮತಹಂಚಿಕೆ ಪಡೆಯುವ ನಿರೀಕ್ಷೆಯಿದೆ. ಆಡಳಿತಾರೂಢ ಬಿಜೆಪಿ ಶೇ. 33.9 ಮತ್ತು ಜೆಡಿಎಸ್ ಶೇ. 18.8ರಷ್ಟು ಮತ ಹಂಚಿಕೆ ಪಡೆಯಲಿದೆ ಎಂದು ‘ಟಿವಿ9 ಕನ್ನಡ’ ಮತ್ತು ‘ಸಿವೋಟರ್’ ಸಮೀಕ್ಷಾ ವರದಿ ತಿಳಿಸಿದೆ.

ಜನ್‌ಕೀ ಬಾತ್‌ನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ

ಜನ್‌ ಕೀ ಬಾತ್‌ ಸಮೀಕ್ಷೆಯ ಪ್ರಕಾರ ಬಿಜೆಪಿ 98ರಿಂದ 109 ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರತಿಪಕ್ಷ ಕಾಂಗ್ರೆಸ್‌ 89ರಿಂದ 97 ಸ್ಥಾನಗಳೊಂದಿಗೆ 2ನೇ ಅತಿದೊಡ್ಡ ಪಕ್ಷ ಎನಿಸಿಕೊಳ್ಳಲಿದೆ. ಜೆಡಿಎಸ್‌ 25ರಿಂದ 29 ಸ್ಥಾನಗಳನ್ನಷ್ಟೇ ಗಳಿಸಲಿದೆ. ಇತರರು ಕೇವಲ 1 ಸ್ಥಾನ ಪಡೆಯಲಿದ್ದಾರೆ. 224 ಸದಸ್ಯಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯಬೇಕಿದ್ದರೆ ಕನಿಷ್ಠ 113 ಸ್ಥಾನ ಗಳಿಸಬೇಕಿದ್ದು, ಈ ಬಾರಿ ಆ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಸಮೀಕ್ಷೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...