Homeಕರ್ನಾಟಕ‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ - ಸ್ಪಷ್ಟ ಬಹುಮತ

‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ – ಸ್ಪಷ್ಟ ಬಹುಮತ

- Advertisement -
- Advertisement -

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಇಂದು (ಗುರುವಾರ) ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಹೇಳಿದೆ. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿದೆ.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯಿಂದ ಸಿಕ್ಕಿರುವ ಸಂಖ್ಯೆಗಳು ಹೇಳುತ್ತಿವೆ” ಎಂದು ‘ಈದಿನ’ ಹೇಳಿದೆ.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿದೆ.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿದೆ.

ಕಾಂಗ್ರೆಸ್‌ಗೆ 132-140 ಸ್ಥಾನ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿದೆ ಸರ್ವೇ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿದೆ.

ಹೈದ್ರಾಬಾದ್ ಕರ್ನಾಟಕದಲ್ಲಿನ 50 ಸ್ಥಾನಗಳ ಪೈಕಿ ಕಾಂಗ್ರೆಸ್‌ 31-37, ಬಿಜೆಪಿ 2-4, ಜೆಡಿಎಸ್‌ 2-4; ಮುಂಬಯಿ ಕರ್ನಾಟಕದಲ್ಲಿನ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 40-46, ಬಿಜೆಪಿ 3-7, ಜೆಡಿಎಸ್‌ 0-2;  ಕರಾವಳಿ ಕರ್ನಾಟಕದಲ್ಲಿನ 19 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 5-9, ಬಿಜೆಪಿ 10-14, ಜೆಡಿಎಸ್ – 0, ಮಧ್ಯ ಕರ್ನಾಟಕದಲ್ಲಿನ  26 ಸ್ಥಾನಗಳಲ್ಲಿ ಕಾಂಗ್ರೆಸ್‌ 3-7, ಬಿಜೆಪಿ 19-13, ಜೆಡಿಎಸ್‌- 0, ದಕ್ಷಿಣ ಕರ್ನಾಟಕದಲ್ಲಿನ 61 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 26-32, ಬಿಜೆಪಿ 10-14, ಜೆಡಿಎಸ್‌ 15-19, ಬೆಂಗಳೂರು ನಗರದಲ್ಲಿನ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ 16-20, ಬಿಜೆಪಿ 6-10, ಜೆಡಿಎಸ್‌ 1-3 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆ ದೃಢಪಡಿಸಿದೆ.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ. ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿದೆ.

ಎಬಿಪಿ ಸಿ-ವೋಟರ್‌ ಸಮೀಕ್ಷೆಯಲ್ಲೂ ಕಾಂಗ್ರೆಸ್‌ಗೆ ಬಹುಮತ

ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ ಪಕ್ಷ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯಲ್ಲೂ ಕಾಂಗ್ರೆಸ್ ಮೈಲುಗೈ

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯ ವರದಿ ಪ್ರಕಾರ, ಕಾಂಗ್ರೆಸ್ ಪಕ್ಷವು 106 ರಿಂದ 116 ಸ್ಥಾನ ಗಳಿಸುವ ಸಾಧ್ಯತೆ ಇದೆ. ಆಡಳಿತಾರೂಢ ಬಿಜೆಪಿ 79ರಿಂದ 89 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಜೆಡಿಎಸ್​​ಗೆ 24 ರಿಂದ 34 ಸ್ಥಾನ ದೊರೆತರೆ ಇತರರು 0 ಯಿಂದ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಪ್ರತಿಪಕ್ಷ ಕಾಂಗ್ರೆಸ್ ಶೇ. 40 ರಷ್ಟು ಮತಹಂಚಿಕೆ ಪಡೆಯುವ ನಿರೀಕ್ಷೆಯಿದೆ. ಆಡಳಿತಾರೂಢ ಬಿಜೆಪಿ ಶೇ. 33.9 ಮತ್ತು ಜೆಡಿಎಸ್ ಶೇ. 18.8ರಷ್ಟು ಮತ ಹಂಚಿಕೆ ಪಡೆಯಲಿದೆ ಎಂದು ‘ಟಿವಿ9 ಕನ್ನಡ’ ಮತ್ತು ‘ಸಿವೋಟರ್’ ಸಮೀಕ್ಷಾ ವರದಿ ತಿಳಿಸಿದೆ.

ಜನ್‌ಕೀ ಬಾತ್‌ನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ

ಜನ್‌ ಕೀ ಬಾತ್‌ ಸಮೀಕ್ಷೆಯ ಪ್ರಕಾರ ಬಿಜೆಪಿ 98ರಿಂದ 109 ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರತಿಪಕ್ಷ ಕಾಂಗ್ರೆಸ್‌ 89ರಿಂದ 97 ಸ್ಥಾನಗಳೊಂದಿಗೆ 2ನೇ ಅತಿದೊಡ್ಡ ಪಕ್ಷ ಎನಿಸಿಕೊಳ್ಳಲಿದೆ. ಜೆಡಿಎಸ್‌ 25ರಿಂದ 29 ಸ್ಥಾನಗಳನ್ನಷ್ಟೇ ಗಳಿಸಲಿದೆ. ಇತರರು ಕೇವಲ 1 ಸ್ಥಾನ ಪಡೆಯಲಿದ್ದಾರೆ. 224 ಸದಸ್ಯಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯಬೇಕಿದ್ದರೆ ಕನಿಷ್ಠ 113 ಸ್ಥಾನ ಗಳಿಸಬೇಕಿದ್ದು, ಈ ಬಾರಿ ಆ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಸಮೀಕ್ಷೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...