Homeಕರ್ನಾಟಕನಿಜವಾಯಿತು ‘ಈದಿನ’ ಚುನಾವಣಾಪೂರ್ವ ಸಮೀಕ್ಷೆ: ಅಲ್ಲಗಳೆದಿದ್ದ ಬಿ.ಎಲ್.ಸಂತೋಷ್‌ಗೆ ಮುಖಭಂಗ

ನಿಜವಾಯಿತು ‘ಈದಿನ’ ಚುನಾವಣಾಪೂರ್ವ ಸಮೀಕ್ಷೆ: ಅಲ್ಲಗಳೆದಿದ್ದ ಬಿ.ಎಲ್.ಸಂತೋಷ್‌ಗೆ ಮುಖಭಂಗ

- Advertisement -
- Advertisement -

ಚುನಾವಣೆ ಸಂದರ್ಭದಲ್ಲಿ ಹಲವಾರು ಸಮೀಕ್ಷೆಗಳು ಬರುತ್ತವೆ ಹೋಗುತ್ತವೆ, ಆದರೆ ಕನ್ನಡದ ಡಿಜಿಟಲ್ ಮಾಧ್ಯಮವೊಂದು ಮಾಡಿದ ಸಮೀಕ್ಷೆ ನಿಖರವಾಗಿದೆ. ‘ಈದಿನ’ ಮಾಧ್ಯಮ ಮಾಡಿದ್ದ ಚುನಾವಣಾಪೂರ್ವ ಸಮೀಕ್ಷೆಯ ಅಂಕಿ-ಅಂಶಗಳು ಈಗ ಎಲ್ಲರೂ ನಿಬ್ಬೇರಿಸುವುದಕ್ಕೆ ಕಾರಣವಾಗಿವೆ.

‘ಈದಿನ’ ನಡೆಸಿದ ಸಮೀಕ್ಷೆಯನ್ನು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅಲ್ಲಗಳೆದಿದ್ದರು. ಇದೊಂದು ಕೃತಕವಾಗಿ ಸೃಷ್ಟಿಸಲಾದ ಸಮೀಕ್ಷೆ ಎಂದು ಟೀಕಿಸಿದ್ದ ಅವರು ಈಗ ಮುಖಭಂಗ ಅನುಭವಿಸಿದ್ದಾರೆ.

“ನಮ್ಮ ಸಮೀಕ್ಷೆ ನಿಖರವಾಗಿದೆ. ನೀವು ಬಂದು ಪರಿಶೀಲನೆ ಮಾಡಬಹುದು” ಎಂದು ಈದಿನ ಮಾಧ್ಯಮ ಸಂತೋಷ್ ಅವರಿಗೆ ಸವಾಲು ಹಾಕಿತ್ತು.

ಈದಿನ ಸಮೀಕ್ಷೆ ಏನು ಹೇಳಿತ್ತು?

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿತ್ತು. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿತ್ತು.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿತ್ತು.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು” ಎಂದು ಈದಿನ ಹೇಳಿತ್ತು.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿತ್ತು.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿತ್ತು.

ಕಾಂಗ್ರೆಸ್‌ಗೆ 132-140 ಸ್ಥಾನ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿತ್ತು ಸರ್ವೇ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿತ್ತು.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ. ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿತ್ತು.

ಸಮೀಕ್ಷೆಯ ವಿವರಗಳನ್ನು ಸಮೀಕ್ಷಾ ತಜ್ಞ ಹಾಗೂ ರಾಜಕೀಯ ಚಿಂತಕರಾದ ಪ್ರೊ.ಯೋಗೇಂದ್ರ ಯಾದವ್ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಕಾಂಗ್ರೆಸ್‌ ನಾಯಕರ ರಾಹುಲ್ ಗಾಂಧಿ ಮತ್ತು ಯೋಗೇಂದ್ರ ಯಾದವ್ ಅವರ ನಡುವಿನ ಸೌಹಾರ್ದತೆಯನ್ನು ಥಳುಕು ಹಾಕಿದ್ದರು. ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ರಾಹುಲ್ ಅವರು ಮಾಡಿದ ಭಾರತ್ ಜೋಡೋ ಯಾತ್ರೆಗೆ ಅನೇಕ ಕಾಂಗ್ರೆಸ್ಸೇತರರು ಬೆಂಬಲ ನೀಡಿದ್ದರು. ಅದರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರಾಗಿದ್ದು, ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಅದನ್ನು ಪ್ರಸ್ತಾಪಿಸಿದ್ದಂತಿತ್ತು.

“ತನ್ನ ಯಜಮಾನರನ್ನು ಮೆಚ್ಚಿಸಲು ಪಾದಯಾತ್ರೆಗಳು ಮತ್ತು ಆಂದೋಲನಗಳ ನಡುವೆ ಸಮೀಕ್ಷೆಗಳಿಗೆ ಅವರು ಸಮಯ ಕಂಡುಕೊಂಡಿರುವುದು ನಿಜಕ್ಕೂ ಆಶ್ಚರ್ಯಕರ” ಎಂದು ಯೋಗೇಂದ್ರ ಅವರ ಹೆಸರನ್ನು ಟ್ಯಾಗ್ ಮಾಡಿ ಬಿ ಎಲ್ ಸಂತೊಷ್ ಟ್ವೀಟ್ ಮಾಡಿದ್ದರು.

ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯೋಗೇಂದ್ರ ಯಾದವ್‌, “ಸತ್ಯವನ್ನು ಸ್ವಾರಸ್ಯಕರವಾಗಿ ಕಾಣದವರು ಅಡುಗೆಯವರನ್ನೇ (ಈ ಸಂದರ್ಭದಲ್ಲಿ ಕಲ್ಪಿಸಿಕೊಂಡವರು) ದೂಷಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಶಾಸಕರನ್ನು ಖರೀದಿಸಿ ಬಹುಮತದ ಬೇಳೆ ಬೇಯಿಸಿಕೊಳ್ಳುತ್ತಿದ್ದ ಯಾರೋ ಒಬ್ಬರು ಸಮೀಕ್ಷೆಯಿಂದ ತೊಂದರೆಗೀಡಾಗಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯ ಆಂತರಿಕ ಸಮೀಕ್ಷೆಗಳಿಗೆ ಈದಿನ ಸಮೀಕ್ಷೆ ಅನುರಣಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...