Homeಕರ್ನಾಟಕನಿಜವಾಯಿತು ‘ಈದಿನ’ ಚುನಾವಣಾಪೂರ್ವ ಸಮೀಕ್ಷೆ: ಅಲ್ಲಗಳೆದಿದ್ದ ಬಿ.ಎಲ್.ಸಂತೋಷ್‌ಗೆ ಮುಖಭಂಗ

ನಿಜವಾಯಿತು ‘ಈದಿನ’ ಚುನಾವಣಾಪೂರ್ವ ಸಮೀಕ್ಷೆ: ಅಲ್ಲಗಳೆದಿದ್ದ ಬಿ.ಎಲ್.ಸಂತೋಷ್‌ಗೆ ಮುಖಭಂಗ

- Advertisement -
- Advertisement -

ಚುನಾವಣೆ ಸಂದರ್ಭದಲ್ಲಿ ಹಲವಾರು ಸಮೀಕ್ಷೆಗಳು ಬರುತ್ತವೆ ಹೋಗುತ್ತವೆ, ಆದರೆ ಕನ್ನಡದ ಡಿಜಿಟಲ್ ಮಾಧ್ಯಮವೊಂದು ಮಾಡಿದ ಸಮೀಕ್ಷೆ ನಿಖರವಾಗಿದೆ. ‘ಈದಿನ’ ಮಾಧ್ಯಮ ಮಾಡಿದ್ದ ಚುನಾವಣಾಪೂರ್ವ ಸಮೀಕ್ಷೆಯ ಅಂಕಿ-ಅಂಶಗಳು ಈಗ ಎಲ್ಲರೂ ನಿಬ್ಬೇರಿಸುವುದಕ್ಕೆ ಕಾರಣವಾಗಿವೆ.

‘ಈದಿನ’ ನಡೆಸಿದ ಸಮೀಕ್ಷೆಯನ್ನು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅಲ್ಲಗಳೆದಿದ್ದರು. ಇದೊಂದು ಕೃತಕವಾಗಿ ಸೃಷ್ಟಿಸಲಾದ ಸಮೀಕ್ಷೆ ಎಂದು ಟೀಕಿಸಿದ್ದ ಅವರು ಈಗ ಮುಖಭಂಗ ಅನುಭವಿಸಿದ್ದಾರೆ.

“ನಮ್ಮ ಸಮೀಕ್ಷೆ ನಿಖರವಾಗಿದೆ. ನೀವು ಬಂದು ಪರಿಶೀಲನೆ ಮಾಡಬಹುದು” ಎಂದು ಈದಿನ ಮಾಧ್ಯಮ ಸಂತೋಷ್ ಅವರಿಗೆ ಸವಾಲು ಹಾಕಿತ್ತು.

ಈದಿನ ಸಮೀಕ್ಷೆ ಏನು ಹೇಳಿತ್ತು?

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿತ್ತು. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿತ್ತು.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿತ್ತು.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು” ಎಂದು ಈದಿನ ಹೇಳಿತ್ತು.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿತ್ತು.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿತ್ತು.

ಕಾಂಗ್ರೆಸ್‌ಗೆ 132-140 ಸ್ಥಾನ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿತ್ತು ಸರ್ವೇ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿತ್ತು.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ. ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿತ್ತು.

ಸಮೀಕ್ಷೆಯ ವಿವರಗಳನ್ನು ಸಮೀಕ್ಷಾ ತಜ್ಞ ಹಾಗೂ ರಾಜಕೀಯ ಚಿಂತಕರಾದ ಪ್ರೊ.ಯೋಗೇಂದ್ರ ಯಾದವ್ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಕಾಂಗ್ರೆಸ್‌ ನಾಯಕರ ರಾಹುಲ್ ಗಾಂಧಿ ಮತ್ತು ಯೋಗೇಂದ್ರ ಯಾದವ್ ಅವರ ನಡುವಿನ ಸೌಹಾರ್ದತೆಯನ್ನು ಥಳುಕು ಹಾಕಿದ್ದರು. ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ರಾಹುಲ್ ಅವರು ಮಾಡಿದ ಭಾರತ್ ಜೋಡೋ ಯಾತ್ರೆಗೆ ಅನೇಕ ಕಾಂಗ್ರೆಸ್ಸೇತರರು ಬೆಂಬಲ ನೀಡಿದ್ದರು. ಅದರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರಾಗಿದ್ದು, ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಅದನ್ನು ಪ್ರಸ್ತಾಪಿಸಿದ್ದಂತಿತ್ತು.

“ತನ್ನ ಯಜಮಾನರನ್ನು ಮೆಚ್ಚಿಸಲು ಪಾದಯಾತ್ರೆಗಳು ಮತ್ತು ಆಂದೋಲನಗಳ ನಡುವೆ ಸಮೀಕ್ಷೆಗಳಿಗೆ ಅವರು ಸಮಯ ಕಂಡುಕೊಂಡಿರುವುದು ನಿಜಕ್ಕೂ ಆಶ್ಚರ್ಯಕರ” ಎಂದು ಯೋಗೇಂದ್ರ ಅವರ ಹೆಸರನ್ನು ಟ್ಯಾಗ್ ಮಾಡಿ ಬಿ ಎಲ್ ಸಂತೊಷ್ ಟ್ವೀಟ್ ಮಾಡಿದ್ದರು.

ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯೋಗೇಂದ್ರ ಯಾದವ್‌, “ಸತ್ಯವನ್ನು ಸ್ವಾರಸ್ಯಕರವಾಗಿ ಕಾಣದವರು ಅಡುಗೆಯವರನ್ನೇ (ಈ ಸಂದರ್ಭದಲ್ಲಿ ಕಲ್ಪಿಸಿಕೊಂಡವರು) ದೂಷಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಶಾಸಕರನ್ನು ಖರೀದಿಸಿ ಬಹುಮತದ ಬೇಳೆ ಬೇಯಿಸಿಕೊಳ್ಳುತ್ತಿದ್ದ ಯಾರೋ ಒಬ್ಬರು ಸಮೀಕ್ಷೆಯಿಂದ ತೊಂದರೆಗೀಡಾಗಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯ ಆಂತರಿಕ ಸಮೀಕ್ಷೆಗಳಿಗೆ ಈದಿನ ಸಮೀಕ್ಷೆ ಅನುರಣಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...