Homeಕರ್ನಾಟಕನಿಜವಾಯಿತು ‘ಈದಿನ’ ಚುನಾವಣಾಪೂರ್ವ ಸಮೀಕ್ಷೆ: ಅಲ್ಲಗಳೆದಿದ್ದ ಬಿ.ಎಲ್.ಸಂತೋಷ್‌ಗೆ ಮುಖಭಂಗ

ನಿಜವಾಯಿತು ‘ಈದಿನ’ ಚುನಾವಣಾಪೂರ್ವ ಸಮೀಕ್ಷೆ: ಅಲ್ಲಗಳೆದಿದ್ದ ಬಿ.ಎಲ್.ಸಂತೋಷ್‌ಗೆ ಮುಖಭಂಗ

- Advertisement -
- Advertisement -

ಚುನಾವಣೆ ಸಂದರ್ಭದಲ್ಲಿ ಹಲವಾರು ಸಮೀಕ್ಷೆಗಳು ಬರುತ್ತವೆ ಹೋಗುತ್ತವೆ, ಆದರೆ ಕನ್ನಡದ ಡಿಜಿಟಲ್ ಮಾಧ್ಯಮವೊಂದು ಮಾಡಿದ ಸಮೀಕ್ಷೆ ನಿಖರವಾಗಿದೆ. ‘ಈದಿನ’ ಮಾಧ್ಯಮ ಮಾಡಿದ್ದ ಚುನಾವಣಾಪೂರ್ವ ಸಮೀಕ್ಷೆಯ ಅಂಕಿ-ಅಂಶಗಳು ಈಗ ಎಲ್ಲರೂ ನಿಬ್ಬೇರಿಸುವುದಕ್ಕೆ ಕಾರಣವಾಗಿವೆ.

‘ಈದಿನ’ ನಡೆಸಿದ ಸಮೀಕ್ಷೆಯನ್ನು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅಲ್ಲಗಳೆದಿದ್ದರು. ಇದೊಂದು ಕೃತಕವಾಗಿ ಸೃಷ್ಟಿಸಲಾದ ಸಮೀಕ್ಷೆ ಎಂದು ಟೀಕಿಸಿದ್ದ ಅವರು ಈಗ ಮುಖಭಂಗ ಅನುಭವಿಸಿದ್ದಾರೆ.

“ನಮ್ಮ ಸಮೀಕ್ಷೆ ನಿಖರವಾಗಿದೆ. ನೀವು ಬಂದು ಪರಿಶೀಲನೆ ಮಾಡಬಹುದು” ಎಂದು ಈದಿನ ಮಾಧ್ಯಮ ಸಂತೋಷ್ ಅವರಿಗೆ ಸವಾಲು ಹಾಕಿತ್ತು.

ಈದಿನ ಸಮೀಕ್ಷೆ ಏನು ಹೇಳಿತ್ತು?

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿತ್ತು. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿತ್ತು.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿತ್ತು.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು” ಎಂದು ಈದಿನ ಹೇಳಿತ್ತು.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿತ್ತು.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿತ್ತು.

ಕಾಂಗ್ರೆಸ್‌ಗೆ 132-140 ಸ್ಥಾನ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿತ್ತು ಸರ್ವೇ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿತ್ತು.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ. ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿತ್ತು.

ಸಮೀಕ್ಷೆಯ ವಿವರಗಳನ್ನು ಸಮೀಕ್ಷಾ ತಜ್ಞ ಹಾಗೂ ರಾಜಕೀಯ ಚಿಂತಕರಾದ ಪ್ರೊ.ಯೋಗೇಂದ್ರ ಯಾದವ್ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಕಾಂಗ್ರೆಸ್‌ ನಾಯಕರ ರಾಹುಲ್ ಗಾಂಧಿ ಮತ್ತು ಯೋಗೇಂದ್ರ ಯಾದವ್ ಅವರ ನಡುವಿನ ಸೌಹಾರ್ದತೆಯನ್ನು ಥಳುಕು ಹಾಕಿದ್ದರು. ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ರಾಹುಲ್ ಅವರು ಮಾಡಿದ ಭಾರತ್ ಜೋಡೋ ಯಾತ್ರೆಗೆ ಅನೇಕ ಕಾಂಗ್ರೆಸ್ಸೇತರರು ಬೆಂಬಲ ನೀಡಿದ್ದರು. ಅದರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರಾಗಿದ್ದು, ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಅದನ್ನು ಪ್ರಸ್ತಾಪಿಸಿದ್ದಂತಿತ್ತು.

“ತನ್ನ ಯಜಮಾನರನ್ನು ಮೆಚ್ಚಿಸಲು ಪಾದಯಾತ್ರೆಗಳು ಮತ್ತು ಆಂದೋಲನಗಳ ನಡುವೆ ಸಮೀಕ್ಷೆಗಳಿಗೆ ಅವರು ಸಮಯ ಕಂಡುಕೊಂಡಿರುವುದು ನಿಜಕ್ಕೂ ಆಶ್ಚರ್ಯಕರ” ಎಂದು ಯೋಗೇಂದ್ರ ಅವರ ಹೆಸರನ್ನು ಟ್ಯಾಗ್ ಮಾಡಿ ಬಿ ಎಲ್ ಸಂತೊಷ್ ಟ್ವೀಟ್ ಮಾಡಿದ್ದರು.

ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯೋಗೇಂದ್ರ ಯಾದವ್‌, “ಸತ್ಯವನ್ನು ಸ್ವಾರಸ್ಯಕರವಾಗಿ ಕಾಣದವರು ಅಡುಗೆಯವರನ್ನೇ (ಈ ಸಂದರ್ಭದಲ್ಲಿ ಕಲ್ಪಿಸಿಕೊಂಡವರು) ದೂಷಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಶಾಸಕರನ್ನು ಖರೀದಿಸಿ ಬಹುಮತದ ಬೇಳೆ ಬೇಯಿಸಿಕೊಳ್ಳುತ್ತಿದ್ದ ಯಾರೋ ಒಬ್ಬರು ಸಮೀಕ್ಷೆಯಿಂದ ತೊಂದರೆಗೀಡಾಗಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯ ಆಂತರಿಕ ಸಮೀಕ್ಷೆಗಳಿಗೆ ಈದಿನ ಸಮೀಕ್ಷೆ ಅನುರಣಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...