Homeಕರ್ನಾಟಕನಿಜವಾಯಿತು ‘ಈದಿನ’ ಚುನಾವಣಾಪೂರ್ವ ಸಮೀಕ್ಷೆ: ಅಲ್ಲಗಳೆದಿದ್ದ ಬಿ.ಎಲ್.ಸಂತೋಷ್‌ಗೆ ಮುಖಭಂಗ

ನಿಜವಾಯಿತು ‘ಈದಿನ’ ಚುನಾವಣಾಪೂರ್ವ ಸಮೀಕ್ಷೆ: ಅಲ್ಲಗಳೆದಿದ್ದ ಬಿ.ಎಲ್.ಸಂತೋಷ್‌ಗೆ ಮುಖಭಂಗ

- Advertisement -
- Advertisement -

ಚುನಾವಣೆ ಸಂದರ್ಭದಲ್ಲಿ ಹಲವಾರು ಸಮೀಕ್ಷೆಗಳು ಬರುತ್ತವೆ ಹೋಗುತ್ತವೆ, ಆದರೆ ಕನ್ನಡದ ಡಿಜಿಟಲ್ ಮಾಧ್ಯಮವೊಂದು ಮಾಡಿದ ಸಮೀಕ್ಷೆ ನಿಖರವಾಗಿದೆ. ‘ಈದಿನ’ ಮಾಧ್ಯಮ ಮಾಡಿದ್ದ ಚುನಾವಣಾಪೂರ್ವ ಸಮೀಕ್ಷೆಯ ಅಂಕಿ-ಅಂಶಗಳು ಈಗ ಎಲ್ಲರೂ ನಿಬ್ಬೇರಿಸುವುದಕ್ಕೆ ಕಾರಣವಾಗಿವೆ.

‘ಈದಿನ’ ನಡೆಸಿದ ಸಮೀಕ್ಷೆಯನ್ನು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅಲ್ಲಗಳೆದಿದ್ದರು. ಇದೊಂದು ಕೃತಕವಾಗಿ ಸೃಷ್ಟಿಸಲಾದ ಸಮೀಕ್ಷೆ ಎಂದು ಟೀಕಿಸಿದ್ದ ಅವರು ಈಗ ಮುಖಭಂಗ ಅನುಭವಿಸಿದ್ದಾರೆ.

“ನಮ್ಮ ಸಮೀಕ್ಷೆ ನಿಖರವಾಗಿದೆ. ನೀವು ಬಂದು ಪರಿಶೀಲನೆ ಮಾಡಬಹುದು” ಎಂದು ಈದಿನ ಮಾಧ್ಯಮ ಸಂತೋಷ್ ಅವರಿಗೆ ಸವಾಲು ಹಾಕಿತ್ತು.

ಈದಿನ ಸಮೀಕ್ಷೆ ಏನು ಹೇಳಿತ್ತು?

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿತ್ತು. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿತ್ತು.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿತ್ತು.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು” ಎಂದು ಈದಿನ ಹೇಳಿತ್ತು.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿತ್ತು.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿತ್ತು.

ಕಾಂಗ್ರೆಸ್‌ಗೆ 132-140 ಸ್ಥಾನ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿತ್ತು ಸರ್ವೇ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿತ್ತು.

ಈ ಅಭಿಪ್ರಾಯ ಹೊಂದಿರುವವರಲ್ಲಿ ಶೇ.67ರಷ್ಟು ಜನ ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಬಾರಿ ಅವಕಾಶ ಕೊಡಬಾರದೆಂಬ ಅಭಿಪ್ರಾಯ ಹೊಂದಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಮ್ಮೆ ಅವಕಾಶ ಕೊಡಬಹುದೆಂಬ ಅನಿಸಿಕೆ ಹೊಂದಿದ್ದಾರೆ. ಬೊಮ್ಮಾಯಿ ಸರ್ಕಾರ ಮುಂದುವರಿಯಬಾರದು ಎಂದು 67% ಜನರು ಅಭಿಪ್ರಾಯ ತಾಳಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿತ್ತು.

ಸಮೀಕ್ಷೆಯ ವಿವರಗಳನ್ನು ಸಮೀಕ್ಷಾ ತಜ್ಞ ಹಾಗೂ ರಾಜಕೀಯ ಚಿಂತಕರಾದ ಪ್ರೊ.ಯೋಗೇಂದ್ರ ಯಾದವ್ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಕಾಂಗ್ರೆಸ್‌ ನಾಯಕರ ರಾಹುಲ್ ಗಾಂಧಿ ಮತ್ತು ಯೋಗೇಂದ್ರ ಯಾದವ್ ಅವರ ನಡುವಿನ ಸೌಹಾರ್ದತೆಯನ್ನು ಥಳುಕು ಹಾಕಿದ್ದರು. ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ರಾಹುಲ್ ಅವರು ಮಾಡಿದ ಭಾರತ್ ಜೋಡೋ ಯಾತ್ರೆಗೆ ಅನೇಕ ಕಾಂಗ್ರೆಸ್ಸೇತರರು ಬೆಂಬಲ ನೀಡಿದ್ದರು. ಅದರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರಾಗಿದ್ದು, ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಅದನ್ನು ಪ್ರಸ್ತಾಪಿಸಿದ್ದಂತಿತ್ತು.

“ತನ್ನ ಯಜಮಾನರನ್ನು ಮೆಚ್ಚಿಸಲು ಪಾದಯಾತ್ರೆಗಳು ಮತ್ತು ಆಂದೋಲನಗಳ ನಡುವೆ ಸಮೀಕ್ಷೆಗಳಿಗೆ ಅವರು ಸಮಯ ಕಂಡುಕೊಂಡಿರುವುದು ನಿಜಕ್ಕೂ ಆಶ್ಚರ್ಯಕರ” ಎಂದು ಯೋಗೇಂದ್ರ ಅವರ ಹೆಸರನ್ನು ಟ್ಯಾಗ್ ಮಾಡಿ ಬಿ ಎಲ್ ಸಂತೊಷ್ ಟ್ವೀಟ್ ಮಾಡಿದ್ದರು.

ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯೋಗೇಂದ್ರ ಯಾದವ್‌, “ಸತ್ಯವನ್ನು ಸ್ವಾರಸ್ಯಕರವಾಗಿ ಕಾಣದವರು ಅಡುಗೆಯವರನ್ನೇ (ಈ ಸಂದರ್ಭದಲ್ಲಿ ಕಲ್ಪಿಸಿಕೊಂಡವರು) ದೂಷಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಶಾಸಕರನ್ನು ಖರೀದಿಸಿ ಬಹುಮತದ ಬೇಳೆ ಬೇಯಿಸಿಕೊಳ್ಳುತ್ತಿದ್ದ ಯಾರೋ ಒಬ್ಬರು ಸಮೀಕ್ಷೆಯಿಂದ ತೊಂದರೆಗೀಡಾಗಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯ ಆಂತರಿಕ ಸಮೀಕ್ಷೆಗಳಿಗೆ ಈದಿನ ಸಮೀಕ್ಷೆ ಅನುರಣಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...