Homeಮುಖಪುಟಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ...

ಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ…

- Advertisement -
- Advertisement -

ಜೀವನ ಕಲೆಗಳು : ಅಂಕಣ – 13

ಸಮರ್ಪಕ ಸಂವಹನ ಕಲೆ –2 ಮಾತನಾಡುವುದು,  ಓದುವುದು ಮತ್ತು ಬರೆಯುವುದು.

ಸಂವಹನ ಪ್ರಕ್ರಿಯೆಯಲ್ಲಿ ನಾವು ಸುಮಾರು 45% ಸಮಯ ಬೇರೆಯವರು ಹೇಳಿದ್ದನ್ನು ಕೇಳಿಸಿಕೊಳ್ಳುತ್ತಿರುತ್ತೇವೆ, ಕೇವಲ 30% ಸಮಯ ಮಾತನಾಡುತ್ತಿರುತ್ತೇವೆ, 16% ಸಮಯ ಓದುತ್ತಿರುತ್ತೇವೆ ಮತ್ತು 9% ಸಮಯ ಬರೆಯುತ್ತೇವೆ ಎಂದು ಹಿಂದಿನ ಲೇಖನದಲ್ಲಿ ತಿಳಿಸಿದ್ದೆ. ಅದೇ ರೀತಿ ಸಕ್ರಿಯ ಕೇಳಿಸಿಕೊಳ್ಳುವಿಕೆಯ ಬಗ್ಗೆಯೂ ತಿಳಿಸಿದ್ದೆ.

ಮಾತನಾಡುವ ಸಮಯದಲ್ಲಿ ನಾವು ಮೂರು ಮಾಧ್ಯಮಗಳನ್ನು ಬಳಸುತ್ತೇವೆ. ಅವೆಂದರೆ ಬ್ಯಾಷ್ಯಾತೀತ ದೈಹಿಕಭಾಷೆ ಅಥವಾ ಬಾಡಿಲಾಂಗ್ವೇಜ್, ಎರಡನೆಯದು ಸ್ವರಬೇಧ/ಶಬ್ದಾಧರಿತ ಧ್ವನಿಗಳ ಏರಿಳಿತ (ಇನ್ಟೊನೇಶನ್). ಮೂರನೆಯದು ಸಂಪೂರ್ಣ ಭಾಷೆಯನ್ನು ಆಧರಿಸಿದ ಮಾತುಕತೆ, ಅದನ್ನು ನಾವು ಓದುವ/ಬರೆಯುವ ಕಲೆ ಎನ್ನಲೂಬಹುದು. ಬಾಡಿ ಲಾಂಗ್ವೇಜ್ (ನಾನ್-ವರ್ಬಲ್ ಕಮ್ಯುನಿಕೇಷನ್) ಬಗ್ಗೆ ಪ್ರತ್ಯೇಕವಾಗಿ ಮುಂದೆತಿಳಿಸುತ್ತೇನೆ.

ಟೋನ್ ಅಥವಾ ನಾದವನ್ನು ಆಧರಿಸಿದ ಧ್ವನಿಯ ಸಮರ್ಪಕ ಏರಿಳಿತದಿಂದ ಸಂವಹನದಲ್ಲಿ ಸಮಯಕ್ಕೆ/ಸಂದರ್ಭಕ್ಕೆ ತಕ್ಕ ಪರಿಣಾಮವನ್ನು ಸೃಷ್ಟಿಸಬಹುದು. ಇದನ್ನು ಸಣ್ಣ ಮಕ್ಕಳು ತಮ್ಮ ಸುತ್ತಮುತ್ತ ಇರುವವರ ಜೊತೆ ಸಂವಹನಕ್ಕೆ ಬಳಕೆ ಮಾಡುವುದನ್ನು ನೋಡಿರಬಹುದು. ಮೂಕ ಪ್ರಾಣಿಗಳು ಸಹ ತಮ್ಮ ವಿವಿಧ ಸದ್ದಿನಿಂದ ತಮ್ಮ ಭಾವನಾತ್ಮಕ ಸಂದೇಶ ರವಾನಿಸುತ್ತವೆ. ಧ್ವನಿಯ ಏರಿಳಿತ, ಉಚ್ಚಾರಣೆಯ ವಿಧಾನ ಮತ್ತು ಕಂಪನಗಳ ನಿಯಂತ್ರಣದಿಂದ ಸಂದೇಶಕ್ಕೆ ಹೆಚ್ಚಿನ ಬಲ ಸಿಕ್ಕು, ಇನ್ನಷ್ಟು ಪ್ರಭಾವಶಾಲಿಯಾಗುತ್ತದೆ. ಇದನ್ನು ಭಾವನಾತ್ಮಕ ವಾಚನ ಎಂದೂ ಕರೆಯಬಹುದು. ಗಾಯನ ಸಹ ಇದೇ ಗುಂಪಿಗೆ ಸೇರುತ್ತದೆ. ಧ್ವನಿಯ ಏರಿಳಿತ, ಕಂಪನ ನಿಯಂತ್ರಣವಿಲ್ಲದಿದ್ದರೆ ಭಾಷೆ ನೀರಸ ಮತ್ತು ಏಕತಾನೀಯವಾಗುತ್ತದೆ.

ಮಾತನಾಡುತ್ತಿರುವವರು ನಮ್ಮ ಕಣ್ಮುಂದೆ ಇಲ್ಲದಿದ್ದರೂ ಸ್ವರಬೇಧದಿಂದ ನಾವು ಅವರ ಭಾವನೆಗಳನ್ನು ಅರಿಯಬಹುದು. ಧ್ವನಿಯು ಗದ್ಗದಿತವಾಗಿದ್ದಲ್ಲಿ ಅವರು ದುಃಖದಲ್ಲಿರಬಹುದೆಂತಲೂ, ಮೌನವಾಗಿದ್ದರೆ ಅತೀವ ಸಂತೋಷವಾದಾಗ ಮಾತು ಹೊರಡಲಿಲ್ಲವೇನೋ ಎಂದುಕೊಳ್ಳಬಹುದು. ಭಾವನೆಗಳ ಜೊತೆಗೆ, ವಾಕ್ಯ ಕೇವಲ ಹೇಳಿಕೆಯೋ ಅಥವಾ ಪ್ರಶ್ನಾರ್ಥಕವೋ ಎಂಬುದನ್ನೂ ಸ್ವರಭೇದ ಸೂಚಿಸುತ್ತದೆ. ಆಸಕ್ತಿ, ಉತ್ಸಾಹ ಮುಂತಾದ ಭಾವನೆಗಳನ್ನೂ ಸ್ವರಬೇಧ ಹೊರತರುತ್ತದೆ. ಪದದ ಅರ್ಥ ಪದದಲ್ಲಿ ಅಡಗಿರುವುದಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಒಂದು ವಾಕ್ಯದಲ್ಲಿ ಸಾಮಾನ್ಯವಾಗಿ ನಾಮಪದ, ಕ್ರಿಯಾಪದ, ಗುಣವಾಚಕ ಅಥವಾ ಕ್ರಿಯಾ ವಿಶೇಷಣ, ಸಂಧಿ, ಉಪಸರ್ಗ ಮುಂತಾದ ಪದಗಳಿರುತ್ತವೆ. ಯಾವ ಪದದ ಮೇಲೆ ಹೆಚ್ಚು ಒತ್ತು ಬೀಳುತ್ತದೋ ಅದೇ ರೀತಿಯಲ್ಲಿ ವಾಕ್ಯದ ಅರ್ಥ ಬದಲಾಗುತ್ತದೆ. ಅದಕ್ಕಿಂತಲೂ ಹೆಚ್ಚಾಗಿ, ಅರ್ಥ ಹೇಳುವವರ ಅಥವಾ/ಮತ್ತು ಕೇಳುವವರ ಮನಸ್ಸಿನಲ್ಲಿ ಅಡಗಿರುತ್ತದೆ. ಮನಃಸ್ಥಿತಿಯ ವ್ಯತ್ಯಾಸದಿಂದ ಒಬ್ಬರು ಹೇಳಿದ್ದನ್ನು ಇನ್ನೊಬ್ಬರು ತಪ್ಪಾಗಿ ಅರ್ಥೈಸಬಹುದು. ಕೆಲವೊಮ್ಮೆ ಕೇವಲ ಒಂದು ಪದದಲ್ಲಿ ಅನೇಕ ಅರ್ಥಗಳು ಗೂಢೈಸಿರಬಹುದು. ಅದೇ ರೀತಿ ಕಿರುಚುವಿಕೆ ಅಥವಾ ದ್ವನಿಯ ಗಡಸುತನವೂ ಶಕ್ತಿ ಸಾಮರ್ಥ್ಯವನ್ನು ಸೂಚಿಸುತ್ತದೆ. ಮಾತನಾಡುವ ವೇಗದಿಂದಲೂ ನಮ್ಮ ಉದ್ವೇಗ, ನಿರಾಸಕ್ತಿಯನ್ನು ತೋರಿಸಬಹುದು.

ದೃಶ್ಯ ಮಾಧ್ಯಮದ ಬಳಕೆಯಿಲ್ಲದೇ ಭಾವನೆಗಳ ನವರಸಗಳನ್ನು (ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಭತ್ಸ, ಅದ್ಭುತ ಮತ್ತು ಶಾಂತ) ಧ್ವನಿಯಲ್ಲಿ ಮೂಡಿಸಬಹುದು. ಅಷ್ಟೇ ಅಲ್ಲ, ಯಾರು ತಮ್ಮ ಧ್ವನಿಯ ಕಂಪನವನ್ನು, ನಿಯಂತ್ರಣದಲ್ಲಿ, ಮೇಲೆ-ಕೆಳಗೆ ಸಮರ್ಪಕವಾಗಿ ಮಾಡಬಲ್ಲರೋ ಅವರು ಇನ್ನೋರ್ವ ವ್ಯಕ್ತಿಯ ಧ್ವನಿಯನ್ನೂ ಪ್ರತಿರೂಪಿಸಬಲ್ಲರು. ಸಿನಿಮಾ/ಟಿವಿ ಯಲ್ಲಿ ಇದನ್ನು “ವಾಯ್ಸ್ ಆರ್ಟಿಸ್ಟ್” ಗಳು ಸಮರ್ಪಕವಾಗಿ ಬಳಸುತ್ತಾರೆ. ಕೀರಲು-ಗಡಸು ಧ್ವನಿಯಿಂದ ಅವರು ಹೆಂಗಸು ಮತ್ತು ಗಂಡಸಿನ ಧ್ವನಿಯಲ್ಲಿ ಹಾಡಲೂ ಬಲ್ಲರು. ಈ ನಿಯಂತ್ರಣ ಅವರಿಗೆ ಸಾಕಷ್ಟು ಪರಿಶ್ರಮದಿಂದ ಬಂದಿರುತ್ತದೆ, ಹಾಗಾಗಿ ಈ ಕಲೆಯನ್ನು ಎಲ್ಲರೂ ಕಲಿಯಬಹುದು.

ಕೆಲವು ಭಾಷೆಗಳಲ್ಲಿ ಹೆಚ್ಚಿನ ನಾದಗಳ (ಟೋನ್) ಬಳಕೆ ಇರುತ್ತದೆ, ಉದಾ: ಚೈನೀಸ್ ಭಾಷೆಯಲ್ಲಿ ಸಾಧಾರಣವಾಗಿ ನಾಲ್ಕು ನಾದಗಳಿದ್ದರೆ, ಲಾಓಸ್, ಥಾಯ್ಲೆಂಡ್, ವಿಯಟ್ನಾಮ್, ಚೈನಾ ಪ್ರದೇಶದಲ್ಲಿ ಮಾತನಾಡುವ ಹಮೊಂಗ್ (ಚೈನೀಸ್) ಭಾಷೆಯಲ್ಲಿ ಉನ್ನತ, ಮಧ್ಯಮ, ಕೆಳಮಟ್ಟದ, ಏರುತ್ತಿರುವ, ಇಳಿಯುತ್ತಿರುವ  ನಾದಗಳ ಸಂಯೋಗದಿಂದ ಒಂದೇ ಪದಕ್ಕೆ ಎಂಟು ಅರ್ಥ ಕಲ್ಪಿಸಬಹುದು. ಆದ್ದರಿಂದ ಧ್ವನಿಯ  ಏರಿಳಿತಗಳನ್ನು ಸರಿಯಾಗಿ ತಿಳಿದಿರಬೇಕು. ಚೈನೀಸ್ ಭಾಷೆಗೆ ಹೋಲಿಸಿದರೆ ಇಂಗ್ಲಿಷ್ ಭಾಷೆಯನ್ನು ನಾದರಹಿತ ಭಾಷೆ ಎಂದೇ ಕರೆಯಬಹುದು. ಆದ್ದರಿಂದ ಇಂಗ್ಲಿಷ್ ಭಾಷಾ ಮೂಲದ ಜನರಿಗೆ ಚೈನೀಸ್ ಭಾಷೆ ಕಲಿಯುವುದು ಕಷ್ಟಕರ ಎನಿಸಬಹುದು. ಒಂದು ಭಾಷೆ ಕರತಲಾಮಲಕವಾಗಿರುವವರಿಗೆ ಇನ್ನೊಂದು ವಿಭಿನ್ನ ಭಾಷೆಯ ಪದಗಳನ್ನು ಉಚ್ಚಾರ ಮಾಡುವುದೂ ಕಷ್ಟವೆನಿಸಬಹುದು. ಉತ್ತರ ಭಾರತದವರು ದಕ್ಷಿಣದ ರಾಜ್ಯಗಳನ್ನು ಕರ್ನಾಟಕ್, ಕೇರಳ್, ಎನ್ನುವುದನ್ನು ನೀವು ಕೇಳಿರಬಹುದು.

ಓದುವುದೂ ಸಹ ಒಂದು ಕಲೆ. ಭಾವನಾತ್ಮಕವಾಗಿ ಬರೆದ ವಾಕ್ಯವನ್ನು ನಿರ್ಜೀವವಾಗಿಸಿ ಓದುವ ಸುದ್ದಿವಾಚಕರೂ ಇದ್ದಾರೆ, ಅದೇ ರೀತಿ ಏನೂ ಇಲ್ಲದ ಸುದ್ದಿಯನ್ನು ಆಕಾಶವೇ ತಲೆಯ ಮೇಲೆ ಕಳಚಿ ಬಿದ್ದಂತೆ ಬ್ರೇಕಿಂಗ್ ನ್ಯೂಸ್ ಎಂದು ಅರಚುವವರೂ ಇದ್ದಾರೆ. ಆದ್ದರಿಂದ ಗಟ್ಟಿಯಾಗಿ ಓದುವ ಮುಂಚೆ, ಬರೆದಿರುವ ವಾಕ್ಯವನ್ನಷ್ಟೇ ಅಲ್ಲ, ಸಂಪೂರ್ಣ ಪರಿಚ್ಛೇದವನ್ನು ಮನಸ್ಸಿನಲ್ಲಿ ಒಮ್ಮೆ ಓದಿಕೊಂಡು, ಅದರ ಭಾವಾರ್ಥ ಅರಗಿಸಿಕೊಂಡು, ಯಾವ ಪದಗಳಿಗೆ ಎಷ್ಟು ಒತ್ತು ನೀಡಿ, ಯಾವ ಭಾವನೆ ವ್ಯಕ್ತ ಪಡಿಸಬೇಕು ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು. ಹೆಚ್ಚು ಹೆಚ್ಚು ಓದಿದಷ್ಟು ಭಾಷಾಜ್ಞಾನ ಹೆಚ್ಚುತ್ತದೆ. ಬೇರೆ ಬೇರೆ ಲೇಖಕರು ಭಾಷೆಯನ್ನು ಹೇಗೆ ಶಕ್ತಿಶಾಲಿಯಾಗಿ ಬಳಸುತ್ತಾರೆ ಎಂಬುದನ್ನು ಕಲಿಯಬಹುದು.

ಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ ಬರೆಯಬೇಕೆಂದಿರುವ ವಿಷಯದ ಬಗ್ಗೆ ಸಾಕಷ್ಟು ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ಸಾಕಷ್ಟು ಸಂಶೋಧನೆ ಇಲ್ಲದ ಬರವಣಿಗೆಯಲ್ಲಿ ಶಕ್ತಿ ಇರುವುದಿಲ್ಲ. ಹತ್ತು ಪುಟಗಳಷ್ಟು ಓದಿದರೆ ಒಂದು ಪುಟದಷ್ಟು ಸಾರಾಂಶ ಮಾಡಿಕೊಳ್ಳಬಹುದು. ಹತ್ತು ಪುಟದ ಸಾರಾಂಶವನ್ನು ಬರೆಯಲು ಪ್ರಾರಂಬಿಸಿದರೆ ಒಂದು ಪುಟದ ಲೇಖನವಾಗುತ್ತದೆ. ಅಂದರೆ ಒಂದು ಪುಟ ಬರೆಯಲು ನೂರು ಪುಟ ಓದಬೇಕು. ಆದ್ದರಿಂದ ನಾವು ಬರೆಯುವುದಕ್ಕಿಂತ ಹೆಚ್ಚು ಏಕೆ ಓದುತ್ತೇವೆ ಅಥವಾ ಹೆಚ್ಚು ಮಾತನಾಡುತ್ತೇವೆ ಎಂಬುದು ಸ್ಪಷ್ಟವಾಗಿರಬಹುದಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...