Homeಮುಖಪುಟಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ...

ಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ…

- Advertisement -
- Advertisement -

ಜೀವನ ಕಲೆಗಳು : ಅಂಕಣ – 13

ಸಮರ್ಪಕ ಸಂವಹನ ಕಲೆ –2 ಮಾತನಾಡುವುದು,  ಓದುವುದು ಮತ್ತು ಬರೆಯುವುದು.

ಸಂವಹನ ಪ್ರಕ್ರಿಯೆಯಲ್ಲಿ ನಾವು ಸುಮಾರು 45% ಸಮಯ ಬೇರೆಯವರು ಹೇಳಿದ್ದನ್ನು ಕೇಳಿಸಿಕೊಳ್ಳುತ್ತಿರುತ್ತೇವೆ, ಕೇವಲ 30% ಸಮಯ ಮಾತನಾಡುತ್ತಿರುತ್ತೇವೆ, 16% ಸಮಯ ಓದುತ್ತಿರುತ್ತೇವೆ ಮತ್ತು 9% ಸಮಯ ಬರೆಯುತ್ತೇವೆ ಎಂದು ಹಿಂದಿನ ಲೇಖನದಲ್ಲಿ ತಿಳಿಸಿದ್ದೆ. ಅದೇ ರೀತಿ ಸಕ್ರಿಯ ಕೇಳಿಸಿಕೊಳ್ಳುವಿಕೆಯ ಬಗ್ಗೆಯೂ ತಿಳಿಸಿದ್ದೆ.

ಮಾತನಾಡುವ ಸಮಯದಲ್ಲಿ ನಾವು ಮೂರು ಮಾಧ್ಯಮಗಳನ್ನು ಬಳಸುತ್ತೇವೆ. ಅವೆಂದರೆ ಬ್ಯಾಷ್ಯಾತೀತ ದೈಹಿಕಭಾಷೆ ಅಥವಾ ಬಾಡಿಲಾಂಗ್ವೇಜ್, ಎರಡನೆಯದು ಸ್ವರಬೇಧ/ಶಬ್ದಾಧರಿತ ಧ್ವನಿಗಳ ಏರಿಳಿತ (ಇನ್ಟೊನೇಶನ್). ಮೂರನೆಯದು ಸಂಪೂರ್ಣ ಭಾಷೆಯನ್ನು ಆಧರಿಸಿದ ಮಾತುಕತೆ, ಅದನ್ನು ನಾವು ಓದುವ/ಬರೆಯುವ ಕಲೆ ಎನ್ನಲೂಬಹುದು. ಬಾಡಿ ಲಾಂಗ್ವೇಜ್ (ನಾನ್-ವರ್ಬಲ್ ಕಮ್ಯುನಿಕೇಷನ್) ಬಗ್ಗೆ ಪ್ರತ್ಯೇಕವಾಗಿ ಮುಂದೆತಿಳಿಸುತ್ತೇನೆ.

ಟೋನ್ ಅಥವಾ ನಾದವನ್ನು ಆಧರಿಸಿದ ಧ್ವನಿಯ ಸಮರ್ಪಕ ಏರಿಳಿತದಿಂದ ಸಂವಹನದಲ್ಲಿ ಸಮಯಕ್ಕೆ/ಸಂದರ್ಭಕ್ಕೆ ತಕ್ಕ ಪರಿಣಾಮವನ್ನು ಸೃಷ್ಟಿಸಬಹುದು. ಇದನ್ನು ಸಣ್ಣ ಮಕ್ಕಳು ತಮ್ಮ ಸುತ್ತಮುತ್ತ ಇರುವವರ ಜೊತೆ ಸಂವಹನಕ್ಕೆ ಬಳಕೆ ಮಾಡುವುದನ್ನು ನೋಡಿರಬಹುದು. ಮೂಕ ಪ್ರಾಣಿಗಳು ಸಹ ತಮ್ಮ ವಿವಿಧ ಸದ್ದಿನಿಂದ ತಮ್ಮ ಭಾವನಾತ್ಮಕ ಸಂದೇಶ ರವಾನಿಸುತ್ತವೆ. ಧ್ವನಿಯ ಏರಿಳಿತ, ಉಚ್ಚಾರಣೆಯ ವಿಧಾನ ಮತ್ತು ಕಂಪನಗಳ ನಿಯಂತ್ರಣದಿಂದ ಸಂದೇಶಕ್ಕೆ ಹೆಚ್ಚಿನ ಬಲ ಸಿಕ್ಕು, ಇನ್ನಷ್ಟು ಪ್ರಭಾವಶಾಲಿಯಾಗುತ್ತದೆ. ಇದನ್ನು ಭಾವನಾತ್ಮಕ ವಾಚನ ಎಂದೂ ಕರೆಯಬಹುದು. ಗಾಯನ ಸಹ ಇದೇ ಗುಂಪಿಗೆ ಸೇರುತ್ತದೆ. ಧ್ವನಿಯ ಏರಿಳಿತ, ಕಂಪನ ನಿಯಂತ್ರಣವಿಲ್ಲದಿದ್ದರೆ ಭಾಷೆ ನೀರಸ ಮತ್ತು ಏಕತಾನೀಯವಾಗುತ್ತದೆ.

ಮಾತನಾಡುತ್ತಿರುವವರು ನಮ್ಮ ಕಣ್ಮುಂದೆ ಇಲ್ಲದಿದ್ದರೂ ಸ್ವರಬೇಧದಿಂದ ನಾವು ಅವರ ಭಾವನೆಗಳನ್ನು ಅರಿಯಬಹುದು. ಧ್ವನಿಯು ಗದ್ಗದಿತವಾಗಿದ್ದಲ್ಲಿ ಅವರು ದುಃಖದಲ್ಲಿರಬಹುದೆಂತಲೂ, ಮೌನವಾಗಿದ್ದರೆ ಅತೀವ ಸಂತೋಷವಾದಾಗ ಮಾತು ಹೊರಡಲಿಲ್ಲವೇನೋ ಎಂದುಕೊಳ್ಳಬಹುದು. ಭಾವನೆಗಳ ಜೊತೆಗೆ, ವಾಕ್ಯ ಕೇವಲ ಹೇಳಿಕೆಯೋ ಅಥವಾ ಪ್ರಶ್ನಾರ್ಥಕವೋ ಎಂಬುದನ್ನೂ ಸ್ವರಭೇದ ಸೂಚಿಸುತ್ತದೆ. ಆಸಕ್ತಿ, ಉತ್ಸಾಹ ಮುಂತಾದ ಭಾವನೆಗಳನ್ನೂ ಸ್ವರಬೇಧ ಹೊರತರುತ್ತದೆ. ಪದದ ಅರ್ಥ ಪದದಲ್ಲಿ ಅಡಗಿರುವುದಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಒಂದು ವಾಕ್ಯದಲ್ಲಿ ಸಾಮಾನ್ಯವಾಗಿ ನಾಮಪದ, ಕ್ರಿಯಾಪದ, ಗುಣವಾಚಕ ಅಥವಾ ಕ್ರಿಯಾ ವಿಶೇಷಣ, ಸಂಧಿ, ಉಪಸರ್ಗ ಮುಂತಾದ ಪದಗಳಿರುತ್ತವೆ. ಯಾವ ಪದದ ಮೇಲೆ ಹೆಚ್ಚು ಒತ್ತು ಬೀಳುತ್ತದೋ ಅದೇ ರೀತಿಯಲ್ಲಿ ವಾಕ್ಯದ ಅರ್ಥ ಬದಲಾಗುತ್ತದೆ. ಅದಕ್ಕಿಂತಲೂ ಹೆಚ್ಚಾಗಿ, ಅರ್ಥ ಹೇಳುವವರ ಅಥವಾ/ಮತ್ತು ಕೇಳುವವರ ಮನಸ್ಸಿನಲ್ಲಿ ಅಡಗಿರುತ್ತದೆ. ಮನಃಸ್ಥಿತಿಯ ವ್ಯತ್ಯಾಸದಿಂದ ಒಬ್ಬರು ಹೇಳಿದ್ದನ್ನು ಇನ್ನೊಬ್ಬರು ತಪ್ಪಾಗಿ ಅರ್ಥೈಸಬಹುದು. ಕೆಲವೊಮ್ಮೆ ಕೇವಲ ಒಂದು ಪದದಲ್ಲಿ ಅನೇಕ ಅರ್ಥಗಳು ಗೂಢೈಸಿರಬಹುದು. ಅದೇ ರೀತಿ ಕಿರುಚುವಿಕೆ ಅಥವಾ ದ್ವನಿಯ ಗಡಸುತನವೂ ಶಕ್ತಿ ಸಾಮರ್ಥ್ಯವನ್ನು ಸೂಚಿಸುತ್ತದೆ. ಮಾತನಾಡುವ ವೇಗದಿಂದಲೂ ನಮ್ಮ ಉದ್ವೇಗ, ನಿರಾಸಕ್ತಿಯನ್ನು ತೋರಿಸಬಹುದು.

ದೃಶ್ಯ ಮಾಧ್ಯಮದ ಬಳಕೆಯಿಲ್ಲದೇ ಭಾವನೆಗಳ ನವರಸಗಳನ್ನು (ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಭತ್ಸ, ಅದ್ಭುತ ಮತ್ತು ಶಾಂತ) ಧ್ವನಿಯಲ್ಲಿ ಮೂಡಿಸಬಹುದು. ಅಷ್ಟೇ ಅಲ್ಲ, ಯಾರು ತಮ್ಮ ಧ್ವನಿಯ ಕಂಪನವನ್ನು, ನಿಯಂತ್ರಣದಲ್ಲಿ, ಮೇಲೆ-ಕೆಳಗೆ ಸಮರ್ಪಕವಾಗಿ ಮಾಡಬಲ್ಲರೋ ಅವರು ಇನ್ನೋರ್ವ ವ್ಯಕ್ತಿಯ ಧ್ವನಿಯನ್ನೂ ಪ್ರತಿರೂಪಿಸಬಲ್ಲರು. ಸಿನಿಮಾ/ಟಿವಿ ಯಲ್ಲಿ ಇದನ್ನು “ವಾಯ್ಸ್ ಆರ್ಟಿಸ್ಟ್” ಗಳು ಸಮರ್ಪಕವಾಗಿ ಬಳಸುತ್ತಾರೆ. ಕೀರಲು-ಗಡಸು ಧ್ವನಿಯಿಂದ ಅವರು ಹೆಂಗಸು ಮತ್ತು ಗಂಡಸಿನ ಧ್ವನಿಯಲ್ಲಿ ಹಾಡಲೂ ಬಲ್ಲರು. ಈ ನಿಯಂತ್ರಣ ಅವರಿಗೆ ಸಾಕಷ್ಟು ಪರಿಶ್ರಮದಿಂದ ಬಂದಿರುತ್ತದೆ, ಹಾಗಾಗಿ ಈ ಕಲೆಯನ್ನು ಎಲ್ಲರೂ ಕಲಿಯಬಹುದು.

ಕೆಲವು ಭಾಷೆಗಳಲ್ಲಿ ಹೆಚ್ಚಿನ ನಾದಗಳ (ಟೋನ್) ಬಳಕೆ ಇರುತ್ತದೆ, ಉದಾ: ಚೈನೀಸ್ ಭಾಷೆಯಲ್ಲಿ ಸಾಧಾರಣವಾಗಿ ನಾಲ್ಕು ನಾದಗಳಿದ್ದರೆ, ಲಾಓಸ್, ಥಾಯ್ಲೆಂಡ್, ವಿಯಟ್ನಾಮ್, ಚೈನಾ ಪ್ರದೇಶದಲ್ಲಿ ಮಾತನಾಡುವ ಹಮೊಂಗ್ (ಚೈನೀಸ್) ಭಾಷೆಯಲ್ಲಿ ಉನ್ನತ, ಮಧ್ಯಮ, ಕೆಳಮಟ್ಟದ, ಏರುತ್ತಿರುವ, ಇಳಿಯುತ್ತಿರುವ  ನಾದಗಳ ಸಂಯೋಗದಿಂದ ಒಂದೇ ಪದಕ್ಕೆ ಎಂಟು ಅರ್ಥ ಕಲ್ಪಿಸಬಹುದು. ಆದ್ದರಿಂದ ಧ್ವನಿಯ  ಏರಿಳಿತಗಳನ್ನು ಸರಿಯಾಗಿ ತಿಳಿದಿರಬೇಕು. ಚೈನೀಸ್ ಭಾಷೆಗೆ ಹೋಲಿಸಿದರೆ ಇಂಗ್ಲಿಷ್ ಭಾಷೆಯನ್ನು ನಾದರಹಿತ ಭಾಷೆ ಎಂದೇ ಕರೆಯಬಹುದು. ಆದ್ದರಿಂದ ಇಂಗ್ಲಿಷ್ ಭಾಷಾ ಮೂಲದ ಜನರಿಗೆ ಚೈನೀಸ್ ಭಾಷೆ ಕಲಿಯುವುದು ಕಷ್ಟಕರ ಎನಿಸಬಹುದು. ಒಂದು ಭಾಷೆ ಕರತಲಾಮಲಕವಾಗಿರುವವರಿಗೆ ಇನ್ನೊಂದು ವಿಭಿನ್ನ ಭಾಷೆಯ ಪದಗಳನ್ನು ಉಚ್ಚಾರ ಮಾಡುವುದೂ ಕಷ್ಟವೆನಿಸಬಹುದು. ಉತ್ತರ ಭಾರತದವರು ದಕ್ಷಿಣದ ರಾಜ್ಯಗಳನ್ನು ಕರ್ನಾಟಕ್, ಕೇರಳ್, ಎನ್ನುವುದನ್ನು ನೀವು ಕೇಳಿರಬಹುದು.

ಓದುವುದೂ ಸಹ ಒಂದು ಕಲೆ. ಭಾವನಾತ್ಮಕವಾಗಿ ಬರೆದ ವಾಕ್ಯವನ್ನು ನಿರ್ಜೀವವಾಗಿಸಿ ಓದುವ ಸುದ್ದಿವಾಚಕರೂ ಇದ್ದಾರೆ, ಅದೇ ರೀತಿ ಏನೂ ಇಲ್ಲದ ಸುದ್ದಿಯನ್ನು ಆಕಾಶವೇ ತಲೆಯ ಮೇಲೆ ಕಳಚಿ ಬಿದ್ದಂತೆ ಬ್ರೇಕಿಂಗ್ ನ್ಯೂಸ್ ಎಂದು ಅರಚುವವರೂ ಇದ್ದಾರೆ. ಆದ್ದರಿಂದ ಗಟ್ಟಿಯಾಗಿ ಓದುವ ಮುಂಚೆ, ಬರೆದಿರುವ ವಾಕ್ಯವನ್ನಷ್ಟೇ ಅಲ್ಲ, ಸಂಪೂರ್ಣ ಪರಿಚ್ಛೇದವನ್ನು ಮನಸ್ಸಿನಲ್ಲಿ ಒಮ್ಮೆ ಓದಿಕೊಂಡು, ಅದರ ಭಾವಾರ್ಥ ಅರಗಿಸಿಕೊಂಡು, ಯಾವ ಪದಗಳಿಗೆ ಎಷ್ಟು ಒತ್ತು ನೀಡಿ, ಯಾವ ಭಾವನೆ ವ್ಯಕ್ತ ಪಡಿಸಬೇಕು ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು. ಹೆಚ್ಚು ಹೆಚ್ಚು ಓದಿದಷ್ಟು ಭಾಷಾಜ್ಞಾನ ಹೆಚ್ಚುತ್ತದೆ. ಬೇರೆ ಬೇರೆ ಲೇಖಕರು ಭಾಷೆಯನ್ನು ಹೇಗೆ ಶಕ್ತಿಶಾಲಿಯಾಗಿ ಬಳಸುತ್ತಾರೆ ಎಂಬುದನ್ನು ಕಲಿಯಬಹುದು.

ಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ ಬರೆಯಬೇಕೆಂದಿರುವ ವಿಷಯದ ಬಗ್ಗೆ ಸಾಕಷ್ಟು ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ಸಾಕಷ್ಟು ಸಂಶೋಧನೆ ಇಲ್ಲದ ಬರವಣಿಗೆಯಲ್ಲಿ ಶಕ್ತಿ ಇರುವುದಿಲ್ಲ. ಹತ್ತು ಪುಟಗಳಷ್ಟು ಓದಿದರೆ ಒಂದು ಪುಟದಷ್ಟು ಸಾರಾಂಶ ಮಾಡಿಕೊಳ್ಳಬಹುದು. ಹತ್ತು ಪುಟದ ಸಾರಾಂಶವನ್ನು ಬರೆಯಲು ಪ್ರಾರಂಬಿಸಿದರೆ ಒಂದು ಪುಟದ ಲೇಖನವಾಗುತ್ತದೆ. ಅಂದರೆ ಒಂದು ಪುಟ ಬರೆಯಲು ನೂರು ಪುಟ ಓದಬೇಕು. ಆದ್ದರಿಂದ ನಾವು ಬರೆಯುವುದಕ್ಕಿಂತ ಹೆಚ್ಚು ಏಕೆ ಓದುತ್ತೇವೆ ಅಥವಾ ಹೆಚ್ಚು ಮಾತನಾಡುತ್ತೇವೆ ಎಂಬುದು ಸ್ಪಷ್ಟವಾಗಿರಬಹುದಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...