Homeಮುಖಪುಟಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ...

ಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ…

- Advertisement -
- Advertisement -

ಜೀವನ ಕಲೆಗಳು : ಅಂಕಣ – 13

ಸಮರ್ಪಕ ಸಂವಹನ ಕಲೆ –2 ಮಾತನಾಡುವುದು,  ಓದುವುದು ಮತ್ತು ಬರೆಯುವುದು.

ಸಂವಹನ ಪ್ರಕ್ರಿಯೆಯಲ್ಲಿ ನಾವು ಸುಮಾರು 45% ಸಮಯ ಬೇರೆಯವರು ಹೇಳಿದ್ದನ್ನು ಕೇಳಿಸಿಕೊಳ್ಳುತ್ತಿರುತ್ತೇವೆ, ಕೇವಲ 30% ಸಮಯ ಮಾತನಾಡುತ್ತಿರುತ್ತೇವೆ, 16% ಸಮಯ ಓದುತ್ತಿರುತ್ತೇವೆ ಮತ್ತು 9% ಸಮಯ ಬರೆಯುತ್ತೇವೆ ಎಂದು ಹಿಂದಿನ ಲೇಖನದಲ್ಲಿ ತಿಳಿಸಿದ್ದೆ. ಅದೇ ರೀತಿ ಸಕ್ರಿಯ ಕೇಳಿಸಿಕೊಳ್ಳುವಿಕೆಯ ಬಗ್ಗೆಯೂ ತಿಳಿಸಿದ್ದೆ.

ಮಾತನಾಡುವ ಸಮಯದಲ್ಲಿ ನಾವು ಮೂರು ಮಾಧ್ಯಮಗಳನ್ನು ಬಳಸುತ್ತೇವೆ. ಅವೆಂದರೆ ಬ್ಯಾಷ್ಯಾತೀತ ದೈಹಿಕಭಾಷೆ ಅಥವಾ ಬಾಡಿಲಾಂಗ್ವೇಜ್, ಎರಡನೆಯದು ಸ್ವರಬೇಧ/ಶಬ್ದಾಧರಿತ ಧ್ವನಿಗಳ ಏರಿಳಿತ (ಇನ್ಟೊನೇಶನ್). ಮೂರನೆಯದು ಸಂಪೂರ್ಣ ಭಾಷೆಯನ್ನು ಆಧರಿಸಿದ ಮಾತುಕತೆ, ಅದನ್ನು ನಾವು ಓದುವ/ಬರೆಯುವ ಕಲೆ ಎನ್ನಲೂಬಹುದು. ಬಾಡಿ ಲಾಂಗ್ವೇಜ್ (ನಾನ್-ವರ್ಬಲ್ ಕಮ್ಯುನಿಕೇಷನ್) ಬಗ್ಗೆ ಪ್ರತ್ಯೇಕವಾಗಿ ಮುಂದೆತಿಳಿಸುತ್ತೇನೆ.

ಟೋನ್ ಅಥವಾ ನಾದವನ್ನು ಆಧರಿಸಿದ ಧ್ವನಿಯ ಸಮರ್ಪಕ ಏರಿಳಿತದಿಂದ ಸಂವಹನದಲ್ಲಿ ಸಮಯಕ್ಕೆ/ಸಂದರ್ಭಕ್ಕೆ ತಕ್ಕ ಪರಿಣಾಮವನ್ನು ಸೃಷ್ಟಿಸಬಹುದು. ಇದನ್ನು ಸಣ್ಣ ಮಕ್ಕಳು ತಮ್ಮ ಸುತ್ತಮುತ್ತ ಇರುವವರ ಜೊತೆ ಸಂವಹನಕ್ಕೆ ಬಳಕೆ ಮಾಡುವುದನ್ನು ನೋಡಿರಬಹುದು. ಮೂಕ ಪ್ರಾಣಿಗಳು ಸಹ ತಮ್ಮ ವಿವಿಧ ಸದ್ದಿನಿಂದ ತಮ್ಮ ಭಾವನಾತ್ಮಕ ಸಂದೇಶ ರವಾನಿಸುತ್ತವೆ. ಧ್ವನಿಯ ಏರಿಳಿತ, ಉಚ್ಚಾರಣೆಯ ವಿಧಾನ ಮತ್ತು ಕಂಪನಗಳ ನಿಯಂತ್ರಣದಿಂದ ಸಂದೇಶಕ್ಕೆ ಹೆಚ್ಚಿನ ಬಲ ಸಿಕ್ಕು, ಇನ್ನಷ್ಟು ಪ್ರಭಾವಶಾಲಿಯಾಗುತ್ತದೆ. ಇದನ್ನು ಭಾವನಾತ್ಮಕ ವಾಚನ ಎಂದೂ ಕರೆಯಬಹುದು. ಗಾಯನ ಸಹ ಇದೇ ಗುಂಪಿಗೆ ಸೇರುತ್ತದೆ. ಧ್ವನಿಯ ಏರಿಳಿತ, ಕಂಪನ ನಿಯಂತ್ರಣವಿಲ್ಲದಿದ್ದರೆ ಭಾಷೆ ನೀರಸ ಮತ್ತು ಏಕತಾನೀಯವಾಗುತ್ತದೆ.

ಮಾತನಾಡುತ್ತಿರುವವರು ನಮ್ಮ ಕಣ್ಮುಂದೆ ಇಲ್ಲದಿದ್ದರೂ ಸ್ವರಬೇಧದಿಂದ ನಾವು ಅವರ ಭಾವನೆಗಳನ್ನು ಅರಿಯಬಹುದು. ಧ್ವನಿಯು ಗದ್ಗದಿತವಾಗಿದ್ದಲ್ಲಿ ಅವರು ದುಃಖದಲ್ಲಿರಬಹುದೆಂತಲೂ, ಮೌನವಾಗಿದ್ದರೆ ಅತೀವ ಸಂತೋಷವಾದಾಗ ಮಾತು ಹೊರಡಲಿಲ್ಲವೇನೋ ಎಂದುಕೊಳ್ಳಬಹುದು. ಭಾವನೆಗಳ ಜೊತೆಗೆ, ವಾಕ್ಯ ಕೇವಲ ಹೇಳಿಕೆಯೋ ಅಥವಾ ಪ್ರಶ್ನಾರ್ಥಕವೋ ಎಂಬುದನ್ನೂ ಸ್ವರಭೇದ ಸೂಚಿಸುತ್ತದೆ. ಆಸಕ್ತಿ, ಉತ್ಸಾಹ ಮುಂತಾದ ಭಾವನೆಗಳನ್ನೂ ಸ್ವರಬೇಧ ಹೊರತರುತ್ತದೆ. ಪದದ ಅರ್ಥ ಪದದಲ್ಲಿ ಅಡಗಿರುವುದಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಒಂದು ವಾಕ್ಯದಲ್ಲಿ ಸಾಮಾನ್ಯವಾಗಿ ನಾಮಪದ, ಕ್ರಿಯಾಪದ, ಗುಣವಾಚಕ ಅಥವಾ ಕ್ರಿಯಾ ವಿಶೇಷಣ, ಸಂಧಿ, ಉಪಸರ್ಗ ಮುಂತಾದ ಪದಗಳಿರುತ್ತವೆ. ಯಾವ ಪದದ ಮೇಲೆ ಹೆಚ್ಚು ಒತ್ತು ಬೀಳುತ್ತದೋ ಅದೇ ರೀತಿಯಲ್ಲಿ ವಾಕ್ಯದ ಅರ್ಥ ಬದಲಾಗುತ್ತದೆ. ಅದಕ್ಕಿಂತಲೂ ಹೆಚ್ಚಾಗಿ, ಅರ್ಥ ಹೇಳುವವರ ಅಥವಾ/ಮತ್ತು ಕೇಳುವವರ ಮನಸ್ಸಿನಲ್ಲಿ ಅಡಗಿರುತ್ತದೆ. ಮನಃಸ್ಥಿತಿಯ ವ್ಯತ್ಯಾಸದಿಂದ ಒಬ್ಬರು ಹೇಳಿದ್ದನ್ನು ಇನ್ನೊಬ್ಬರು ತಪ್ಪಾಗಿ ಅರ್ಥೈಸಬಹುದು. ಕೆಲವೊಮ್ಮೆ ಕೇವಲ ಒಂದು ಪದದಲ್ಲಿ ಅನೇಕ ಅರ್ಥಗಳು ಗೂಢೈಸಿರಬಹುದು. ಅದೇ ರೀತಿ ಕಿರುಚುವಿಕೆ ಅಥವಾ ದ್ವನಿಯ ಗಡಸುತನವೂ ಶಕ್ತಿ ಸಾಮರ್ಥ್ಯವನ್ನು ಸೂಚಿಸುತ್ತದೆ. ಮಾತನಾಡುವ ವೇಗದಿಂದಲೂ ನಮ್ಮ ಉದ್ವೇಗ, ನಿರಾಸಕ್ತಿಯನ್ನು ತೋರಿಸಬಹುದು.

ದೃಶ್ಯ ಮಾಧ್ಯಮದ ಬಳಕೆಯಿಲ್ಲದೇ ಭಾವನೆಗಳ ನವರಸಗಳನ್ನು (ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಭತ್ಸ, ಅದ್ಭುತ ಮತ್ತು ಶಾಂತ) ಧ್ವನಿಯಲ್ಲಿ ಮೂಡಿಸಬಹುದು. ಅಷ್ಟೇ ಅಲ್ಲ, ಯಾರು ತಮ್ಮ ಧ್ವನಿಯ ಕಂಪನವನ್ನು, ನಿಯಂತ್ರಣದಲ್ಲಿ, ಮೇಲೆ-ಕೆಳಗೆ ಸಮರ್ಪಕವಾಗಿ ಮಾಡಬಲ್ಲರೋ ಅವರು ಇನ್ನೋರ್ವ ವ್ಯಕ್ತಿಯ ಧ್ವನಿಯನ್ನೂ ಪ್ರತಿರೂಪಿಸಬಲ್ಲರು. ಸಿನಿಮಾ/ಟಿವಿ ಯಲ್ಲಿ ಇದನ್ನು “ವಾಯ್ಸ್ ಆರ್ಟಿಸ್ಟ್” ಗಳು ಸಮರ್ಪಕವಾಗಿ ಬಳಸುತ್ತಾರೆ. ಕೀರಲು-ಗಡಸು ಧ್ವನಿಯಿಂದ ಅವರು ಹೆಂಗಸು ಮತ್ತು ಗಂಡಸಿನ ಧ್ವನಿಯಲ್ಲಿ ಹಾಡಲೂ ಬಲ್ಲರು. ಈ ನಿಯಂತ್ರಣ ಅವರಿಗೆ ಸಾಕಷ್ಟು ಪರಿಶ್ರಮದಿಂದ ಬಂದಿರುತ್ತದೆ, ಹಾಗಾಗಿ ಈ ಕಲೆಯನ್ನು ಎಲ್ಲರೂ ಕಲಿಯಬಹುದು.

ಕೆಲವು ಭಾಷೆಗಳಲ್ಲಿ ಹೆಚ್ಚಿನ ನಾದಗಳ (ಟೋನ್) ಬಳಕೆ ಇರುತ್ತದೆ, ಉದಾ: ಚೈನೀಸ್ ಭಾಷೆಯಲ್ಲಿ ಸಾಧಾರಣವಾಗಿ ನಾಲ್ಕು ನಾದಗಳಿದ್ದರೆ, ಲಾಓಸ್, ಥಾಯ್ಲೆಂಡ್, ವಿಯಟ್ನಾಮ್, ಚೈನಾ ಪ್ರದೇಶದಲ್ಲಿ ಮಾತನಾಡುವ ಹಮೊಂಗ್ (ಚೈನೀಸ್) ಭಾಷೆಯಲ್ಲಿ ಉನ್ನತ, ಮಧ್ಯಮ, ಕೆಳಮಟ್ಟದ, ಏರುತ್ತಿರುವ, ಇಳಿಯುತ್ತಿರುವ  ನಾದಗಳ ಸಂಯೋಗದಿಂದ ಒಂದೇ ಪದಕ್ಕೆ ಎಂಟು ಅರ್ಥ ಕಲ್ಪಿಸಬಹುದು. ಆದ್ದರಿಂದ ಧ್ವನಿಯ  ಏರಿಳಿತಗಳನ್ನು ಸರಿಯಾಗಿ ತಿಳಿದಿರಬೇಕು. ಚೈನೀಸ್ ಭಾಷೆಗೆ ಹೋಲಿಸಿದರೆ ಇಂಗ್ಲಿಷ್ ಭಾಷೆಯನ್ನು ನಾದರಹಿತ ಭಾಷೆ ಎಂದೇ ಕರೆಯಬಹುದು. ಆದ್ದರಿಂದ ಇಂಗ್ಲಿಷ್ ಭಾಷಾ ಮೂಲದ ಜನರಿಗೆ ಚೈನೀಸ್ ಭಾಷೆ ಕಲಿಯುವುದು ಕಷ್ಟಕರ ಎನಿಸಬಹುದು. ಒಂದು ಭಾಷೆ ಕರತಲಾಮಲಕವಾಗಿರುವವರಿಗೆ ಇನ್ನೊಂದು ವಿಭಿನ್ನ ಭಾಷೆಯ ಪದಗಳನ್ನು ಉಚ್ಚಾರ ಮಾಡುವುದೂ ಕಷ್ಟವೆನಿಸಬಹುದು. ಉತ್ತರ ಭಾರತದವರು ದಕ್ಷಿಣದ ರಾಜ್ಯಗಳನ್ನು ಕರ್ನಾಟಕ್, ಕೇರಳ್, ಎನ್ನುವುದನ್ನು ನೀವು ಕೇಳಿರಬಹುದು.

ಓದುವುದೂ ಸಹ ಒಂದು ಕಲೆ. ಭಾವನಾತ್ಮಕವಾಗಿ ಬರೆದ ವಾಕ್ಯವನ್ನು ನಿರ್ಜೀವವಾಗಿಸಿ ಓದುವ ಸುದ್ದಿವಾಚಕರೂ ಇದ್ದಾರೆ, ಅದೇ ರೀತಿ ಏನೂ ಇಲ್ಲದ ಸುದ್ದಿಯನ್ನು ಆಕಾಶವೇ ತಲೆಯ ಮೇಲೆ ಕಳಚಿ ಬಿದ್ದಂತೆ ಬ್ರೇಕಿಂಗ್ ನ್ಯೂಸ್ ಎಂದು ಅರಚುವವರೂ ಇದ್ದಾರೆ. ಆದ್ದರಿಂದ ಗಟ್ಟಿಯಾಗಿ ಓದುವ ಮುಂಚೆ, ಬರೆದಿರುವ ವಾಕ್ಯವನ್ನಷ್ಟೇ ಅಲ್ಲ, ಸಂಪೂರ್ಣ ಪರಿಚ್ಛೇದವನ್ನು ಮನಸ್ಸಿನಲ್ಲಿ ಒಮ್ಮೆ ಓದಿಕೊಂಡು, ಅದರ ಭಾವಾರ್ಥ ಅರಗಿಸಿಕೊಂಡು, ಯಾವ ಪದಗಳಿಗೆ ಎಷ್ಟು ಒತ್ತು ನೀಡಿ, ಯಾವ ಭಾವನೆ ವ್ಯಕ್ತ ಪಡಿಸಬೇಕು ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು. ಹೆಚ್ಚು ಹೆಚ್ಚು ಓದಿದಷ್ಟು ಭಾಷಾಜ್ಞಾನ ಹೆಚ್ಚುತ್ತದೆ. ಬೇರೆ ಬೇರೆ ಲೇಖಕರು ಭಾಷೆಯನ್ನು ಹೇಗೆ ಶಕ್ತಿಶಾಲಿಯಾಗಿ ಬಳಸುತ್ತಾರೆ ಎಂಬುದನ್ನು ಕಲಿಯಬಹುದು.

ಬರೆಯುವುದೂ ಒಂದು ಕಲೆ ಎಂದು ಬೇರೆ ಹೇಳಬೇಕಿಲ್ಲ. ಬರೆಯಲು ಪ್ರಾರಂಭಿಸುವ ಮುನ್ನ ಬರೆಯಬೇಕೆಂದಿರುವ ವಿಷಯದ ಬಗ್ಗೆ ಸಾಕಷ್ಟು ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ಸಾಕಷ್ಟು ಸಂಶೋಧನೆ ಇಲ್ಲದ ಬರವಣಿಗೆಯಲ್ಲಿ ಶಕ್ತಿ ಇರುವುದಿಲ್ಲ. ಹತ್ತು ಪುಟಗಳಷ್ಟು ಓದಿದರೆ ಒಂದು ಪುಟದಷ್ಟು ಸಾರಾಂಶ ಮಾಡಿಕೊಳ್ಳಬಹುದು. ಹತ್ತು ಪುಟದ ಸಾರಾಂಶವನ್ನು ಬರೆಯಲು ಪ್ರಾರಂಬಿಸಿದರೆ ಒಂದು ಪುಟದ ಲೇಖನವಾಗುತ್ತದೆ. ಅಂದರೆ ಒಂದು ಪುಟ ಬರೆಯಲು ನೂರು ಪುಟ ಓದಬೇಕು. ಆದ್ದರಿಂದ ನಾವು ಬರೆಯುವುದಕ್ಕಿಂತ ಹೆಚ್ಚು ಏಕೆ ಓದುತ್ತೇವೆ ಅಥವಾ ಹೆಚ್ಚು ಮಾತನಾಡುತ್ತೇವೆ ಎಂಬುದು ಸ್ಪಷ್ಟವಾಗಿರಬಹುದಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...