Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...