Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...