Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...