Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...