Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...