Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...