Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...