Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...