Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...