Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...