Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...