Homeಮುಖಪುಟಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

- Advertisement -
- Advertisement -

ಗರ್ಭಿಣಿಯರು ಮತ್ತು ಮಕ್ಕಳಿಗೆ ಮೊಟ್ಟೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ರಹಸ್ಯ ಕಾರ್ಯಚರಣೆಯ ವಿಡಿಯೋ ಬಿಡುಗಡೆಯಾಗಿದೆ.

ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿದೆ.

ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರ ಭ್ರಷ್ಟಾಚಾರವನ್ನ ಖಂಡಿಸಿ, ಬೆಂಗಳೂರಿನ ಜೆ.ಸಿ ನಗರ ರಸ್ತೆಯಲ್ಲಿರುವ ಶಶಿಕಲಾ ಜೊಲ್ಲೆಯವರ ಅಧಿಕೃತ ಮುಂದೆ ಜಮಾಯಿಸಿದ NSUI ಕಾರ್ಯಕರ್ತರು, ನಿವಾಸಕ್ಕೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದಾರೆ.

ಭ್ರಷ್ಟಾಚಾರ ನಡೆಸಿರುವ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಒಂದೆಡೆ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಣ ನೀಡದೆ ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಇನ್ನೊಂದೆಡೆ ಅದೇ ಕಾರ್ಯಕ್ರಮಗಳನ್ನು ತಮ್ಮ ಜೇಬು ತುಂಬಿಕೊಳ್ಳಲು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮಾತೃಪೂರ್ಣ’ ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮೊಟ್ಟೆಗಳ ಖರೀದಿಯಲ್ಲಿ ಲಂಚ ಪಡೆದಿರುವ ಹಗರಣದಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ
ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕು. ಲಂಚದ ಹಣಕ್ಕೆ ಬಿಜೆಪಿ ನಾಯಕರು ಜೊಲ್ಲು ಸುರಿಸುತ್ತಿರುವವರು ಎಂದು ಲೋಕಕ್ಕೆ ಗೊತ್ತಿದೆ. ಆದರೆ ಇವರು ಸಣ್ಣಮಕ್ಕಳು ಮತ್ತು ಗರ್ಭಿಣಿಯರ ತಟ್ಟೆಗೂ ಕೈಹಾಕುವ ಮಟ್ಟಕ್ಕೆ ಇಳಿದಿರುವುದು ನ್ಯೂಸ್‌ಫಸ್ಟ್ ನನಡೆಸಿರುವ ಕುಟುಕು ಕಾರ್ಯಾಚರಣೆಯಿಂದ ಬಯಲಾಗಿದೆ” ಎಂದಿದ್ದಾರೆ.

ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ: ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

ಖಾಸಗಿ ವಾಹಿನಿಯ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿ ನನ್ನನ್ನು ಆರೋಪಿತಳನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿರುವುದು ದುರದೃಷ್ಟಕರ. ಖಾಸಗಿ ವಾಹಿನಿಯಲ್ಲಿ ಹೇಳುತ್ತಿರುವ ಹಾಗೆ ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ. ಇದರ ಹಿಂದೆ ವ್ಯವಸ್ಥಿತ ರಾಜಕೀಯ ಪಿತೂರಿಯಿದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ; ಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...