Homeಮುಖಪುಟಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

- Advertisement -
- Advertisement -

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂಪಾಯಿ ಜಿಎಸ್‌ಟಿ ಬಾಕಿ ಇದೆ ಎಂದು ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿರುವ ಬಗ್ಗೆ ವರದಿಯಾಗಿದೆ.

ತಮ್ಮ ಕುಟುಂಬಗಳಲ್ಲಿ ಏಕೈಕ ಆದಾಯ ಗಳಿಸುವ ವ್ಯಕ್ತಿಗಳಾದ ಈ ಇಬ್ಬರು ಪುರುಷರು, ಐಟಿ ಇಲಾಖೆಯ ನೋಟಿಸ್‌ ನೋಡಿ ಆಘಾತಕ್ಕೊಳಗಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮೊಟ್ಟೆ ಮಾರಾಟಗಾರ ಪ್ರಿನ್ಸ್ ಸುಮನ್ ಅವರಿಗೆ ಸುಮಾರು 50 ಕೋಟಿ ರೂಪಾಯಿಗಳ ವ್ಯವಹಾರಕ್ಕಾಗಿ ನೋಟಿಸ್ ನೀಡಲಾಗಿದೆ. ಸರ್ಕಾರಕ್ಕೆ 6 ಕೋಟಿ ರೂಪಾಯಿ ಜಿಎಸ್‌ಟಿ ಪಾವತಿಸಲು ಬಾಕಿ ಇದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಪ್ರಿನ್ಸ್ ಎಂಟರ್‌ಪ್ರೈಸಸ್’ ಎಂಬ ಕಂಪನಿಯು 2022ರಲ್ಲಿ ದೆಹಲಿಯ ರಾಜ್ಯ ವಲಯ 3, ವಾರ್ಡ್ 33 ರಲ್ಲಿ ಸುಮನ್ ಅವರ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಈ ಕಂಪನಿಯು ಚರ್ಮ, ಮರ ಮತ್ತು ಕಬ್ಬಿಣದ ವ್ಯಾಪಾರದಲ್ಲಿ ತೊಡಗಿದ್ದು, ಕಳೆದ ಎರಡು ವರ್ಷಗಳಲ್ಲಿ ಬೃಹತ್ ವಹಿವಾಟುಗಳನ್ನು ನಡೆಸಿದೆ ಎಂದು ಐಟಿ ಇಲಾಖೆಯ ನೋಟಿಸ್‌ನಲ್ಲಿ ಹೇಳಲಾಗಿದೆ ಎಂದು ವರದಿ ತಿಳಿಸಿದೆ.

“ನಾನು ಗಾಡಿಯಲ್ಲಿಟ್ಟು ಮೊಟ್ಟೆ ಮಾರುವವ. ದೆಹಲಿಗೆ ಹೋಗಿಲ್ಲ, ಅಲ್ಲಿ ಕಂಪನಿ ಪ್ರಾರಂಭಿಸುವುದಂತೂ ಸಾಧ್ಯವೇ ಇಲ್ಲ” ಎಂದು ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಪಥಾರಿಯಾ ನಗರದಲ್ಲಿ ವಾಸಿಸುವ ಸುಮನ್ ಹೇಳಿದ್ದಾರೆ.

ಸಣ್ಣ ದಿನಸಿ ಅಂಗಡಿ ನಡೆಸುತ್ತಿರುವ ಸುಮನ್‌ ಅವರ ತಂದೆ ಅವರ ತಂದೆ ಧರ್ ಸುಮನ್, “ನಮ್ಮಲ್ಲಿ ನಿಜವಾಗಿಯೂ 50 ಕೋಟಿ ರೂಪಾಯಿ ಇದ್ದರೆ ದೈನಂದಿನ ಖರ್ಚುಗಳನ್ನು ಪೂರೈಸಲು ಏಕೆ ಕಷ್ಟಪಡಬೇಕು?” ಎಂದು ಪ್ರಶ್ನಿಸಿದ್ದಾರೆ.

“ಸುಮನ್ ಅವರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿರಬಹುದು ಎಂದು ಅವರ ಕುಟುಂಬದ ವಕೀಲರು ಶಂಕಿಸಿದ್ದಾರೆ. “ಯಾರೋ ಪ್ರಿನ್ಸ್ ಅವರ ದಾಖಲೆಗಳನ್ನು ವಂಚನೆಯ ಮೂಲಕ ಬಳಸಿಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ನಾವು ಪೊಲೀಸ್ ಮತ್ತು ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 20ರಂದು ಸುಮನ್‌ ಅವರಿಗೆ ನೀಡಿದ ನೋಟಿಸ್‌ನಲ್ಲಿ, ಐ-ಟಿ ಇಲಾಖೆಯು ಒಟ್ಟು 49.24 ಕೋಟಿ ರೂಪಾಯಿ ಹಣಕಾಸು ವಹಿವಾಟಿನ ವಿವರವನ್ನು ಕೋರಿದೆ. 2022-23ನೇ ಹಣಕಾಸು ವರ್ಷದ ಬಿಲ್‌ಗಳು, ಖರೀದಿ ವೋಚರ್‌ಗಳು, ಸಾರಿಗೆ ದಾಖಲೆಗಳು ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಪ್ರಸ್ತುತಪಡಿಸಿವಂತೆ ಸೂಚಿಸಿದೆ.

ಉತ್ತರ ಪ್ರದೇಶದ ಅಲಿಗಢದ ಜ್ಯೂಸ್ ಮಾರಾಟಗಾರ ಎಂ.ಡಿ ರಹೀಸ್ ಎಂಬವರಿಗೂ ಸುಮನ್‌ ಅವರಂತೆ 7.5 ಕೋಟಿ ರೂಪಾಯಿಗೂ ಹೆಚ್ಚು ಜಿಎಸ್‌ಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದ್ದು, ಇದು ಅವರನ್ನು ಮತ್ತು ಅವರ ಕುಟುಂಬವನ್ನು ಸಂಕಷ್ಟಕ್ಕೆ ದೂಡಿದೆ.

“ಈ ನೋಟಿಸ್ ಏಕೆ ನೀಡಲಾಗಿದೆ ಎಂಬುವುದೇ ನನಗೆ ಗೊತ್ತಿಲ್ಲ. ನಾನು ಜ್ಯೂಸ್ ಮಾತ್ರ ಮಾರಾಟ ಮಾಡುತ್ತೇನೆ. ನಾನು ಇಷ್ಟೊಂದು ಹಣವನ್ನು ಎಂದಿಗೂ ನೋಡಿಲ್ಲ. ಈಗ ನಾನು ಏನು ಮಾಡಬೇಕು?” ರಹೀಸ್ ಪ್ರಶ್ನಿಸಿದ್ದಾರೆ.

“ಸರ್ಕಾರ ನನಗೆ ಸಹಾಯ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನು ಬಡವ. ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

2020-21ರಲ್ಲಿ ರಹೀಸ್ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ನಕಲಿ ವಹಿವಾಟುಗಳು ನಡೆದಿವೆ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ, ಅವರು ಸರ್ಕಾರಕ್ಕೆ 7,79,02,457 ರೂಪಾಯಿ ಜಿಎಸ್‌ಟಿ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

“ನಾವು ಐಟಿ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ನನ್ನ ವೈಯಕ್ತಿಕ ದಾಖಲೆಗಳನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದೀರಾ? ಎಂದು ಕೇಳಿದ್ದಾರೆ. ನಾನು ಅವುಗಳನ್ನು ಯಾರೊಂದಿಗೂ ಹಂಚಿಕೊಂಡಿಲ್ಲ ಎಂದು ಹೇಳಿದೆ” ಎಂದು ಬನ್ನಾ ದೇವಿ ಪೊಲೀಸ್ ಠಾಣೆ ವ್ಯಾಪ್ತಿಯ ತಾರ್ ವಾಲಿ ಗಲಿಯಲ್ಲಿ ವಾಸಿಸುವ ರಹೀಸ್ ಹೇಳಿದ್ದಾರೆ.

“ನಾವು ನಮ್ಮ ದಿನನಿತ್ಯದ ಊಟಕ್ಕೂ ಕಷ್ಟಪಡುತ್ತಿದ್ದೇವೆ… ನಮ್ಮ ಬಳಿ ಅಷ್ಟೊಂದು ಹಣವಿದ್ದರೆ, ನಮ್ಮ ಮಗ ಏಕೆ ಇಷ್ಟೊಂದು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತಿತ್ತು?” ಎಂದು ರಹೀಸ್ ತಾಯಿ ಪ್ರಶ್ನಿಸಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡಲು ರಹೀಸ್ ಅವರ ವೈಯಕ್ತಿಕ ದಾಖಲೆಗಳನ್ನು ವಂಚನೆಯಿಂದ ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

“ರಹೀಸ್ ಕೋಟ್ಯಾಧಿಪತಿಯಾಗಿದ್ದರೆ, ಅವರು ಜ್ಯೂಸ್ ಅಂಗಡಿ ನಡೆಸುತ್ತಿದ್ದರೇ? ಇದು ಖಂಡಿತವಾಗಿಯೂ ವಂಚನೆಯ ಪ್ರಕರಣವಾಗಿದೆ” ಎಂದು ಜ್ಯೂಸ್ ರಹೀಸ್ ಅವರ ಸ್ನೇಹಿತ ಸೊಹೈಲ್ ಹೇಳಿದ್ದಾರೆ. |

ಸೌಜನ್ಯ: ndtv.com

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...