Homeಮುಖಪುಟಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

- Advertisement -
- Advertisement -

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂಪಾಯಿ ಜಿಎಸ್‌ಟಿ ಬಾಕಿ ಇದೆ ಎಂದು ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿರುವ ಬಗ್ಗೆ ವರದಿಯಾಗಿದೆ.

ತಮ್ಮ ಕುಟುಂಬಗಳಲ್ಲಿ ಏಕೈಕ ಆದಾಯ ಗಳಿಸುವ ವ್ಯಕ್ತಿಗಳಾದ ಈ ಇಬ್ಬರು ಪುರುಷರು, ಐಟಿ ಇಲಾಖೆಯ ನೋಟಿಸ್‌ ನೋಡಿ ಆಘಾತಕ್ಕೊಳಗಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮೊಟ್ಟೆ ಮಾರಾಟಗಾರ ಪ್ರಿನ್ಸ್ ಸುಮನ್ ಅವರಿಗೆ ಸುಮಾರು 50 ಕೋಟಿ ರೂಪಾಯಿಗಳ ವ್ಯವಹಾರಕ್ಕಾಗಿ ನೋಟಿಸ್ ನೀಡಲಾಗಿದೆ. ಸರ್ಕಾರಕ್ಕೆ 6 ಕೋಟಿ ರೂಪಾಯಿ ಜಿಎಸ್‌ಟಿ ಪಾವತಿಸಲು ಬಾಕಿ ಇದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಪ್ರಿನ್ಸ್ ಎಂಟರ್‌ಪ್ರೈಸಸ್’ ಎಂಬ ಕಂಪನಿಯು 2022ರಲ್ಲಿ ದೆಹಲಿಯ ರಾಜ್ಯ ವಲಯ 3, ವಾರ್ಡ್ 33 ರಲ್ಲಿ ಸುಮನ್ ಅವರ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಈ ಕಂಪನಿಯು ಚರ್ಮ, ಮರ ಮತ್ತು ಕಬ್ಬಿಣದ ವ್ಯಾಪಾರದಲ್ಲಿ ತೊಡಗಿದ್ದು, ಕಳೆದ ಎರಡು ವರ್ಷಗಳಲ್ಲಿ ಬೃಹತ್ ವಹಿವಾಟುಗಳನ್ನು ನಡೆಸಿದೆ ಎಂದು ಐಟಿ ಇಲಾಖೆಯ ನೋಟಿಸ್‌ನಲ್ಲಿ ಹೇಳಲಾಗಿದೆ ಎಂದು ವರದಿ ತಿಳಿಸಿದೆ.

“ನಾನು ಗಾಡಿಯಲ್ಲಿಟ್ಟು ಮೊಟ್ಟೆ ಮಾರುವವ. ದೆಹಲಿಗೆ ಹೋಗಿಲ್ಲ, ಅಲ್ಲಿ ಕಂಪನಿ ಪ್ರಾರಂಭಿಸುವುದಂತೂ ಸಾಧ್ಯವೇ ಇಲ್ಲ” ಎಂದು ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಪಥಾರಿಯಾ ನಗರದಲ್ಲಿ ವಾಸಿಸುವ ಸುಮನ್ ಹೇಳಿದ್ದಾರೆ.

ಸಣ್ಣ ದಿನಸಿ ಅಂಗಡಿ ನಡೆಸುತ್ತಿರುವ ಸುಮನ್‌ ಅವರ ತಂದೆ ಅವರ ತಂದೆ ಧರ್ ಸುಮನ್, “ನಮ್ಮಲ್ಲಿ ನಿಜವಾಗಿಯೂ 50 ಕೋಟಿ ರೂಪಾಯಿ ಇದ್ದರೆ ದೈನಂದಿನ ಖರ್ಚುಗಳನ್ನು ಪೂರೈಸಲು ಏಕೆ ಕಷ್ಟಪಡಬೇಕು?” ಎಂದು ಪ್ರಶ್ನಿಸಿದ್ದಾರೆ.

“ಸುಮನ್ ಅವರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿರಬಹುದು ಎಂದು ಅವರ ಕುಟುಂಬದ ವಕೀಲರು ಶಂಕಿಸಿದ್ದಾರೆ. “ಯಾರೋ ಪ್ರಿನ್ಸ್ ಅವರ ದಾಖಲೆಗಳನ್ನು ವಂಚನೆಯ ಮೂಲಕ ಬಳಸಿಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ನಾವು ಪೊಲೀಸ್ ಮತ್ತು ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 20ರಂದು ಸುಮನ್‌ ಅವರಿಗೆ ನೀಡಿದ ನೋಟಿಸ್‌ನಲ್ಲಿ, ಐ-ಟಿ ಇಲಾಖೆಯು ಒಟ್ಟು 49.24 ಕೋಟಿ ರೂಪಾಯಿ ಹಣಕಾಸು ವಹಿವಾಟಿನ ವಿವರವನ್ನು ಕೋರಿದೆ. 2022-23ನೇ ಹಣಕಾಸು ವರ್ಷದ ಬಿಲ್‌ಗಳು, ಖರೀದಿ ವೋಚರ್‌ಗಳು, ಸಾರಿಗೆ ದಾಖಲೆಗಳು ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಪ್ರಸ್ತುತಪಡಿಸಿವಂತೆ ಸೂಚಿಸಿದೆ.

ಉತ್ತರ ಪ್ರದೇಶದ ಅಲಿಗಢದ ಜ್ಯೂಸ್ ಮಾರಾಟಗಾರ ಎಂ.ಡಿ ರಹೀಸ್ ಎಂಬವರಿಗೂ ಸುಮನ್‌ ಅವರಂತೆ 7.5 ಕೋಟಿ ರೂಪಾಯಿಗೂ ಹೆಚ್ಚು ಜಿಎಸ್‌ಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದ್ದು, ಇದು ಅವರನ್ನು ಮತ್ತು ಅವರ ಕುಟುಂಬವನ್ನು ಸಂಕಷ್ಟಕ್ಕೆ ದೂಡಿದೆ.

“ಈ ನೋಟಿಸ್ ಏಕೆ ನೀಡಲಾಗಿದೆ ಎಂಬುವುದೇ ನನಗೆ ಗೊತ್ತಿಲ್ಲ. ನಾನು ಜ್ಯೂಸ್ ಮಾತ್ರ ಮಾರಾಟ ಮಾಡುತ್ತೇನೆ. ನಾನು ಇಷ್ಟೊಂದು ಹಣವನ್ನು ಎಂದಿಗೂ ನೋಡಿಲ್ಲ. ಈಗ ನಾನು ಏನು ಮಾಡಬೇಕು?” ರಹೀಸ್ ಪ್ರಶ್ನಿಸಿದ್ದಾರೆ.

“ಸರ್ಕಾರ ನನಗೆ ಸಹಾಯ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನು ಬಡವ. ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

2020-21ರಲ್ಲಿ ರಹೀಸ್ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ನಕಲಿ ವಹಿವಾಟುಗಳು ನಡೆದಿವೆ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ, ಅವರು ಸರ್ಕಾರಕ್ಕೆ 7,79,02,457 ರೂಪಾಯಿ ಜಿಎಸ್‌ಟಿ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

“ನಾವು ಐಟಿ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ನನ್ನ ವೈಯಕ್ತಿಕ ದಾಖಲೆಗಳನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದೀರಾ? ಎಂದು ಕೇಳಿದ್ದಾರೆ. ನಾನು ಅವುಗಳನ್ನು ಯಾರೊಂದಿಗೂ ಹಂಚಿಕೊಂಡಿಲ್ಲ ಎಂದು ಹೇಳಿದೆ” ಎಂದು ಬನ್ನಾ ದೇವಿ ಪೊಲೀಸ್ ಠಾಣೆ ವ್ಯಾಪ್ತಿಯ ತಾರ್ ವಾಲಿ ಗಲಿಯಲ್ಲಿ ವಾಸಿಸುವ ರಹೀಸ್ ಹೇಳಿದ್ದಾರೆ.

“ನಾವು ನಮ್ಮ ದಿನನಿತ್ಯದ ಊಟಕ್ಕೂ ಕಷ್ಟಪಡುತ್ತಿದ್ದೇವೆ… ನಮ್ಮ ಬಳಿ ಅಷ್ಟೊಂದು ಹಣವಿದ್ದರೆ, ನಮ್ಮ ಮಗ ಏಕೆ ಇಷ್ಟೊಂದು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತಿತ್ತು?” ಎಂದು ರಹೀಸ್ ತಾಯಿ ಪ್ರಶ್ನಿಸಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡಲು ರಹೀಸ್ ಅವರ ವೈಯಕ್ತಿಕ ದಾಖಲೆಗಳನ್ನು ವಂಚನೆಯಿಂದ ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

“ರಹೀಸ್ ಕೋಟ್ಯಾಧಿಪತಿಯಾಗಿದ್ದರೆ, ಅವರು ಜ್ಯೂಸ್ ಅಂಗಡಿ ನಡೆಸುತ್ತಿದ್ದರೇ? ಇದು ಖಂಡಿತವಾಗಿಯೂ ವಂಚನೆಯ ಪ್ರಕರಣವಾಗಿದೆ” ಎಂದು ಜ್ಯೂಸ್ ರಹೀಸ್ ಅವರ ಸ್ನೇಹಿತ ಸೊಹೈಲ್ ಹೇಳಿದ್ದಾರೆ. |

ಸೌಜನ್ಯ: ndtv.com

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...