Homeಮುಖಪುಟಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

- Advertisement -
- Advertisement -

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂಪಾಯಿ ಜಿಎಸ್‌ಟಿ ಬಾಕಿ ಇದೆ ಎಂದು ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿರುವ ಬಗ್ಗೆ ವರದಿಯಾಗಿದೆ.

ತಮ್ಮ ಕುಟುಂಬಗಳಲ್ಲಿ ಏಕೈಕ ಆದಾಯ ಗಳಿಸುವ ವ್ಯಕ್ತಿಗಳಾದ ಈ ಇಬ್ಬರು ಪುರುಷರು, ಐಟಿ ಇಲಾಖೆಯ ನೋಟಿಸ್‌ ನೋಡಿ ಆಘಾತಕ್ಕೊಳಗಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮೊಟ್ಟೆ ಮಾರಾಟಗಾರ ಪ್ರಿನ್ಸ್ ಸುಮನ್ ಅವರಿಗೆ ಸುಮಾರು 50 ಕೋಟಿ ರೂಪಾಯಿಗಳ ವ್ಯವಹಾರಕ್ಕಾಗಿ ನೋಟಿಸ್ ನೀಡಲಾಗಿದೆ. ಸರ್ಕಾರಕ್ಕೆ 6 ಕೋಟಿ ರೂಪಾಯಿ ಜಿಎಸ್‌ಟಿ ಪಾವತಿಸಲು ಬಾಕಿ ಇದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಪ್ರಿನ್ಸ್ ಎಂಟರ್‌ಪ್ರೈಸಸ್’ ಎಂಬ ಕಂಪನಿಯು 2022ರಲ್ಲಿ ದೆಹಲಿಯ ರಾಜ್ಯ ವಲಯ 3, ವಾರ್ಡ್ 33 ರಲ್ಲಿ ಸುಮನ್ ಅವರ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಈ ಕಂಪನಿಯು ಚರ್ಮ, ಮರ ಮತ್ತು ಕಬ್ಬಿಣದ ವ್ಯಾಪಾರದಲ್ಲಿ ತೊಡಗಿದ್ದು, ಕಳೆದ ಎರಡು ವರ್ಷಗಳಲ್ಲಿ ಬೃಹತ್ ವಹಿವಾಟುಗಳನ್ನು ನಡೆಸಿದೆ ಎಂದು ಐಟಿ ಇಲಾಖೆಯ ನೋಟಿಸ್‌ನಲ್ಲಿ ಹೇಳಲಾಗಿದೆ ಎಂದು ವರದಿ ತಿಳಿಸಿದೆ.

“ನಾನು ಗಾಡಿಯಲ್ಲಿಟ್ಟು ಮೊಟ್ಟೆ ಮಾರುವವ. ದೆಹಲಿಗೆ ಹೋಗಿಲ್ಲ, ಅಲ್ಲಿ ಕಂಪನಿ ಪ್ರಾರಂಭಿಸುವುದಂತೂ ಸಾಧ್ಯವೇ ಇಲ್ಲ” ಎಂದು ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಪಥಾರಿಯಾ ನಗರದಲ್ಲಿ ವಾಸಿಸುವ ಸುಮನ್ ಹೇಳಿದ್ದಾರೆ.

ಸಣ್ಣ ದಿನಸಿ ಅಂಗಡಿ ನಡೆಸುತ್ತಿರುವ ಸುಮನ್‌ ಅವರ ತಂದೆ ಅವರ ತಂದೆ ಧರ್ ಸುಮನ್, “ನಮ್ಮಲ್ಲಿ ನಿಜವಾಗಿಯೂ 50 ಕೋಟಿ ರೂಪಾಯಿ ಇದ್ದರೆ ದೈನಂದಿನ ಖರ್ಚುಗಳನ್ನು ಪೂರೈಸಲು ಏಕೆ ಕಷ್ಟಪಡಬೇಕು?” ಎಂದು ಪ್ರಶ್ನಿಸಿದ್ದಾರೆ.

“ಸುಮನ್ ಅವರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿರಬಹುದು ಎಂದು ಅವರ ಕುಟುಂಬದ ವಕೀಲರು ಶಂಕಿಸಿದ್ದಾರೆ. “ಯಾರೋ ಪ್ರಿನ್ಸ್ ಅವರ ದಾಖಲೆಗಳನ್ನು ವಂಚನೆಯ ಮೂಲಕ ಬಳಸಿಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ನಾವು ಪೊಲೀಸ್ ಮತ್ತು ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 20ರಂದು ಸುಮನ್‌ ಅವರಿಗೆ ನೀಡಿದ ನೋಟಿಸ್‌ನಲ್ಲಿ, ಐ-ಟಿ ಇಲಾಖೆಯು ಒಟ್ಟು 49.24 ಕೋಟಿ ರೂಪಾಯಿ ಹಣಕಾಸು ವಹಿವಾಟಿನ ವಿವರವನ್ನು ಕೋರಿದೆ. 2022-23ನೇ ಹಣಕಾಸು ವರ್ಷದ ಬಿಲ್‌ಗಳು, ಖರೀದಿ ವೋಚರ್‌ಗಳು, ಸಾರಿಗೆ ದಾಖಲೆಗಳು ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಪ್ರಸ್ತುತಪಡಿಸಿವಂತೆ ಸೂಚಿಸಿದೆ.

ಉತ್ತರ ಪ್ರದೇಶದ ಅಲಿಗಢದ ಜ್ಯೂಸ್ ಮಾರಾಟಗಾರ ಎಂ.ಡಿ ರಹೀಸ್ ಎಂಬವರಿಗೂ ಸುಮನ್‌ ಅವರಂತೆ 7.5 ಕೋಟಿ ರೂಪಾಯಿಗೂ ಹೆಚ್ಚು ಜಿಎಸ್‌ಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದ್ದು, ಇದು ಅವರನ್ನು ಮತ್ತು ಅವರ ಕುಟುಂಬವನ್ನು ಸಂಕಷ್ಟಕ್ಕೆ ದೂಡಿದೆ.

“ಈ ನೋಟಿಸ್ ಏಕೆ ನೀಡಲಾಗಿದೆ ಎಂಬುವುದೇ ನನಗೆ ಗೊತ್ತಿಲ್ಲ. ನಾನು ಜ್ಯೂಸ್ ಮಾತ್ರ ಮಾರಾಟ ಮಾಡುತ್ತೇನೆ. ನಾನು ಇಷ್ಟೊಂದು ಹಣವನ್ನು ಎಂದಿಗೂ ನೋಡಿಲ್ಲ. ಈಗ ನಾನು ಏನು ಮಾಡಬೇಕು?” ರಹೀಸ್ ಪ್ರಶ್ನಿಸಿದ್ದಾರೆ.

“ಸರ್ಕಾರ ನನಗೆ ಸಹಾಯ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನು ಬಡವ. ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

2020-21ರಲ್ಲಿ ರಹೀಸ್ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ನಕಲಿ ವಹಿವಾಟುಗಳು ನಡೆದಿವೆ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ, ಅವರು ಸರ್ಕಾರಕ್ಕೆ 7,79,02,457 ರೂಪಾಯಿ ಜಿಎಸ್‌ಟಿ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

“ನಾವು ಐಟಿ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ನನ್ನ ವೈಯಕ್ತಿಕ ದಾಖಲೆಗಳನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದೀರಾ? ಎಂದು ಕೇಳಿದ್ದಾರೆ. ನಾನು ಅವುಗಳನ್ನು ಯಾರೊಂದಿಗೂ ಹಂಚಿಕೊಂಡಿಲ್ಲ ಎಂದು ಹೇಳಿದೆ” ಎಂದು ಬನ್ನಾ ದೇವಿ ಪೊಲೀಸ್ ಠಾಣೆ ವ್ಯಾಪ್ತಿಯ ತಾರ್ ವಾಲಿ ಗಲಿಯಲ್ಲಿ ವಾಸಿಸುವ ರಹೀಸ್ ಹೇಳಿದ್ದಾರೆ.

“ನಾವು ನಮ್ಮ ದಿನನಿತ್ಯದ ಊಟಕ್ಕೂ ಕಷ್ಟಪಡುತ್ತಿದ್ದೇವೆ… ನಮ್ಮ ಬಳಿ ಅಷ್ಟೊಂದು ಹಣವಿದ್ದರೆ, ನಮ್ಮ ಮಗ ಏಕೆ ಇಷ್ಟೊಂದು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತಿತ್ತು?” ಎಂದು ರಹೀಸ್ ತಾಯಿ ಪ್ರಶ್ನಿಸಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡಲು ರಹೀಸ್ ಅವರ ವೈಯಕ್ತಿಕ ದಾಖಲೆಗಳನ್ನು ವಂಚನೆಯಿಂದ ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

“ರಹೀಸ್ ಕೋಟ್ಯಾಧಿಪತಿಯಾಗಿದ್ದರೆ, ಅವರು ಜ್ಯೂಸ್ ಅಂಗಡಿ ನಡೆಸುತ್ತಿದ್ದರೇ? ಇದು ಖಂಡಿತವಾಗಿಯೂ ವಂಚನೆಯ ಪ್ರಕರಣವಾಗಿದೆ” ಎಂದು ಜ್ಯೂಸ್ ರಹೀಸ್ ಅವರ ಸ್ನೇಹಿತ ಸೊಹೈಲ್ ಹೇಳಿದ್ದಾರೆ. |

ಸೌಜನ್ಯ: ndtv.com

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...