Homeಮುಖಪುಟಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

- Advertisement -
- Advertisement -

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂಪಾಯಿ ಜಿಎಸ್‌ಟಿ ಬಾಕಿ ಇದೆ ಎಂದು ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿರುವ ಬಗ್ಗೆ ವರದಿಯಾಗಿದೆ.

ತಮ್ಮ ಕುಟುಂಬಗಳಲ್ಲಿ ಏಕೈಕ ಆದಾಯ ಗಳಿಸುವ ವ್ಯಕ್ತಿಗಳಾದ ಈ ಇಬ್ಬರು ಪುರುಷರು, ಐಟಿ ಇಲಾಖೆಯ ನೋಟಿಸ್‌ ನೋಡಿ ಆಘಾತಕ್ಕೊಳಗಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮೊಟ್ಟೆ ಮಾರಾಟಗಾರ ಪ್ರಿನ್ಸ್ ಸುಮನ್ ಅವರಿಗೆ ಸುಮಾರು 50 ಕೋಟಿ ರೂಪಾಯಿಗಳ ವ್ಯವಹಾರಕ್ಕಾಗಿ ನೋಟಿಸ್ ನೀಡಲಾಗಿದೆ. ಸರ್ಕಾರಕ್ಕೆ 6 ಕೋಟಿ ರೂಪಾಯಿ ಜಿಎಸ್‌ಟಿ ಪಾವತಿಸಲು ಬಾಕಿ ಇದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಪ್ರಿನ್ಸ್ ಎಂಟರ್‌ಪ್ರೈಸಸ್’ ಎಂಬ ಕಂಪನಿಯು 2022ರಲ್ಲಿ ದೆಹಲಿಯ ರಾಜ್ಯ ವಲಯ 3, ವಾರ್ಡ್ 33 ರಲ್ಲಿ ಸುಮನ್ ಅವರ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಈ ಕಂಪನಿಯು ಚರ್ಮ, ಮರ ಮತ್ತು ಕಬ್ಬಿಣದ ವ್ಯಾಪಾರದಲ್ಲಿ ತೊಡಗಿದ್ದು, ಕಳೆದ ಎರಡು ವರ್ಷಗಳಲ್ಲಿ ಬೃಹತ್ ವಹಿವಾಟುಗಳನ್ನು ನಡೆಸಿದೆ ಎಂದು ಐಟಿ ಇಲಾಖೆಯ ನೋಟಿಸ್‌ನಲ್ಲಿ ಹೇಳಲಾಗಿದೆ ಎಂದು ವರದಿ ತಿಳಿಸಿದೆ.

“ನಾನು ಗಾಡಿಯಲ್ಲಿಟ್ಟು ಮೊಟ್ಟೆ ಮಾರುವವ. ದೆಹಲಿಗೆ ಹೋಗಿಲ್ಲ, ಅಲ್ಲಿ ಕಂಪನಿ ಪ್ರಾರಂಭಿಸುವುದಂತೂ ಸಾಧ್ಯವೇ ಇಲ್ಲ” ಎಂದು ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಪಥಾರಿಯಾ ನಗರದಲ್ಲಿ ವಾಸಿಸುವ ಸುಮನ್ ಹೇಳಿದ್ದಾರೆ.

ಸಣ್ಣ ದಿನಸಿ ಅಂಗಡಿ ನಡೆಸುತ್ತಿರುವ ಸುಮನ್‌ ಅವರ ತಂದೆ ಅವರ ತಂದೆ ಧರ್ ಸುಮನ್, “ನಮ್ಮಲ್ಲಿ ನಿಜವಾಗಿಯೂ 50 ಕೋಟಿ ರೂಪಾಯಿ ಇದ್ದರೆ ದೈನಂದಿನ ಖರ್ಚುಗಳನ್ನು ಪೂರೈಸಲು ಏಕೆ ಕಷ್ಟಪಡಬೇಕು?” ಎಂದು ಪ್ರಶ್ನಿಸಿದ್ದಾರೆ.

“ಸುಮನ್ ಅವರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿರಬಹುದು ಎಂದು ಅವರ ಕುಟುಂಬದ ವಕೀಲರು ಶಂಕಿಸಿದ್ದಾರೆ. “ಯಾರೋ ಪ್ರಿನ್ಸ್ ಅವರ ದಾಖಲೆಗಳನ್ನು ವಂಚನೆಯ ಮೂಲಕ ಬಳಸಿಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ನಾವು ಪೊಲೀಸ್ ಮತ್ತು ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 20ರಂದು ಸುಮನ್‌ ಅವರಿಗೆ ನೀಡಿದ ನೋಟಿಸ್‌ನಲ್ಲಿ, ಐ-ಟಿ ಇಲಾಖೆಯು ಒಟ್ಟು 49.24 ಕೋಟಿ ರೂಪಾಯಿ ಹಣಕಾಸು ವಹಿವಾಟಿನ ವಿವರವನ್ನು ಕೋರಿದೆ. 2022-23ನೇ ಹಣಕಾಸು ವರ್ಷದ ಬಿಲ್‌ಗಳು, ಖರೀದಿ ವೋಚರ್‌ಗಳು, ಸಾರಿಗೆ ದಾಖಲೆಗಳು ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಪ್ರಸ್ತುತಪಡಿಸಿವಂತೆ ಸೂಚಿಸಿದೆ.

ಉತ್ತರ ಪ್ರದೇಶದ ಅಲಿಗಢದ ಜ್ಯೂಸ್ ಮಾರಾಟಗಾರ ಎಂ.ಡಿ ರಹೀಸ್ ಎಂಬವರಿಗೂ ಸುಮನ್‌ ಅವರಂತೆ 7.5 ಕೋಟಿ ರೂಪಾಯಿಗೂ ಹೆಚ್ಚು ಜಿಎಸ್‌ಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದ್ದು, ಇದು ಅವರನ್ನು ಮತ್ತು ಅವರ ಕುಟುಂಬವನ್ನು ಸಂಕಷ್ಟಕ್ಕೆ ದೂಡಿದೆ.

“ಈ ನೋಟಿಸ್ ಏಕೆ ನೀಡಲಾಗಿದೆ ಎಂಬುವುದೇ ನನಗೆ ಗೊತ್ತಿಲ್ಲ. ನಾನು ಜ್ಯೂಸ್ ಮಾತ್ರ ಮಾರಾಟ ಮಾಡುತ್ತೇನೆ. ನಾನು ಇಷ್ಟೊಂದು ಹಣವನ್ನು ಎಂದಿಗೂ ನೋಡಿಲ್ಲ. ಈಗ ನಾನು ಏನು ಮಾಡಬೇಕು?” ರಹೀಸ್ ಪ್ರಶ್ನಿಸಿದ್ದಾರೆ.

“ಸರ್ಕಾರ ನನಗೆ ಸಹಾಯ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನು ಬಡವ. ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

2020-21ರಲ್ಲಿ ರಹೀಸ್ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ನಕಲಿ ವಹಿವಾಟುಗಳು ನಡೆದಿವೆ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ, ಅವರು ಸರ್ಕಾರಕ್ಕೆ 7,79,02,457 ರೂಪಾಯಿ ಜಿಎಸ್‌ಟಿ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

“ನಾವು ಐಟಿ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ನನ್ನ ವೈಯಕ್ತಿಕ ದಾಖಲೆಗಳನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದೀರಾ? ಎಂದು ಕೇಳಿದ್ದಾರೆ. ನಾನು ಅವುಗಳನ್ನು ಯಾರೊಂದಿಗೂ ಹಂಚಿಕೊಂಡಿಲ್ಲ ಎಂದು ಹೇಳಿದೆ” ಎಂದು ಬನ್ನಾ ದೇವಿ ಪೊಲೀಸ್ ಠಾಣೆ ವ್ಯಾಪ್ತಿಯ ತಾರ್ ವಾಲಿ ಗಲಿಯಲ್ಲಿ ವಾಸಿಸುವ ರಹೀಸ್ ಹೇಳಿದ್ದಾರೆ.

“ನಾವು ನಮ್ಮ ದಿನನಿತ್ಯದ ಊಟಕ್ಕೂ ಕಷ್ಟಪಡುತ್ತಿದ್ದೇವೆ… ನಮ್ಮ ಬಳಿ ಅಷ್ಟೊಂದು ಹಣವಿದ್ದರೆ, ನಮ್ಮ ಮಗ ಏಕೆ ಇಷ್ಟೊಂದು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತಿತ್ತು?” ಎಂದು ರಹೀಸ್ ತಾಯಿ ಪ್ರಶ್ನಿಸಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡಲು ರಹೀಸ್ ಅವರ ವೈಯಕ್ತಿಕ ದಾಖಲೆಗಳನ್ನು ವಂಚನೆಯಿಂದ ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

“ರಹೀಸ್ ಕೋಟ್ಯಾಧಿಪತಿಯಾಗಿದ್ದರೆ, ಅವರು ಜ್ಯೂಸ್ ಅಂಗಡಿ ನಡೆಸುತ್ತಿದ್ದರೇ? ಇದು ಖಂಡಿತವಾಗಿಯೂ ವಂಚನೆಯ ಪ್ರಕರಣವಾಗಿದೆ” ಎಂದು ಜ್ಯೂಸ್ ರಹೀಸ್ ಅವರ ಸ್ನೇಹಿತ ಸೊಹೈಲ್ ಹೇಳಿದ್ದಾರೆ. |

ಸೌಜನ್ಯ: ndtv.com

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....