Homeಮುಖಪುಟಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

- Advertisement -
- Advertisement -

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂಪಾಯಿ ಜಿಎಸ್‌ಟಿ ಬಾಕಿ ಇದೆ ಎಂದು ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿರುವ ಬಗ್ಗೆ ವರದಿಯಾಗಿದೆ.

ತಮ್ಮ ಕುಟುಂಬಗಳಲ್ಲಿ ಏಕೈಕ ಆದಾಯ ಗಳಿಸುವ ವ್ಯಕ್ತಿಗಳಾದ ಈ ಇಬ್ಬರು ಪುರುಷರು, ಐಟಿ ಇಲಾಖೆಯ ನೋಟಿಸ್‌ ನೋಡಿ ಆಘಾತಕ್ಕೊಳಗಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮೊಟ್ಟೆ ಮಾರಾಟಗಾರ ಪ್ರಿನ್ಸ್ ಸುಮನ್ ಅವರಿಗೆ ಸುಮಾರು 50 ಕೋಟಿ ರೂಪಾಯಿಗಳ ವ್ಯವಹಾರಕ್ಕಾಗಿ ನೋಟಿಸ್ ನೀಡಲಾಗಿದೆ. ಸರ್ಕಾರಕ್ಕೆ 6 ಕೋಟಿ ರೂಪಾಯಿ ಜಿಎಸ್‌ಟಿ ಪಾವತಿಸಲು ಬಾಕಿ ಇದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಪ್ರಿನ್ಸ್ ಎಂಟರ್‌ಪ್ರೈಸಸ್’ ಎಂಬ ಕಂಪನಿಯು 2022ರಲ್ಲಿ ದೆಹಲಿಯ ರಾಜ್ಯ ವಲಯ 3, ವಾರ್ಡ್ 33 ರಲ್ಲಿ ಸುಮನ್ ಅವರ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಈ ಕಂಪನಿಯು ಚರ್ಮ, ಮರ ಮತ್ತು ಕಬ್ಬಿಣದ ವ್ಯಾಪಾರದಲ್ಲಿ ತೊಡಗಿದ್ದು, ಕಳೆದ ಎರಡು ವರ್ಷಗಳಲ್ಲಿ ಬೃಹತ್ ವಹಿವಾಟುಗಳನ್ನು ನಡೆಸಿದೆ ಎಂದು ಐಟಿ ಇಲಾಖೆಯ ನೋಟಿಸ್‌ನಲ್ಲಿ ಹೇಳಲಾಗಿದೆ ಎಂದು ವರದಿ ತಿಳಿಸಿದೆ.

“ನಾನು ಗಾಡಿಯಲ್ಲಿಟ್ಟು ಮೊಟ್ಟೆ ಮಾರುವವ. ದೆಹಲಿಗೆ ಹೋಗಿಲ್ಲ, ಅಲ್ಲಿ ಕಂಪನಿ ಪ್ರಾರಂಭಿಸುವುದಂತೂ ಸಾಧ್ಯವೇ ಇಲ್ಲ” ಎಂದು ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಪಥಾರಿಯಾ ನಗರದಲ್ಲಿ ವಾಸಿಸುವ ಸುಮನ್ ಹೇಳಿದ್ದಾರೆ.

ಸಣ್ಣ ದಿನಸಿ ಅಂಗಡಿ ನಡೆಸುತ್ತಿರುವ ಸುಮನ್‌ ಅವರ ತಂದೆ ಅವರ ತಂದೆ ಧರ್ ಸುಮನ್, “ನಮ್ಮಲ್ಲಿ ನಿಜವಾಗಿಯೂ 50 ಕೋಟಿ ರೂಪಾಯಿ ಇದ್ದರೆ ದೈನಂದಿನ ಖರ್ಚುಗಳನ್ನು ಪೂರೈಸಲು ಏಕೆ ಕಷ್ಟಪಡಬೇಕು?” ಎಂದು ಪ್ರಶ್ನಿಸಿದ್ದಾರೆ.

“ಸುಮನ್ ಅವರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿರಬಹುದು ಎಂದು ಅವರ ಕುಟುಂಬದ ವಕೀಲರು ಶಂಕಿಸಿದ್ದಾರೆ. “ಯಾರೋ ಪ್ರಿನ್ಸ್ ಅವರ ದಾಖಲೆಗಳನ್ನು ವಂಚನೆಯ ಮೂಲಕ ಬಳಸಿಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ನಾವು ಪೊಲೀಸ್ ಮತ್ತು ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 20ರಂದು ಸುಮನ್‌ ಅವರಿಗೆ ನೀಡಿದ ನೋಟಿಸ್‌ನಲ್ಲಿ, ಐ-ಟಿ ಇಲಾಖೆಯು ಒಟ್ಟು 49.24 ಕೋಟಿ ರೂಪಾಯಿ ಹಣಕಾಸು ವಹಿವಾಟಿನ ವಿವರವನ್ನು ಕೋರಿದೆ. 2022-23ನೇ ಹಣಕಾಸು ವರ್ಷದ ಬಿಲ್‌ಗಳು, ಖರೀದಿ ವೋಚರ್‌ಗಳು, ಸಾರಿಗೆ ದಾಖಲೆಗಳು ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಪ್ರಸ್ತುತಪಡಿಸಿವಂತೆ ಸೂಚಿಸಿದೆ.

ಉತ್ತರ ಪ್ರದೇಶದ ಅಲಿಗಢದ ಜ್ಯೂಸ್ ಮಾರಾಟಗಾರ ಎಂ.ಡಿ ರಹೀಸ್ ಎಂಬವರಿಗೂ ಸುಮನ್‌ ಅವರಂತೆ 7.5 ಕೋಟಿ ರೂಪಾಯಿಗೂ ಹೆಚ್ಚು ಜಿಎಸ್‌ಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದ್ದು, ಇದು ಅವರನ್ನು ಮತ್ತು ಅವರ ಕುಟುಂಬವನ್ನು ಸಂಕಷ್ಟಕ್ಕೆ ದೂಡಿದೆ.

“ಈ ನೋಟಿಸ್ ಏಕೆ ನೀಡಲಾಗಿದೆ ಎಂಬುವುದೇ ನನಗೆ ಗೊತ್ತಿಲ್ಲ. ನಾನು ಜ್ಯೂಸ್ ಮಾತ್ರ ಮಾರಾಟ ಮಾಡುತ್ತೇನೆ. ನಾನು ಇಷ್ಟೊಂದು ಹಣವನ್ನು ಎಂದಿಗೂ ನೋಡಿಲ್ಲ. ಈಗ ನಾನು ಏನು ಮಾಡಬೇಕು?” ರಹೀಸ್ ಪ್ರಶ್ನಿಸಿದ್ದಾರೆ.

“ಸರ್ಕಾರ ನನಗೆ ಸಹಾಯ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನು ಬಡವ. ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

2020-21ರಲ್ಲಿ ರಹೀಸ್ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ನಕಲಿ ವಹಿವಾಟುಗಳು ನಡೆದಿವೆ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ, ಅವರು ಸರ್ಕಾರಕ್ಕೆ 7,79,02,457 ರೂಪಾಯಿ ಜಿಎಸ್‌ಟಿ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

“ನಾವು ಐಟಿ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ನನ್ನ ವೈಯಕ್ತಿಕ ದಾಖಲೆಗಳನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದೀರಾ? ಎಂದು ಕೇಳಿದ್ದಾರೆ. ನಾನು ಅವುಗಳನ್ನು ಯಾರೊಂದಿಗೂ ಹಂಚಿಕೊಂಡಿಲ್ಲ ಎಂದು ಹೇಳಿದೆ” ಎಂದು ಬನ್ನಾ ದೇವಿ ಪೊಲೀಸ್ ಠಾಣೆ ವ್ಯಾಪ್ತಿಯ ತಾರ್ ವಾಲಿ ಗಲಿಯಲ್ಲಿ ವಾಸಿಸುವ ರಹೀಸ್ ಹೇಳಿದ್ದಾರೆ.

“ನಾವು ನಮ್ಮ ದಿನನಿತ್ಯದ ಊಟಕ್ಕೂ ಕಷ್ಟಪಡುತ್ತಿದ್ದೇವೆ… ನಮ್ಮ ಬಳಿ ಅಷ್ಟೊಂದು ಹಣವಿದ್ದರೆ, ನಮ್ಮ ಮಗ ಏಕೆ ಇಷ್ಟೊಂದು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತಿತ್ತು?” ಎಂದು ರಹೀಸ್ ತಾಯಿ ಪ್ರಶ್ನಿಸಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡಲು ರಹೀಸ್ ಅವರ ವೈಯಕ್ತಿಕ ದಾಖಲೆಗಳನ್ನು ವಂಚನೆಯಿಂದ ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

“ರಹೀಸ್ ಕೋಟ್ಯಾಧಿಪತಿಯಾಗಿದ್ದರೆ, ಅವರು ಜ್ಯೂಸ್ ಅಂಗಡಿ ನಡೆಸುತ್ತಿದ್ದರೇ? ಇದು ಖಂಡಿತವಾಗಿಯೂ ವಂಚನೆಯ ಪ್ರಕರಣವಾಗಿದೆ” ಎಂದು ಜ್ಯೂಸ್ ರಹೀಸ್ ಅವರ ಸ್ನೇಹಿತ ಸೊಹೈಲ್ ಹೇಳಿದ್ದಾರೆ. |

ಸೌಜನ್ಯ: ndtv.com

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...