Homeಮುಖಪುಟ100 ರೂ ಲಂಚ ಕೊಡದ ಕಾರಣಕ್ಕೆ ಮೊಟ್ಟೆ ಮಾರುತ್ತಿದ್ದ ಬಾಲಕನ ತಳ್ಳುಗಾಡಿ ಕೆಡವಿದ ಅಧಿಕಾರಿಗಳು!

100 ರೂ ಲಂಚ ಕೊಡದ ಕಾರಣಕ್ಕೆ ಮೊಟ್ಟೆ ಮಾರುತ್ತಿದ್ದ ಬಾಲಕನ ತಳ್ಳುಗಾಡಿ ಕೆಡವಿದ ಅಧಿಕಾರಿಗಳು!

- Advertisement -
- Advertisement -

ತಳ್ಳುಗಾಡಿಯಲ್ಲಿದ್ದ ನೂರಾರು ಮೊಟ್ಟೆಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ. ಕುಪಿತಗೊಂಡ 14 ವರ್ಷದ ಬಾಲಕನೊಬ್ಬ ಇಬ್ಬರು ಅಧಿಕಾರಿಗಳನ್ನು ಪ್ರಶ್ನಿಸುತ್ತಿರುವ 30 ಸೆಕೆಂಡ್‌ಗಳ ವಿಡಿಯೋವೊಂದು ವೈರಲ್ ಆಗಿದ್ದು ನೋಡುಗರ ಮನಕರಗಿಸುವಂತಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ 100 ರೂ ಲಂಚ ಕೊಡದ ಕಾರಣಕ್ಕೆ ಮೊಟ್ಟೆ ಮಾರುತ್ತಿದ್ದ ಬಾಲಕನ ತಳ್ಳುಗಾಡಿಯನ್ನು ಕೆಡವಿದ ಅಧಿಕಾರಿಗಳ ಅಮಾನವೀಯ ವರ್ತನೆಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಹೆಚ್ಚುತ್ತಿರುವ ಕರೊನಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ರಸ್ತೆ ಬದಿ ವ್ಯಾಪಾರಿಗಳಿಗೆ ಲೆಫ್ಟ್ -ರೈಟ್ ನಿಯಮ ಜಾರಿಗೊಳಿಸಿದೆ. ಅದರಂತೆ ಒಂದು ದಿನ ಸಂಪೂರ್ಣವಾಗಿ ಎಡಬದಿಯಲ್ಲಿ ಮಾತ್ರ ಮಾರಬೇಕು ಮತ್ತು ಮರುದಿನ ಬಲಬದಿಯಲ್ಲಿ ಮಾತ್ರ ಮಾರಟ ಮಾಡಬೇಕಿದೆ. ಇದನ್ನು ಉಲ್ಲಂಘಿಸಿದ ಆರೋಪದಲ್ಲಿ ತಳ್ಳುಗಾಡಿಯಲ್ಲಿ ಮೊಟ್ಟೆ ಮಾರುತ್ತಿದ್ದ 14 ವರ್ಷದ ಯುವಕನಿಂದ ಸ್ಥಳೀಯ ಅಧಿಕಾರಿಗಳು 100 ರೂ ಲಂಚ ಕೇಳಿದ್ದಾರೆ. ವ್ಯಾಪಾರ ಕುಸಿತದಿಂದ ಲಂಚ ಕೊಡಲು ಯುವಕ ನಿರಾಕರಿಸಿದ್ದರಿಂದ ಇಡೀ ತಳ್ಳುಗಾಡಿಯನ್ನೇ ಕೆಡವಿ ನೂರಾರು ಮೊಟ್ಟೆಗಳನ್ನು ನಾಶಪಡಿಸಿರುವ ಅಮಾನವೀಯ ಘಟನೆ ಜರುಗಿದೆ.

ಲಾಕ್‌ಡೌನ್ ಆರಂಭವಾದಾಗಿನಿಂದ ನನ್ನ ವ್ಯಾಪಾರ ಕುಸಿದಿದೆ. ಹಳೆ ಸಾಲವನ್ನೇ ನಾನು ಇನ್ನೂ ತೀರಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಎಲ್ಲಾ ಮೊಟ್ಟೆಗಳನ್ನು ನಾಶಪಡಿಸಿ ನನ್ನ ಬದುಕನ್ನು ಹಾಳು ಮಾಡಿದ್ದಾರೆ ಎಂದು ಯುವಕ ಕಣ್ಣೀರಾಗಿದ್ದಾನೆ.

ಈ ಲೆಫ್ಟ್ -ರೈಟ್ ನಿಯಮವನ್ನು ಬಿಜೆಪಿಯ ಹಿರಿಯ ಮುಖಂಡ ಭನ್ವಾರ್ ಸಿಂಗ್ ಶೇಖಾವತ್ ಸೇರಿದಂತೆ ಹಲವು ನಾಯಕರು ವಿರೋಧಿಸಿದ್ದಾರೆ. ಮಹೇಂದ್ರ ಹೋರ್ದಿಯ ಎಂಬ ಶಾಸಕ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ಗೆ ಪತ್ರ ಬರೆದು ನಿಯಮ ರದ್ದುಗೊಳಿಸಲು ಕೋರಿದ್ದಾರೆ.

ಯುವಕನ ತಳ್ಳುಗಾಡಿ ಕೆಡವಿದ ಪ್ರಕರಣ ತೀವ್ರ ರೂಪ ಪಡೆದುಕೊಂಡಿದ್ದು, ಆ ಯುವಕನಿಗೆ ಸ್ಥಳೀಯ ಸಂಸ್ಥೆ ಪರಿಹಾರ ಕಟ್ಟಿಕೊಡಬೇಕು. ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಕೊಡಬಾರದು. ಇಲ್ಲದಿದ್ದಲ್ಲಿ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಶಾಸಕ ಸಂಜಯ್ ಶುಕ್ಲಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಒಳಗೆ ಜನರಿದ್ದರೂ ಮನೆ ಬಾಗಿಲುಗಳನ್ನೇ ಸೀಲ್‌ಡೌನ್ ಮಾಡಿದ ಬಿಬಿಎಂಪಿ: ಜನಾಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಆಯುಕ್ತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...