Homeಮುಖಪುಟ100 ರೂ ಲಂಚ ಕೊಡದ ಕಾರಣಕ್ಕೆ ಮೊಟ್ಟೆ ಮಾರುತ್ತಿದ್ದ ಬಾಲಕನ ತಳ್ಳುಗಾಡಿ ಕೆಡವಿದ ಅಧಿಕಾರಿಗಳು!

100 ರೂ ಲಂಚ ಕೊಡದ ಕಾರಣಕ್ಕೆ ಮೊಟ್ಟೆ ಮಾರುತ್ತಿದ್ದ ಬಾಲಕನ ತಳ್ಳುಗಾಡಿ ಕೆಡವಿದ ಅಧಿಕಾರಿಗಳು!

- Advertisement -
- Advertisement -

ತಳ್ಳುಗಾಡಿಯಲ್ಲಿದ್ದ ನೂರಾರು ಮೊಟ್ಟೆಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ. ಕುಪಿತಗೊಂಡ 14 ವರ್ಷದ ಬಾಲಕನೊಬ್ಬ ಇಬ್ಬರು ಅಧಿಕಾರಿಗಳನ್ನು ಪ್ರಶ್ನಿಸುತ್ತಿರುವ 30 ಸೆಕೆಂಡ್‌ಗಳ ವಿಡಿಯೋವೊಂದು ವೈರಲ್ ಆಗಿದ್ದು ನೋಡುಗರ ಮನಕರಗಿಸುವಂತಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ 100 ರೂ ಲಂಚ ಕೊಡದ ಕಾರಣಕ್ಕೆ ಮೊಟ್ಟೆ ಮಾರುತ್ತಿದ್ದ ಬಾಲಕನ ತಳ್ಳುಗಾಡಿಯನ್ನು ಕೆಡವಿದ ಅಧಿಕಾರಿಗಳ ಅಮಾನವೀಯ ವರ್ತನೆಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಹೆಚ್ಚುತ್ತಿರುವ ಕರೊನಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ರಸ್ತೆ ಬದಿ ವ್ಯಾಪಾರಿಗಳಿಗೆ ಲೆಫ್ಟ್ -ರೈಟ್ ನಿಯಮ ಜಾರಿಗೊಳಿಸಿದೆ. ಅದರಂತೆ ಒಂದು ದಿನ ಸಂಪೂರ್ಣವಾಗಿ ಎಡಬದಿಯಲ್ಲಿ ಮಾತ್ರ ಮಾರಬೇಕು ಮತ್ತು ಮರುದಿನ ಬಲಬದಿಯಲ್ಲಿ ಮಾತ್ರ ಮಾರಟ ಮಾಡಬೇಕಿದೆ. ಇದನ್ನು ಉಲ್ಲಂಘಿಸಿದ ಆರೋಪದಲ್ಲಿ ತಳ್ಳುಗಾಡಿಯಲ್ಲಿ ಮೊಟ್ಟೆ ಮಾರುತ್ತಿದ್ದ 14 ವರ್ಷದ ಯುವಕನಿಂದ ಸ್ಥಳೀಯ ಅಧಿಕಾರಿಗಳು 100 ರೂ ಲಂಚ ಕೇಳಿದ್ದಾರೆ. ವ್ಯಾಪಾರ ಕುಸಿತದಿಂದ ಲಂಚ ಕೊಡಲು ಯುವಕ ನಿರಾಕರಿಸಿದ್ದರಿಂದ ಇಡೀ ತಳ್ಳುಗಾಡಿಯನ್ನೇ ಕೆಡವಿ ನೂರಾರು ಮೊಟ್ಟೆಗಳನ್ನು ನಾಶಪಡಿಸಿರುವ ಅಮಾನವೀಯ ಘಟನೆ ಜರುಗಿದೆ.

ಲಾಕ್‌ಡೌನ್ ಆರಂಭವಾದಾಗಿನಿಂದ ನನ್ನ ವ್ಯಾಪಾರ ಕುಸಿದಿದೆ. ಹಳೆ ಸಾಲವನ್ನೇ ನಾನು ಇನ್ನೂ ತೀರಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಎಲ್ಲಾ ಮೊಟ್ಟೆಗಳನ್ನು ನಾಶಪಡಿಸಿ ನನ್ನ ಬದುಕನ್ನು ಹಾಳು ಮಾಡಿದ್ದಾರೆ ಎಂದು ಯುವಕ ಕಣ್ಣೀರಾಗಿದ್ದಾನೆ.

ಈ ಲೆಫ್ಟ್ -ರೈಟ್ ನಿಯಮವನ್ನು ಬಿಜೆಪಿಯ ಹಿರಿಯ ಮುಖಂಡ ಭನ್ವಾರ್ ಸಿಂಗ್ ಶೇಖಾವತ್ ಸೇರಿದಂತೆ ಹಲವು ನಾಯಕರು ವಿರೋಧಿಸಿದ್ದಾರೆ. ಮಹೇಂದ್ರ ಹೋರ್ದಿಯ ಎಂಬ ಶಾಸಕ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ಗೆ ಪತ್ರ ಬರೆದು ನಿಯಮ ರದ್ದುಗೊಳಿಸಲು ಕೋರಿದ್ದಾರೆ.

ಯುವಕನ ತಳ್ಳುಗಾಡಿ ಕೆಡವಿದ ಪ್ರಕರಣ ತೀವ್ರ ರೂಪ ಪಡೆದುಕೊಂಡಿದ್ದು, ಆ ಯುವಕನಿಗೆ ಸ್ಥಳೀಯ ಸಂಸ್ಥೆ ಪರಿಹಾರ ಕಟ್ಟಿಕೊಡಬೇಕು. ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಕೊಡಬಾರದು. ಇಲ್ಲದಿದ್ದಲ್ಲಿ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಶಾಸಕ ಸಂಜಯ್ ಶುಕ್ಲಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಒಳಗೆ ಜನರಿದ್ದರೂ ಮನೆ ಬಾಗಿಲುಗಳನ್ನೇ ಸೀಲ್‌ಡೌನ್ ಮಾಡಿದ ಬಿಬಿಎಂಪಿ: ಜನಾಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಆಯುಕ್ತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...