Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...