Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...