Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....