Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...