Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...