Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...